Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''50ಕ್ಕೂ ಅಧಿಕ ವಧುಗಳಿಂದ...

''50ಕ್ಕೂ ಅಧಿಕ ವಧುಗಳಿಂದ ತಿರಸ್ಕಾರಗೊಂಡಿದ್ದೇನೆ, ರೈತನಾಗಿದ್ದಕ್ಕೆ ಹುಡುಗಿ ಕೊಡುತ್ತಿಲ್ಲ''

ಸಚಿವ ಯೋಗೇಶ್ವರ್ ಗೆ ಕರೆ ಮಾಡಿ ಅಳಲು ತೋಡಿಕೊಂಡ ಯುವಕ

ವಾರ್ತಾಭಾರತಿವಾರ್ತಾಭಾರತಿ18 Feb 2021 10:11 PM IST
share
50ಕ್ಕೂ ಅಧಿಕ ವಧುಗಳಿಂದ ತಿರಸ್ಕಾರಗೊಂಡಿದ್ದೇನೆ, ರೈತನಾಗಿದ್ದಕ್ಕೆ ಹುಡುಗಿ ಕೊಡುತ್ತಿಲ್ಲ

ಮಳವಳ್ಳಿ, ಫೆ.18: ‘ಕೃಷಿ ಮಾಡುತ್ತಿರುವ ಯುವ ರೈತರನ್ನು ವಿವಾಹವಾಗುವವರಿಗೆ ಸರಕಾರದಿಂದ ಜೀವನ ಭದ್ರತೆಯ ಯೋಜನೆ ಕೊಡಿಸಿ ಸರ್’ ಎಂದು ತಾಲೂಕಿನ ಯುವ ರೈತರೊಬ್ಬರು ಪ್ರವಾಸೋದ್ಯಮ ಸಚಿವ ಯೋಗೇಶ್ವರ್ ಅವರಿಗೆ ದೂರವಾಣಿ ಕರೆಮಾಡಿ ಮನವಿ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಡಿಯೊ ವೈರಲ್ ಆಗಿದೆ.

ತಾಲೂಕಿನ ಪ್ರವೀಣ ಎಂಬ ಯುವಕ ಸಚಿವರಿಗೆ ಕರೆ ಮಾಡಿ ಸರ್ ‘ನಾನೊಬ್ಬ ರೈತ. ರೇಷ್ಮೆ ಹುಳು ಸಾಕಣೆ ಮಾಡಿಕೊಂಡು ಉತ್ತಮವಾದ ಜೀವನ ನಡೆಸುತ್ತಿದ್ದೇನೆ. ನನಗೀಗ 28 ವರ್ಷ ವಯಸ್ಸಾಗಿದೆ. ವಿವಾಹವಾಗಲೆಂದು ಮೂರು ವರ್ಷಗಳಿಂದ ಸಂಪ್ರದಾಯದಂತೆ ಹಿರಿಯರ ಜೊತೆಗೆ ಹೋಗಿ ಹುಡುಗಿ ನೋಡುತ್ತಿದ್ದೇನೆ. ಇದುವರೆಗೆ ಸುಮಾರು 50ಕ್ಕೂ ಅಧಿಕ ವಧು ಅನ್ವೇಷಣೆಯಾಗಿದೆ. ಆದರೆ ಹೋದಲೆಲ್ಲ ಕೃಷಿ ಮಾಡುವವರಿಗೆ ಹುಡುಗಿ ಕೊಡುವುದಿಲ್ಲ ಎಂದು ತಿರಸ್ಕರಿಸಿದ್ದಾರೆ. ಅಲ್ಲದೆ, ಕೆಲವೆಡೆಯಂತೂ ರೈತ ಎಂದರೆ ಮನೆಯೊಳಗೂ ಸಹ ಸೇರಿಸಿಕೊಳ್ಳುವುದಿಲ್ಲ ಎಂದು ತಮ್ಮ ಅನುಭವ, ಆತಂಕವನ್ನು ಹೇಳಿಕೊಂಡಿದ್ದಾರೆ.

ಪ್ರಸ್ತುತ ಹಳ್ಳಿಗಳಲ್ಲಿ ವ್ಯವಸಾಯದಲ್ಲಿ ಉತ್ತಮ ಆದಾಯವಿದೆ. ಆರ್ಥಿಕವಾಗಿ ಸದೃಢವಾಗಿದ್ದರೂ ಕೆಲವು ಕುಟುಂಬದ ಹಿರಿಯರು ತಮ್ಮ ಗಂಡು ಮಕ್ಕಳಿಗೆ ಮಧುವೆ ಮಾಡುವ ಸಲುವಾಗಿ ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಿಸಿದ್ದಾರೆ. ಹೀಗಾದರೆ ರೈತರ ಮಕ್ಕಳ ಗತಿ ಏನು ಸರ್ ಎಂದು ಸಚಿವರನ್ನು ಪ್ರಶ್ನಿಸಿದ್ದಾನೆ. ಈತನ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಂಡ ಸಚಿವರು ರೈತನಿಗೆ ಹುಡುಗಿ ಕೊಡುವಂತೆ ಹೆಣ್ಣು ಹೆತ್ತವರ ಮನ ಪರಿವರ್ತನೆ ಮಾಡಲು ಸರಕಾರದಿಂದ ಏನು ಮಾಡಬೇಕು ಎಂದು ನೀನೇ ಒಂದು ಸಲಹೆ ನೀಡು ಎಂದು ಯುವಕನಿಗೆ ಮರು ಪಶ್ನೆ ಕೇಳಿದ್ದಾರೆ. ಅಂತರ್ಜಾತಿ ವಿವಾಹವಾದವರಿಗೆ ಸರಕಾರದಿಂದ ಹಣ ನೀಡುತ್ತೀರಿ. ಅದ್ಯಾವುದೋ ಭಾಗ್ಯಗಳನ್ನು ಸಿಎಂ ಯಡಿಯೂರಪ್ಪ ಹೆಣ್ಣು ಮಕ್ಕಳಿಗೆ ಕೊಟ್ಟಿದ್ದಾರಲ್ಲಾ ಸರ್.. ಅದೇ ರೀತಿ ಕೃಷಿ ಮಾಡುವ ಯುವ ರೈತನನ್ನು ವಿವಾಹವಾಗುವವರಿಗೆ ಹಾಗೂ ಹುಟ್ಟುವ ಮಕ್ಕಳಿಗೆ ಜೀವನ ಭದ್ರತೆಯ ಬಾಂಡ್‌ಗಳನ್ನು ಸಿಎಂಗೆ ಹೇಳಿ ಕೊಡಿಸಿ ಎಂದು ಮನವಿ ಮಾಡಿಕೊಂಡನು.

ಇದಕ್ಕೆ ಸಚಿವ ಯೋಗೇಶ್ವರ್ ಉತ್ತರಿಸಿ, ನೀನು ಹೇಳಿರುವುದೆಲ್ಲ ಸತ್ಯವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಸರಕಾರದ ಗಮನಕ್ಕೆ ತರುವುದಾಗಿ ಯುವಕನಿಗೆ ಭರವಸೆ ನೀಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X