ಆ್ಯಪ್ ಮೂಲಕ ಮಾಹಿತಿ ಸಂಗ್ರಹ ಕಾರ್ಯಕ್ಕೆ ಚಾಲನೆ
ಉಳ್ಳಾಲ : ಕರ್ನಾಟಕ ಸರಕಾರದಿಂದ ನಿರ್ದೇಶನ ಮೇರೆಗೆ 2020-2021ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲೆಗೆ ಹಾಜರುಪಡಿಸಲು ಸ್ಥಳೀಯ ಸಂಸ್ಥೆಗಳಿಗೆ ಉಳ್ಳಾಲ ನಗರಸಭಾ ಸಿಬ್ಬಂದಿಗಳು ಈಗಾಗಲೇ ಮನೆ ಮನೆಗೆ ತೆರಳಿ ಆ್ಯಪ್ ಮೂಲಕ ಮಾಹಿತಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿದೆ.
ಈ ಸಂದರ್ಭದಲ್ಲಿ ಸಂಬಂಧಿಸಿದ ದಾಖಲೆಗಳನ್ನು ನೀಡುವುದರ ಮೂಲಕ ನಗರಸಭಾ ಸಿಬ್ಬಂದಿಗಳೊಂದಿಗೆ ಈ ಸಮೀಕ್ಷೆಯಲ್ಲಿ ಪಾಲ್ಗೊಂಡು ಸಹಕರಿಸಬೇಕಾಗಿ ನಗರಸಭಾ ಪೌರಾಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story