Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು ಕಾಶ್ಮೀರದ ಬಗ್ಗೆ ವಿಶಸ್ವಸಂಸ್ಥೆ...

ಜಮ್ಮು ಕಾಶ್ಮೀರದ ಬಗ್ಗೆ ವಿಶಸ್ವಸಂಸ್ಥೆ ಪ್ರತಿನಿಧಿಗಳ ಟೀಕೆ ಅನುಚಿತ ಮತ್ತು ತಿರಸ್ಕಾರ ಯೋಗ್ಯ: ಭಾರತ

ವಾರ್ತಾಭಾರತಿವಾರ್ತಾಭಾರತಿ19 Feb 2021 9:57 PM IST
share

ಹೊಸದಿಲ್ಲಿ, ಫೆ.19: ಜಮ್ಮು-ಕಾಶ್ಮೀರವು ಭಾರತದ ಅವಿಭಾಜ್ಯ ಭಾಗವಾಗಿದೆ ಎಂದು ಒತ್ತಿಹೇಳಿರುವ ಭಾರತ, ಜಮ್ಮು-ಕಾಶ್ಮೀರದ ಕುರಿತ ಕಾರ್ಯನೀತಿಯ ಬಗ್ಗೆ ವಿಶ್ವಸಂಸ್ಥೆ ವಿಶೇಷ ಪ್ರತಿನಿಧಿಗಳ ಟೀಕೆ ಅನುಚಿತ , ಆಕ್ಷೇಪಾರ್ಹ ಮತ್ತು ತಿರಸ್ಕಾರ ಯೋಗ್ಯವಾಗಿದೆ ಎಂದು ಹೇಳಿದೆ. ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿರುವುದನ್ನು ಟೀಕಿಸಿ ವಿಶ್ವಸಂಸ್ಥೆಯ ಅಲ್ಪಸಂಖ್ಯಾತರ ವಿಷಯದ ವಿಶೇಷ ಪ್ರತಿನಿಧಿ ಫೆರ್ನಾಂಡ್ ಡಿ ವರೆನ್ನೆಸ್ ಮತ್ತು ಧಾರ್ಮಿಕ ಸ್ವಾತಂತ್ರ ವಿಷಯದ ವಿಶೇಷ ಪ್ರತಿನಿಧಿ ಅಹ್ಮದ್ ಶಾಹೀದ್ ನೀಡಿರುವ ಹೇಳಿಕೆಗೆ ಭಾರತ ಈ ಪ್ರತಿಕ್ರಿಯೆ ನೀಡಿದೆ. ವಿಶೇಷ ಪ್ರತಿನಿಧಿಗಳ ಹೇಳಿಕೆ ವಿಶ್ವಸಂಸ್ಥೆಯ ಮಾನವಹಕ್ಕುಗಳ ಹೈಕಮಿಷನರ್ ಅವರ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪತ್ರಿಕಾ ಹೇಳಿಕೆಯ ಭಾಗವಾಗಿದೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ವಿದೇಶ ವ್ಯವಹಾರ ಇಲಾಖೆಯ ವಕ್ತಾರ ಅನುರಾಗ್ ಶ್ರೀವಾಸ್ತವ, ಜಮ್ಮು ಕಾಶ್ಮೀರಕ್ಕೆ ವಿದೇಶಿ ರಾಯಭಾರಿಗಳ ತಂಡದ ಭೇಟಿಯ ಸಂದರ್ಭದಲ್ಲೇ ಉದ್ದೇಶಪೂರ್ವಕವಾಗಿ ಈ ಹೇಳಿಕೆ ಹೊರಬಿದ್ದಿದೆ ಎಂದಿದ್ದಾರೆ. ‘ಜಮ್ಮು ಕಾಶ್ಮೀರವು ಭಾರತದ ಅವಿಭಾಜ್ಯ ಭಾಗವಾಗಿದ್ದು ಜಮ್ಮು ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ಬದಲಾಯಿಸುವ ನಿರ್ಣಯವನ್ನು ಭಾರತದ ಸಂಸತ್ತು ಅನುಮೋದಿಸಿದೆ ಎಂಬುದನ್ನು ಪತ್ರಿಕಾ ಹೇಳಿಕೆ ನಿರ್ಲಕ್ಷಿಸಿದೆ. ದಶಕಗಳ ಕಾಲದ ತಾರತಮ್ಯವನ್ನು ಕೊನೆಗೊಳಿಸುವ, ಜಿಲ್ಲಾಭಿವೃದ್ಧಿ ಸಮಿತಿಗಳಿಗೆ ಚುನಾವಣೆ ನಡೆಸಿ ಪ್ರಜಾತಾಂತ್ರಿಕ ವ್ಯವಸ್ಥೆಯನ್ನು ತಳಮಟ್ಟದಲ್ಲಿ ಗಟ್ಟಿಗೊಳಿಸುವ , ಉತ್ತಮ ಆಡಳಿತವ್ಯವಸ್ಥೆ ನೆಲೆಗೊಳಿಸುವ ಉದ್ದೇಶ ಈ ಕ್ರಮದ ಹಿಂದಿದೆ ಎಂಬುದನ್ನು ಗಮನಿಸಲೂ ವಿಫಲವಾಗಿದೆ. ದೇಶದ ಇತರೆಡೆ ಅನ್ವಯವಾಗುವ ಕಾನೂನನ್ನು ಜಮ್ಮು ಕಾಶ್ಮೀರಕ್ಕೂ ವಿಸ್ತರಿಸುವುದರಿಂದ ಆಗುವ ಸಕಾರಾತ್ಮಕ ಪರಿಣಾಮಗಳನ್ನು ಈ ಹೇಳಿಕೆ ಕಡೆಗಣಿಸಿದೆ.

ಈ ಹೇಳಿಕೆ ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿಗಳಿಗೆ ಇರಬೇಕಾದ ವಸ್ತುನಿಷ್ಟತೆ ಮತ್ತು ತಟಸ್ಥತೆಯ ತತ್ವಗಳ ಬಗ್ಗೆ ಪ್ರಶ್ನೆಗಳನ್ನು ಮೂಡಿಸಿದೆ’ ಎಂದು ಶ್ರೀವಾಸ್ತವ ಹೇಳಿದ್ದಾರೆ.

ವಿಶೇಷ ಪ್ರತಿನಿಧಿಗಳು ಅವಸರದ ತೀರ್ಮಾನಕ್ಕೆ ಬರುವ ಹಾಗೂ ಹೇಳಿಕೆಗಳನ್ನು ನೀಡುವ ಮೊದಲು, ಪರಿಗಣನೆಯಲ್ಲಿರುವ ವಿಷಯದ ಬಗ್ಗೆ ಉತ್ತಮ ತಿಳುವಳಿಕೆ ಹೊಂದಿರಬೇಕು ಎಂದು ನಾವು ಅಪೇಕ್ಷಿಸುತ್ತೇವೆ. ವಿಶೇಷ ಪ್ರತಿನಿಧಿಗಳು ಫೆಬ್ರವರಿ 10ರಂದು ತಮ್ಮ ಪ್ರಶ್ನಾವಳಿಯನ್ನು ಹಂಚಿಕೊಂಡ ಬಳಿಕ ನಮ್ಮ ಪ್ರತಿಕ್ರಿಯೆಗೂ ಕಾಯದೆ ತಮ್ಮ ತಪ್ಪು ಊಹೆಯನ್ನು ಮಾಧ್ಯಮದಲ್ಲಿ ಬಿಡುಗಡೆ ಮಾಡಿರುವುದು ಶೋಚನೀಯ ಎಂದು ಶ್ರೀವಾಸ್ತವ ಹೇಳಿದ್ದಾರೆ. ವಿಶ್ವಸಂಸ್ಥೆಯ ಮಾನವಹಕ್ಕುಗಳ ಹೈಕಮಿಷನರ್‌ರ ವೆಬ್‌ಸೈಟ್‌ನಲ್ಲಿ ಪ್ರಕಟವಾಗಿರುವ ಹೇಳಿಕೆಯಲ್ಲಿ ‘ಜಮ್ಮು-ಕಾಶ್ಮೀರದ ಸ್ವಾಯತ್ತತೆಯನ್ನು ಕೊನೆಗೊಳಿಸಿ, ಅಲ್ಲಿ ಮುಸ್ಲಿಮರು ಹಾಗೂ ಇತರ ಹಿಂದುಳಿದ ವರ್ಗದವರಿಗೆ ರಾಜಕೀಯ ಕ್ಷೇತ್ರದಲ್ಲಿ ಈ ಹಿಂದೆ ಇದ್ದ ರೀತಿಯ ಅವಕಾಶವನ್ನು ಮೊಟಕುಗೊಳಿಸುವ ಹೊಸ ಕಾಯ್ದೆ ಜಾರಿಗೆ ತಂದಿರುವುದು ಆತಂಕಕಾರಿ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ’ ಎಂದು ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X