Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಜೂರು ಉರೂಸ್ ಗೆ ಚಾಲನೆ, ಸನ್ಮಾನ...

ಕಾಜೂರು ಉರೂಸ್ ಗೆ ಚಾಲನೆ, ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ19 Feb 2021 9:35 PM IST
share
ಕಾಜೂರು ಉರೂಸ್ ಗೆ ಚಾಲನೆ, ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ : ತಂತ್ರಜ್ಞಾನ ಮತ್ತು ಅಭಿವೃದ್ಧಿಯ ವೇಗದ ಮಧ್ಯೆ ಮಾನವೀಯತೆ ಮರೀಚಿಕೆಯಾಗುತ್ತಿದ್ದು, ತಾಯಿ ಮಕ್ಕಳನ್ನು, ಪತಿ-ಪತ್ನಿಯನ್ನು ಪರಸ್ಪರ ಕತ್ತು ಕೊಯ್ಯುವ ಸನ್ನಿವೇಶಗಳಿಗೆ ಸಾಕ್ಷಿಯಾಗುತ್ತಿದ್ದೇವೆ. ಅಲ್ಲಾಹನ ಪ್ರೀತಿಪಾತ್ರರಾಗಿದ್ದ ಔಲಿಯಾಗಳು ಆತ್ಮಶುದ್ಧಿಯಿಂದ ಜೀವಿಸಿದ್ದು, ಅವರ ನೋಟ ನಮ್ಮ ಕಡೆಗೆ ಇರಬೇಕಾದರೆ ಮೂಢನಂಬಿಕೆ ರಹಿತ ಹೃದಯ ಶುದ್ಧಿ ನಮ್ಮದಾಗಬೇಕಾಗಿದೆ ಎಂದು ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಕೂರತ್ ತಂಙಳ್ ಹೇಳಿದರು.

ಅವರು ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಮಹಾಸಂಭ್ರಮವನ್ನು ಶುಕ್ರವಾರ ಉದ್ಘಾಟಿಸಿ, ಬಳಿಕ‌ ನಡೆದ ಸನ್ಮಾನವನ್ನು ಸ್ವೀಕರಿಸಿ  ಮಾತನಾಡಿದರು.

ಸಭಾ ಕಾರ್ಯಕ್ರಮ ಉದ್ಘಾಟಿಸಿದ ಕಾಜೂರು ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ‌ ಸಯ್ಯಿದ್ ಕಾಜೂರು ತ‌ಂಙಳ್ ಮಾತನಾಡಿ, ಕಣ್ಣಿಗೆ ಕಾಣದ ವೈರಸ್ ಅಭಿವೃದ್ಧಿ ಹೊಂದಿದ ದೇಶಗಳನ್ನೂ ಸೇರಿದಂತೆ ಮನುಷ್ಯರನ್ನು ನಿಯಂತ್ರಿಸಿದ ರೀತಿ ಆಶ್ಚರ್ಯ ತಂದಿದೆ. ಆದ್ದರಿಂದ ನಮ್ಮ ನಡೆಯ ಬಗ್ಗೆ ಎಚ್ವರ ವಹಿಸಿ ಮುನ್ನಡೆಯಬೇಕಿದೆ.‌ ಈ ‌ಜಗತ್ತು ಅಲ್ಲಾಹನ‌ ನಿಯಂತ್ರಣದಲ್ಲಿದೆ ಎಂಬುದನ್ನು ಮರೆತು ನಡೆಯಬಾರದು ಎಂದು ಎಚ್ಚರಿಸಿದರು.

ಕಾಜೂರು‌ ಮುದರ್ರಿಸ್ ಕೆ.ಎಚ್ ಸಿರಾಜುದ್ದೀನ್ ಝುಹುರಿ, ಕಿಲ್ಲೂರು ಮುದರ್ರಿಸ್ ರಫೀಕ್ ಸ‌ಅದಿ,  ಕಾಜೂರು ಮಾಜಿ ಅಧ್ಯಕ್ಷ ಕೆ ಶೇಕಬ್ಬ, ಹಮೀದ್‌ ಫೈಝಿ ಕಿಲ್ಲೂರು,  ಲೈವ್ ಮೀಡಿಯಾ ನ್ಯೂಸ್ ಪ್ರಿನ್ಸಿಪಲ್ ಎಡಿಟರ್ ಅಶ್ರಫ್ ಆಲಿಕುಂಞಿ ಮುಂಡಾಜೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾಜೂರು ಉರೂಸ್ ಸಮಿತಿ ಉಪಾಧ್ಯಕ್ಷ ಕೆ. ಮುಹಮ್ಮದ್ , ಪ್ರ.‌ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಜೊತೆ ಕಾರ್ಯದರ್ಶಿ ಕಾಸಿಂ ಮಲ್ಲಿಗೆಮನೆ, ಕೋಶಾಧಿಕಾರಿ ಕೆ.ಎಮ್‌ ಕಮಾಲ್, ಅಬೂಬಕ್ಕರ್ ಮಲ್ಲಿಗೆ ಮನೆ, ಮಾಜಿ‌ ಅಧ್ಯಕ್ಷರಾದ ಉಮರ್ ಸಖಾಫಿ, ಬಿ.ಎ ಯೂಸುಫ್ ಶರೀಫ್, ಇಬ್ರಾಹಿಂ ಮದನಿ, ಕೆ.ಎ  ಅಬೂಬಕ್ಕರ್ ಹಾಜಿ, ಪಿ.ಎ‌ ಮುಹಮ್ಮದ್, ಮುಹಮ್ಮದ್ ಸಖಾಫಿ, ಪ್ರಮುಖರಾದ 
ಅಬ್ದುಲ್ ರಹಿಮಾನ್ ಅದ್ದಾಕ, ಇಸ್ಮಾಯಿಲ್‌ ಫೈಝಿ ಕಿಲ್ಲೂರು,  ಯಾಕೂಬ್ ಅಜಿಕುರಿ,  ಬಿ.ಹೆಚ್ ಅಬೂಬಕ್ಕರ್ ಹಾಜಿ, ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಕುಂತೂರು, ವೈಸ್ ಪ್ರಿನ್ಸಿಪಲ್ ಅಬ್ದುಲ್‌ ಖಾದರ್ ಸ‌ಅದಿ, ನಾಸಿರ್ ಮಾಸ್ಟರ್, ಮನೇಜರ್ ಶಮೀಮ್, ಮುಹಮ್ಮದ್ ರಫಿ, ಗ್ರಾ.ಪಂ ಸದಸ್ಯರಾದ ಕೆ.ಯು ಮುಹಮ್ಮದ್ ಮತ್ತು ಶಾಹುಲ್ ಹಮೀದ್ ಕಿಲ್ಲೂರಿ,  ಬಿ.ಕೆ‌ ಅಬ್ಬಾಸ್ ಗೋಳಿಯಂಗಡಿ, ನಾಸಿರ್ ಪಾಶಾ, ನಝೀರ್ ಮಠ, ನವಾಝ್‌ಶರೀಫ್ ಕಟ್ಟೆ, ಅಬೂಬಕ್ಕರ್ ಬದ್ಯಾರ್, ಹಂಝ ಕಿಲ್ಲೂರು, ಸಿದ್ದೀಕ್ ಕೆ.ಹೆಚ್, ಬದ್ರುದ್ದೀನ್ ಕಾಜೂರು ಮೊದಲಾದವರು ಉಪಸ್ಥಿತರಿದ್ದರು.

ಉರೂಸ್ ಸಮಿತಿ ಅಧ್ಯಕ್ಷ ‌ಕೆ.ಯು ಇಬ್ರಾಹಿಂ  ಸ್ವಾಗತಿಸಿದರು. ರಶೀದ್ ಮದನಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X