Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಸ್ಟ್ರೇಲಿಯ ಬಳಕೆದಾರರಿಗೆ ಸುದ್ದಿಗಳನ್ನು...

ಆಸ್ಟ್ರೇಲಿಯ ಬಳಕೆದಾರರಿಗೆ ಸುದ್ದಿಗಳನ್ನು ತಡೆಹಿಡಿದ ಬಳಿಕ ಸರಕಾರದೊಂದಿಗೆ ಫೇಸ್‌ಬುಕ್ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ19 Feb 2021 9:44 PM IST
share
ಆಸ್ಟ್ರೇಲಿಯ ಬಳಕೆದಾರರಿಗೆ ಸುದ್ದಿಗಳನ್ನು ತಡೆಹಿಡಿದ ಬಳಿಕ ಸರಕಾರದೊಂದಿಗೆ ಫೇಸ್‌ಬುಕ್ ಮಾತುಕತೆ

ಸಿಡ್ನಿ (ಆಸ್ಟ್ರೇಲಿಯ), ಫೆ. 19: ಆಸ್ಟ್ರೇಲಿಯದ ಪ್ರಸ್ತಾಪಿತ ನೂತನ ಕಾನೂನನ್ನು ವಿರೋಧಿಸಿ, ತನ್ನ ಆಸ್ಟ್ರೇಲಿಯ ಬಳಕೆದಾರರಿಗೆ ಸುದ್ದಿಗಳನ್ನೇ ತಡೆಹಿಡಿದ ಅಭೂತಪೂರ್ವ ಕ್ರಮದ ಬಳಿಕ, ಫೇಸ್‌ಬುಕ್ ಶುಕ್ರವಾರ ಅಲ್ಲಿನ ಸರಕಾರದೊಂದಿಗೆ ಮಾತುಕತೆ ನಡೆಸಿದೆ.

 ಬಳಕೆದಾರರನ್ನು ಸುದ್ದಿಗಳಿಂದ ವಂಚಿತರನ್ನಾಗಿ ಮಾಡುವ ಫೇಸ್‌ಬುಕ್‌ನ ನಿರ್ಧಾರಕ್ಕೆ ಜಗತ್ತಿನಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಆಸ್ಟ್ರೇಲಿಯದ ಪ್ರಸ್ತಾಪಿತ ನೂತನ ಕಾನೂನಿನ ಪ್ರಕಾರ, ಗೂಗಲ್ ಮತ್ತು ಫೇಸ್‌ಬುಕ್ ಕಂಪೆನಿಗಳು ತಮ್ಮ ಮಾಧ್ಯಮಗಳಲ್ಲಿ ಹರಿದಾಡುವ ಸುದ್ದಿ ವರದಿಗಳಿಗಾಗಿ ಆಯಾಯ ಮಾಧ್ಯಮ ಸಂಸ್ಥೆಗಳಿಗೆ ಹಣ ಪಾವತಿಸಬೇಕಾಗುತ್ತದೆ.

ಫೇಸ್‌ಬುಕ್ ಗುರುವಾರದಿಂದ ಆಸ್ಟ್ರೇಲಿಯದ ಬಳಕೆದಾರರಿಗಾಗಿ ಮಾಧ್ಯಮ ಸಂಸ್ಥೆಗಳ ಪುಟಗಳನ್ನು ಖಾಲಿಯಿರಿಸಿದೆ. ಅಂದರೆ, ಅವುಗಳ ಮೂಲಕ ಹರಿದಾಡುತ್ತಿದ್ದ ಸುದ್ದಿ ವರದಿಗಳು ಈಗ ನಿಂತಿವೆ. ಅದೂ ಅಲ್ಲದೆ, ತನ್ನ ಬಳಕೆದಾರರು ಸುದ್ದಿ ವರದಿಗಳನ್ನು ಹಂಚಿಕೊಳ್ಳುವುದನ್ನೂ ತಡೆದಿದೆ.

 ಈ ಮೂಲಕ ಪ್ರಸ್ತಾಪಿತ ಕಾನೂನಿಗೆ ತಲೆಬಾಗಲು ಅದು ನಿರಾಕರಿಸಿದೆ. ಆದರೆ, ನೂತನ ಕಾನೂನಿನಿಂದ ತಾನು ಹಿಂದೆ ಸರಿಯುವುದಿಲ್ಲ ಎಂದು ಆಸ್ಟ್ರೇಲಿಯ ಸರಕಾರ ಹೇಳಿದೆ.

ಈ ಬಿಕ್ಕಟ್ಟನ್ನು ನಿವಾರಿಸುವ ನಿಟ್ಟಿನಲ್ಲಿ ಶುಕ್ರವಾರ ಫೇಸ್‌ಬುಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾರ್ಕ್ ಝುಕರ್‌ಬರ್ಗ್ ಜೊತೆ ಮಾತುಕತೆ ನಡೆಸಿರುವುದಾಗಿ ಆಸ್ಟ್ರೇಲಿಯದ ಹಣಕಾಸು ಸಚಿವ ಜೋಶ್ ಫ್ರೈಡನ್‌ಬರ್ಗ್ ಹೇಳಿದ್ದಾರೆ. ಮಾಉತಕತೆಯು ವಾರಂತ್ಯದಲಿ ಮುಂದುವರಿಯುವುದಾಗಿ ಅವರು ಹೇಳಿದ್ದಾರೆ.

ಅದೇ ವೇಳೆ, ಬೆದರಿಕೆಯ ವರ್ತನೆಯನ್ನು ತೊರೆದು ಮಾತುಕತೆಯ ಮೇಜಿಗೆ ಬನ್ನಿ ಎಂದು ಪ್ರಧಾನಿ ಸ್ಕಾಟ್ ಮೊರಿಸನ್ ಕೂಡ ಫೇಸ್‌ಬುಕ್ಕನ್ನು ಒತ್ತಾಯಿಸಿದ್ದಾರೆ.

ಮೋದಿ ಜೊತೆ ಚರ್ಚೆ: ಮೊರಿಸನ್

ತಮ್ಮ ಮಾಧ್ಯಮಗಳಲ್ಲಿ ಪ್ರಕಟಗೊಳ್ಳುವ ಸುದ್ದಿಗಳಿಗಾಗಿ ಗೂಗಲ್ ಮತ್ತು ಫೇಸ್‌ಬುಕ್ ಕಂಪೆನಿಗಳು ಆಯಾಯ ಮಾಧ್ಯಮ ಸಂಸ್ಥೆಗಳಿಗೆ ಹಣ ಪಾವತಿಸಬೇಕೆನ್ನುವ ಜಗತ್ತಿನ ಪ್ರಥಮ ಕಾನೂನಿನ ಬಗ್ಗೆ ಜಗತ್ತಿನಾದ್ಯಂತ ನಾಯಕರು ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮಾರಿಸನ್ ಹೇಳಿದ್ದಾರೆ.

‘‘ಆಸ್ಟ್ರೇಲಿಯ ತೆಗೆದುಕೊಂಡಿರುವ ಕ್ರಮದತ್ತ ಜನರು ಕುತೂಹಲದಿಂದ ನೋಡುತ್ತಿದ್ದಾರೆ’’ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ನಾನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆನಡದ ಪ್ರಧಾನಿ ಜಸ್ಟಿನ್ ಟ್ರೂಡೊ ಜೊತೆ ಚರ್ಚಿಸಿದ್ದೇನೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X