Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಗಲಭೆ ಪ್ರಕರಣ: ಮೂವರು...

ದಿಲ್ಲಿ ಗಲಭೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

ಎನ್‌ಡಿಟಿವಿ ವೀಡಿಯೊ ಉಲ್ಲೇಖಿಸಿದ ನ್ಯಾಯಾಧೀಶರು

ವಾರ್ತಾಭಾರತಿವಾರ್ತಾಭಾರತಿ21 Feb 2021 11:19 PM IST
share
ದಿಲ್ಲಿ ಗಲಭೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

ಹೊಸದಿಲ್ಲಿ, ಫೆ. 21: ಕಳೆದ ವರ್ಷ ದಿಲ್ಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಪ್ರಕರಣದ ಮೂವರು ಕೊಲೆ ಆರೋಪಿಗಳಿಗೆ ಎನ್‌ಡಿಟಿವಿಯ ವೀಡಿಯೊದ ಆಧಾರದಲ್ಲಿ ದಿಲ್ಲಿ ಉಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಎನ್‌ಡಿಟಿವಿಯ ರವೀಶ್ ಕುಮಾರ್ ಅವರ ಪ್ರೈಮ್ ಟೈಮ್’ ಕಾರ್ಯಕ್ರಮದಲ್ಲಿ ಈ ವೀಡಿಯೊವನ್ನು ಪ್ರದರ್ಶಿಸಲಾಗಿತ್ತು. ಪ್ರಾಸಿಕ್ಯೂಷನ್‌ಗೆ ಮುಖ್ಯ ಸಾಕ್ಷಿಯಾಗಿ ಬಳಸಿರುವ ಈ ವೀಡಿಯೊದಲ್ಲಿ ಯಾವುದೇ ಆರೋಪಿಗಳು ಕಾಣಿಸಿಕೊಂಡಿಲ್ಲ ಎಂದು ಪ್ರತಿವಾದಿ ವಕೀಲರು ನ್ಯಾಯಾಲಯದ ಗಮನ ಸೆಳೆದರು.

2020 ಫೆಬ್ರವರಿಯಲ್ಲಿ ದಿಲ್ಲಿ ಗಲಭೆ ಸಂದರ್ಭ ಶಾಹಿದ್ ಎಂಬವರನ್ನು ಹತ್ಯೆಗೈದ ಆರೋಪಿಗಳಾದ ಈ ಮೂವರ ವಿರುದ್ಧ ನೇರವಾದ ಅಥವಾ ಸಾಂದರ್ಭಿಕ ಅಥವಾ ವಿಧಿವಿಜ್ಞಾನದ ಪರೀಕ್ಷೆಯ ಪುರಾವೆಗಳಿಲ್ಲ ಎಂದು ದಿಲ್ಲಿ ಉಚ್ಚ ನ್ಯಾಯಾಲಯ ಹೇಳಿದೆ. ಪ್ರಕರಣದಲ್ಲಿ ಆರೋಪಿಗಳಾದ ಜುನೈದ್, ಚಾಂದ್ ಮುಹಮ್ಮದ್ ಹಾಗೂ ಇರ್ಷಾದ್‌ಗೆ 2020 ಎಪ್ರಿಲ್‌ನಿಂದ 10 ತಿಂಗಳ ಕಾಲ ಕಸ್ಟಡಿ ವಿಧಿಸಲಾಗಿತ್ತು.

ದಿಲ್ಲಿಯ ಕಟ್ಟಡವೊಂದರಲ್ಲಿ ನಿಂತು ಹಿಂದೂ ಗುಂಪು ಗುಂಡು ಹಾರಿಸುವ ಹಾಗೂ ಕಲ್ಲು ಎಸೆಯುವ ಮೂಲಕ ದಾಳಿ ನಡೆಸುವ ಸಂದರ್ಭ ಆರೋಪಿಗಳು ಈಶಾನ್ಯ ದಿಲ್ಲಿಯ ಚಾಂದ್‌ಬಾಗ್ ಪ್ರದೇಶದಲ್ಲಿರುವ ಸಪ್ತರ್ಷಿ ಕಟ್ಟಡದ ಛಾವಣಿ ಮೇಲೆ ನಿಂತಿದ್ದ ಮುಸ್ಲಿಂ ಗುಂಪಿನ ಜೊತೆ ಇದ್ದರು. ಗುಂಡಿನ ದಾಳಿಯಿಂದ ಸಪ್ತರ್ಷಿ ಕಟ್ಟಡದ ಛಾವಣಿಯಲ್ಲಿದ್ದ ಶಾಹಿದ್ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದರು. ಎನ್‌ಡಿಟಿವಿಯ ವರದಿಯಲ್ಲಿ ಪ್ರದರ್ಶಿಸಲಾದ ವೀಡಿಯೊದಲ್ಲಿ ಸಪ್ತರ್ಷಿ ಕಟ್ಟಡದ ಎದುರಿರುವ ಮೋಹನ್ ನರ್ಸಿಂಗ್ ಹೋಮ್ ಕಟ್ಟಡದ ಛಾವಣಿಯಿಂದ ಗುಂಡು ಹಾರಿಸಿರುವ ದೃಶ್ಯ ಸೆರೆಯಾಗಿದೆ. ಪೊಲೀಸರು ತನಿಖೆಯಲ್ಲಿ ಕೇವಲ ಒಂದು ಭಾಗದಲ್ಲಿದ್ದ ಕಟ್ಟಡದ ಬಗ್ಗೆ ಮಾತ್ರ ಗಮನ ಕೇಂದ್ರೀಕರಿಸಿದ್ದಾರೆ. ಮೋಹನ್ ನರ್ಸಿಂಗ್ ಹೋಮ್ ಕಟ್ಟಡವನ್ನು ನಿರ್ಲಕ್ಷಿಸಿದ್ದಾರೆ ಎಂದು ನ್ಯಾಯಪೀಠ ಪ್ರತಿಪಾದಿಸಿದೆ.

 “ದೂರುದಾರರ ಪರ ವಕೀಲರು ಸಲ್ಲಿಸಿದ ವೀಡಿಯೊದಲ್ಲಿ 10 ನಿಮಿಷಗಳ ಬಳಿಕ ರವೀಶ್ ಕುಮಾರ್ ಅವರ ಎನ್‌ಡಿಟಿವಿ ಪ್ರೈಮ್ ಟೈಮ್‌ನಲ್ಲಿ ಕಾಣಿಸಿಕೊಂಡ ನಿರೂಪಕಿ, ಮೋಹನ್ ನರ್ಸಿಂಗ್ ಹೋಮ್ ಆಸ್ಪತ್ರೆಯಿಂದ ವ್ಯಕ್ತಿಯೋರ್ವ ಗುಂಡು ಹಾರಿಸಿದ್ದಾನೆ ಹಾಗೂ ಆತ ಹೆಲ್ಮೆಟ್ ಧರಿಸಿದ್ದಾನೆ. ಇಲ್ಲಿ ಇನ್ನೋರ್ವ ವ್ಯಕ್ತಿ ತನ್ನ ಆಯುಧಕ್ಕೆ ಕರವಸ್ತ್ರ ಮುಚ್ಚಿದ್ದಾನೆ ಎಂದು ಹೇಳಿದ್ದಾಳೆ. ಆನಂತರ ಆ ದೃಶ್ಯ ಪ್ರಸಾರವಾಗಿದೆ’’ಎಂದು ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X