Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನಡ ಭವನ ತಾಲೂಕಿಗೆ ಹೆಮ್ಮೆ ತಂದಿದೆ:...

ಕನ್ನಡ ಭವನ ತಾಲೂಕಿಗೆ ಹೆಮ್ಮೆ ತಂದಿದೆ: ರಮಾನಾಥ ರೈ

ಬಂಟ್ವಾಳ ತಾಲೂಕು ಕನ್ನಡ ಭವನ, ಸಾರ್ವಜನಿಕ ರಂಗಮಂದಿರ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ20 Feb 2021 11:31 PM IST
share
ಕನ್ನಡ ಭವನ ತಾಲೂಕಿಗೆ ಹೆಮ್ಮೆ ತಂದಿದೆ: ರಮಾನಾಥ ರೈ

ಬಂಟ್ವಾಳ, ಫೆ.20: ಬಿ.ಸಿ.ರೋಡಿನ ಕೈಕುಂಜೆಯಲ್ಲಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕನ್ನಡ ಭವನ ಹಾಗೂ ಸಾರ್ವಜನಿಕ ರಂಗಮಂದಿರವನ್ನು ಶನಿವಾರ ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಲಾಯಿತು. 

ಮಾಜಿ ಸಚಿವ ರಮಾನಾಥ ರೈ ಕನ್ನಡ ಭವನ ಉದ್ಘಾಟನೆಗೈದು ದಾನಿಗಳ ನಾಮಫಲಕವನ್ನು ಅನಾವರಣಗೊಳಿಸಿದರು. ಬಳಿಕ  ಮಾತನಾಡಿದ ಅವರು, ಕನ್ನಡ ಭವನವನ್ನು ನಿರ್ಮಿಸಿ ಲೋಕಾರ್ಪಣೆ ಮಾಡುವುದು ಕನ್ನಡದ ಕೆಲಸವಾಗಿದ್ದು ಇಲ್ಲಿನ ಜನರ ಬಹು ನಿರೀಕ್ಷೆಯ ಕನ್ನಡ ಭವನದ ನಿರ್ಮಾಣ ತಾಲೂಕಿನ ಜನತೆಗೆ ಹೆಮ್ಮೆ ತಂದಿದೆ ಎಂದರು. 

ತಾಲೂಕಿನಲ್ಲಿ ಪಂಜೆ ಮಂಗೇಶರಾಯರ ಭವನದ ಅಭಿಲಾಷೆ ಹೊಂದಿದ್ದು ಅದರ ಭಾಗಶಃ ಕಾಮಗಾರಿ ಪೂರ್ಣಗೊಂಡು ಈಗ ಆರ್ಧಕ್ಕೆ ನಿಂತಿದೆ. ತನ್ನ ಅಧಿಕಾರದ ಅವಧಿಯಲ್ಲಿ 5 ಕೋಟಿ ರೂ. ಮಂಜೂರುಗೊಳಿಸಿ ಹೆಚ್ಚುವರಿಯಾಗಿ 3 ಕೋಟಿ ರೂ. ಸೇರಿ ಒಟ್ಟು 8 ಕೋಟಿ ರೂ.ನ ಕಟ್ಟಡ ಪಂಜೆಯವರ ಮನೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿದೆ. ಕನ್ನಡದ ವಿಚಾರದಲ್ಲಿ ಸಂಶೋಧನ ಸಂಸ್ಥೆಯಾಗಿ ಪಂಜೆ ಭವನ ನಿರ್ಮಾಣವಾಗಬೇಕೆಂಬ ಉದ್ದೇಶದಿಂದ ನಿರ್ಮಿಸಲಾಗಿದೆ ಎಂದು ಅವರು ಹೇಳಿದರು. 

ಭಾಷಾ ವಿಚಾರದಲ್ಲಿ ಕರ್ನಾಟಕದಲ್ಲಿ ಯಾವುದೇ ಗೊಂದಲಗಳು ನಡೆದಿಲ್ಲ. ಕಾವೇರಿ ನದಿ ಹಾಗೂ‌ ಬೆಳಗಾಂ ಗಡಿ ವಿಚಾರದಲ್ಲಿ ಸಣ್ಣ ಪುಟ್ಟ ವಿವಾದ ನಡೆದಿದೆಯೇ ಹೊರತು ಕರ್ನಾಟಕದಲ್ಲಿ ಎಲ್ಲಾ ಭಾಷಿಕರು ಜೊತೆಯಾಗಿ ಬದುಕುತ್ತಿದ್ದಾರೆ ಎಂದು ರೈ ಹೇಳಿದರು. 

ಸಾರ್ವಜನಿಕ ರಂಗ ಮಂದಿರವನ್ನು ಶ್ರೀ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ಗೈದು,ಕನ್ನಡ ಮತ್ತು ತುಳು ಈ ಜಿಲ್ಲೆಯ ಜನತೆಗೆ ಇಬ್ಬರು ತಾಯಿಯಿದ್ದಾಗೆ. ತುಳು ಭಾಷೆ 8ನೇ ಪರಿಚ್ಚೇದಕ್ಕೆ ಸೇರ್ಪಡೆಯ ಜೊತೆಗೆ ರಾಜ್ಯದಲ್ಲಿ ಪ್ರಾದೇಶಿಕ ಭಾಷೆಯಾಗಿ ಘೋಷಿಸಬೇಕು ಎಂಬುದು ಈ ಸಮ್ಮೇಳನದ ಧ್ಯೇಯವಾಗಬೇಕು ಎಂದರು. 

ವಿ.ಪ.‌ ಸದಸ್ಯ ಪ್ರತಾಪಸಿಂಹ ನಾಯಕ್ ಅವರು, ಹಿಂದಿನ 20 ತಾಲೂಕು ಸಾಹಿತ್ಯ ಸಮೇಳನ ಅಧ್ಯಕ್ಷರುಗಳ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿ, ಸಾಹಿತ್ಯ ಸಮ್ಮೇಳನಗಳು ಜನಸಾಮಾನ್ಯರ ಕಾರ್ಯಕ್ರಮವಾಗಿ ರೂಪಗೊಂಡಾಗ ಸಾಹಿತ್ಯ ಜನರನ್ನು ತಲುಪಲು ಸಾಧ್ಯವಾಗುತ್ತದೆ ಎಂದರು. 

ಕನ್ನಡ, ತುಳು ನಮ್ಮ ಉಸಿರಾಗಬೇಕು: ಕೇಮಾರುಶ್ರೀ: ಶ್ರೀಕ್ಷೇತ್ರ ಕೇಮಾರು ಸಾಂದೀಪಿನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ್ ಸ್ವಾಮೀಜಿ ಅವರು ಆಶೀರ್ವನಗೈದು ಕನ್ನಡ ಮತ್ತು ತುಳು ನಮ್ಮ ಉಸಿರಾಗಬೇಕು, ಭಾಷೆಯಿಂದ ಸಂಸ್ಕೃತಿ ಉಳಿಯುತ್ತದೆ, ಜಾತಿ, ಭಾಷೇಗಾಗಿ ಜಗಳ‌ ದೇಶದ ಪ್ರಗತಿಯನ್ನು ಕುಂಠಿಸುತ್ತದೆ. ಸಂಸ್ಕೃತಿ, ಮೌಲ್ಯವನ್ನು ಉಳಿಸಿ, ದೀನದಲಿತರಲ್ಲಿ ದೇವರನ್ನು ಕಾಣುವ ಹೊಸ ಪರಿಕಲ್ಪನೆ ಮೂಡಿಸಲಿ ಎಂದು ಆಶಿಸಿದರು. 

ಕ್ಯಾಂಪ್ಕೋ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅವರು ಪಂಜೆ, ಬಿ.ವಿ.ಕಾರಂತ್, ಏರ್ಯ ಲಕ್ಷ್ಮೀನಾರಾಯಣ ಆಳ್ವ, ನೀರ್ಪಾಜೆ ಭೀಮಭಟ್ ರವರ ಭಾವಚಿತ್ರ ಅನಾವರಣಗೊಳಿಸಿ ಶುಭ ಹಾರೈಸಿದರು. ರಾಷ್ಟ್ರ ಪ್ರಶಸ್ತಿ ವಿಜೇತ ಯಕ್ಷಕಲಾವಿದ, ದಶಾವತಾರಿ ಗೋವಿಂದಭಟ್ ರವರು ತಾಲೂಕು ಸಾಹಿತ್ಯ ಪರಿಷತ್ ಪದಾಧಿಕಾರಿಗಳ ನಾಮಫಲಕ ಹಾಗೂ  ಯಕ್ಷಗಾನದ ತಮ್ಮದೇ ವೇಷದ ಭಾವಚಿತ್ರ ಅನಾವರಣಗೊಳಿಸಿ ಶುಭಹಾರೈಸಿದರು. 

ಮುಹಮ್ಮದ್ ಯಾಸೀರ್ ಕಲ್ಲಡ್ಕ ಅವರ ಮ್ಯೂಸಿಯಂ ಪ್ರದರ್ಶನವನ್ನು ಶ್ರೀ ಶೃಂಗೇರಿ ಮಠದ ಧರ್ಮಾಧಿಕಾರಿ ಸತ್ಯಶಂಕರ ಬೊಳ್ಳಾವ ಉದ್ಘಾಟನೆಗೈದು ಶುಭಶಂಶಾಸನೆಗೈದರು. ಧರ್ಮದರ್ಶಿ ಹರಿಕೃಷ್ಣ ಪುನರೂರು, ಉದ್ಯಮಿ ರಘುನಾಥ ಸೋಮಯಾಜಿ ಅತಿಥಿಗಳಾಗಿ ಭಾಗವಹಿಸಿದ್ದರು. 

ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ತಾ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ, ಸಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷ ಬಸ್ತಿ ವಾಮನ ಶೆಣ್ಯೆ, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಸ್ವಾಗತ ಸಮಿತಿ ಅಧ್ಯಕ್ಷ ಐತಪ್ಪ ಆಳ್ವ, ಕಸಾಪ ಗೌರವ ಕಾರ್ಯದರ್ಶಿ ಡಾ.ನಾಗವೇಣಿ ಮಂಚಿ, ಭುವನಭಿರಾಮ ಉಡುಪ, ಸುದರ್ಶನ್ ಜೈನ್ ಮೊದಲಾದವರು ವೇದಿಕೆಯಲ್ಲಿದ್ದರು. 

ರಾಜ್ಯ‌ ಮಟ್ಟದ ಪುಸ್ತಕ ಸಂತೆಯನ್ನು ಆಯೋಜಿಸಲಾಗಿದೆ. ಪರಿಷತ್ ಧ್ವಜಾರೋಹಣಗೈದ ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕಲ್ಕೂರ ಸಭಾಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರಾ ರಾಷ್ಟ್ರಧ್ವಜಾರೋಹಣಗೈದರು‌. ತಹಶೀಲ್ದಾರ್ ರಶ್ಮೀ ಎಸ್.ಆರ್. ಉಪಸ್ಥಿತರಿದ್ದರು. 

ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಸ್ವಾಗತಿಸಿದರು. ತಾಲೂಕು ಕಸಾಪ ಅಧ್ಯಕ್ಷ ಕೆ.ಮೋಹನ್ ರಾವ್ ಪ್ರಸ್ತಾವಿಸಿ 20 ವರ್ಷಗಳ ಹಿಂದೆ ಆಗಿನ ತಾಲೂಕು ಕಸಾಪ ಅಧ್ಯಕ್ಷರಾಗಿದ್ದ ನೀರ್ಪಾಜೆ ಭೀಮ ಭಟ್ ಅವರು ಕನ್ನಡಭವನದ ಕನಸನ್ನು ಕಂಡು ಜಮೀನು ಗುರುತಿಸಿ ಶಿಲಾನ್ಯಾಸ ನೆರವೇರಿಸಿದ್ದರು. ಅವರ ಆ ಕನಸು ಕನ್ನಡಭವನ ಲೋಕಾರ್ಪಣೆಯ ಮೂಲಕ  ನೆರವೇರಿದೆ ಎಂದರು. 

ತಾಲೂಕು ಕಸಾಪ ಗೌರವ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ ವಂದಿಸಿದರು. ಬಿ.ರಾಮಚಂದ್ರ ರಾವ್ ಮತ್ತು ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.  

ವೈಭವದ ಮೆರವಣಿಗೆ: ಇದಕ್ಕು ಮುನ್ನ  ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಕೈಕುಂಜೆಯವರೆಗರ ಕನ್ನಡ ಭುವನೇಶ್ವರಿಯ ಭವ್ಯವಾದ ಮೆರವಣಿಗೆಯು ನಡೆಯಿತು. ಬಂಟ್ವಾಳ ಪಿರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಮೆರವಣಿಗೆಗೆ ಚಾಲನೆ ನೀಡಿದರು. ಮೊಡಂಕಾಪು ಚರ್ಚ್‌ ನ ಧರ್ಮಗುರುಗಳಾದ ವೆಲೇರಿಯನ್ ಡಿಸೋಜ ಇದ್ದರು. ಜೇಸಿ ಅಧ್ಯಕ್ಷೆ,ನ್ಯಾಯವಾದಿ ಶೈಲಜಾ ರಾಜೇಶ್ ಅವರು ಭುವನೇಶ್ವರಿಯಾಗಿ ತೆರೆದ ವಾಹನದಲ್ಲಿ ಗಮನಸೆಳೆದರು. ಗೊಂಬೆ ಕುಣಿತ, ಕೀಲುಕುದುರೆ, ಚೆಂಡೆ ಮೆರವಣಿಗೆಗೆ ವಿಶೇಷ ಮೆರಗು ನೀಡಿತು.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X