Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನನಾಯಕರ ಹಿತಾಸಕ್ತಿಗೆ ಸೊಪ್ಪು...

ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ22 Feb 2021 7:35 PM IST
share
ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಸ್ವಾಮೀಜಿ

ಬೆಂಗಳೂರು ಫೆ.22: ಪಂಚಮಸಾಲಿ ಸಮುದಾಯದ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಇಲ್ಲಿ ಯಾವುದೇ ರೀತಿಯಿಂದಲೂ ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.

ರವಿವಾರ ನಡೆದ ಘಟನೆಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾವು ಯಾರೋ ಒಬ್ಬರು ಹೇಳಿದ ಹಾಗೆ ಕೇಳುವವರು ಅಲ್ಲ. ಅಖಂಡ ಪಂಚಮಸಾಲಿ ಸಮುದಾಯ ಹೇಳಿದ ಹಾಗೆ ಕೇಳುತ್ತೇವೆ ಎಂದು ತಿಳಿಸಿದರು.

ನಗರದ ಒಳಗೆ ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಯಾರೋ ಕಿಡಿಗೇಡಿಗಳು ನಮ್ಮ ಹೋರಾಟವನ್ನು ಹಾಳು ಮಾಡುವ ಉದ್ದೇಶದಿಂದ ಗಲಾಟೆ ಪ್ರಾರಂಭಿಸಿದ್ದರೆ, ನಮ್ಮ ಸಮುದಾಯದ ಮೇಲೆ ಕಪ್ಪು ಚುಕ್ಕೆ ಬೀಳುವ ಅವಕಾಶ ಇರುತ್ತಿತ್ತು. ಆ ಹಿನ್ನಲೆಯಲ್ಲಿ ವಿಧಾನಸೌಧದ ಕಡೆಗೆ ಪಾದಯಾತ್ರೆಯಂಥ ನಿರ್ಧಾರಗಳಿಗೆ ಬೆಂಬಲ ನೀಡಲಿಲ್ಲ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಇದೆ. ಹಿಂದಿನ ರಾತ್ರಿ ಸಂಘದ ರಾಜ್ಯಾಧ್ಯಕ್ಷರಾದ ನಾಗನಗೌಡರು ಹಾಗೂ ಹಿರಿಯರೊಂದಿಗೆ ಸಭೆಯನ್ನು ಮಾಡಿದ್ದೆವು. ಆ ಸಭೆಯಲ್ಲಿ ಧರಣಿ ಅಥವಾ ಸತ್ಯಾಗ್ರಹದಂತಹ ನಿರ್ಧಾರಗಳಿಗೆ ಹೋಗಬಾರದು, ಒಂದು ತಾರ್ಕಿಕ ಅಂತ್ಯಕ್ಕೆ ಬರಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಅವರ ಸಲಹೆಯನ್ನು ನಾವು ಪಾಲಿಸಿದ್ದು, ಸಮುದಾಯದ ಭಾವನೆಗಳಿಗೆ ಒತ್ತಾಸೆಯಾಗಿದ್ದೇವೆ ಎಂದು ಹೇಳಿದರು.

ಸರಕಾರ ನಮಗೆ ಭರವಸೆ ನೀಡಿದೆ, ಸರಕಾರ ಕಾರ್ಯನಿರ್ವಹಣೆಗೆ ಅದರದ್ದೇ ಆದಂತಹ ಸಮಯ ಬೇಕು. ಸರಕಾರಕ್ಕೇ ನೇರವಾಗಿ ಕಿವಿ ಹಿಂಡಿ, ಮೂಗು ಹಿಡಿದು ಕೆಲಸ ಮಾಡಿಸಬೇಕು. ಆದರೆ, ಮೂಗು ಹಿಡಿಯುವ ಭರಾಟೆಯಲ್ಲಿ ಯಾರದ್ದೋ ಪ್ರಾಣ ತೆಗೆಯುವುದಿಲ್ಲ. ಸರಕಾರವನ್ನು ನಿತ್ರಾಣಗೊಳಿಸುವುದಿಲ್ಲ. ನಾವು ಸಮುದಾಯಕ್ಕೆ ಪ್ರಾಣ ಕೂಡಾ ನೀಡಲು ಸಿದ್ಧರಾಗಿದ್ದೇವೆ ಎಂದರು. 

ಬೆಣ್ಣೆ ಸರಕಾರದ ಕೈಯಲ್ಲಿ ಇದೆ. ಅದು ನಮ್ಮ ಕೈಯಲ್ಲಿ ಬಂದು ನಮ್ಮ ಆಹಾರ ಆಗಬೇಕು. ಅದನ್ನು ಹಾಳು ಮಾಡುವುದು ಸರಿಯಲ್ಲ. ನಮ್ಮ ಸಮುದಾಯದ ಯುವಕರಿಗೆ ಮೀಸಲಾತಿಯ ಮೂಲಕ ಶೈಕ್ಷಣಿಕ ಹಾಗೂ ಉದ್ಯೋಗ ಅವಕಾಶ ಒದಗಿಸುವುದು ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ಧರಣಿಗೆ ಮುಂದಾಗುವುದು ಸರಿಯಲ್ಲ

‘ಪಾದಯಾತ್ರೆಯ ನಂತರ ಧರಣಿ ಅಥವಾ ಸತ್ಯಾಗ್ರಹದಂತಹ ಹೋರಾಟಕ್ಕೆ ಮುಂದಾಗುವುದು ಸರಿಯಲ್ಲ. ಅದರಲ್ಲೂ ಸಾರ್ವಜನಿಕರ ಹಿತಾಸಕ್ತಿಗೆ, ಆಸ್ತಿಗೆ ಹಾನಿ ತರುವಂತಹ ಘಟನೆಗಳಿಗೆ ಅವಕಾಶ ಮಾಡಿಕೊಡುವ ವಿಷಯಗಳಿಗೆ ಆಸ್ಪದ ನೀಡಬಾರದು.’

-ವಚನಾನಂದ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X