ತರೀಕೆರೆ: ಖಾಸಗಿ ಬಸ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು, ಫೆ.19: ಖಾಸಗಿ ಬಸ್ಸೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ಪಟ್ಟಣದಲ್ಲಿ ಶುಕ್ರವಾರ ವರದಿಯಾಗಿದೆ.
ತರೀಕೆರೆ ಪಟ್ಟಣದ ಡಾ.ಅಮ್ಮಣ್ಣ ಬೀದಿ ನಿವಾಸಿ ಶಿವರಾಜ್(30) ಮೃತ ಯುವಕ. ಪಟ್ಟಣದ ಟಿವಿಎಸ್ ಶೋರೂಮ್ನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಶುಕ್ರವಾರ ಬೆಳಗ್ಗೆ ತನ್ನ ಮನೆಯಿಂದ ಕೆಲಕ್ಕೆಂದು ಬೈಕ್ನಲ್ಲಿ ಬರುತ್ತಿದ್ದ ವೇಳೆ ಪಟ್ಟಣದ ದಾರುಲ್ ಇಸ್ಲಾಂ ಮಸೀದಿ ಮುಂಭಾಗದ ಮುಖ್ಯ ರಸ್ತೆಯಲ್ಲಿ ವೇಗವಾಗಿ ಬಂದ ಖಾಸಗಿ ಬಸ್ ಬೈಕ್ಗೆ ಢಿಕ್ಕಿ ಹೊಡೆದಿದೆ.
ಅಪಘಾತದಿಂದ ಶಿವರಾಜ್ ತಲೆಗೆ ಭಾರೀ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾದ ಪರಿಣಾಮ ಶಿವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.
ಅಪಘಾತಕ್ಕೆ ಚಾಲಕನ ಅಜಾಗರೂಕತೆ ಹಾಗೂ ಅತಿವೇಗವೇ ಕಾರಣ ಎನ್ನಲಾಗಿದ್ದು, ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





