Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯತ್ನಾಳ್ ಪ್ರಖರ ಹಿಂದುತ್ವವಾದಿ ನಿಜ....

ಯತ್ನಾಳ್ ಪ್ರಖರ ಹಿಂದುತ್ವವಾದಿ ನಿಜ. ಆದರೆ...: ಸ್ವಪಕ್ಷದ ಶಾಸಕನ ಬಗ್ಗೆ ಈಶ್ವರಪ್ಪ ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ22 Feb 2021 9:19 PM IST
share
ಯತ್ನಾಳ್ ಪ್ರಖರ ಹಿಂದುತ್ವವಾದಿ ನಿಜ. ಆದರೆ...: ಸ್ವಪಕ್ಷದ ಶಾಸಕನ ಬಗ್ಗೆ ಈಶ್ವರಪ್ಪ ಹೇಳಿದ್ದೇನು ?

ಶಿವಮೊಗ್ಗ,ಫೆ.22: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ದಾಖಲೆ ಸಮೇತ 11 ಪುಟದ ಉತ್ತರವನ್ನು ಹೈಕಮಾಂಡ್ ಗೆ ನೀಡಿದ್ದಾರೆ. ಇವರ ಉತ್ತರ ನೋಡಿ ಹೈಕಮಾಂಡ್ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ವಿರುದ್ಧ ಹೇಳಿಕೆ ಕೊಡುವುದು ಸರಿಯಲ್ಲ. ಅದನ್ನು ಒಪ್ಪಲು ಸಾಧ್ಯವಿಲ್ಲ. ಯತ್ನಾಳ್ ಪ್ರಖರ ಹಿಂದುತ್ವವಾದಿ ನಿಜ. ಆದರೆ ಏನೇ ವಿಚಾರವಿರಲಿ, ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಕಂಡಕಂಡಲ್ಲಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ಯತ್ನಾಳ್ ಬಗ್ಗೆ ಬಿಜೆಪಿ ರಾಜ್ಯ ಸಮಿತಿಯಿಂದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ. ಆದರೆ ಕೇಂದ್ರ ನಾಯಕರು ಯತ್ನಾಳ್ ಅವರಿಗೆ ನೋಟಿಸ್ ನೀಡಿದ್ದಾರೆ. ನೋಟೀಸ್ ಗೆ ಪ್ರತಿಕ್ರಿಯಿಸಿರುವ ಅವರು, ವಿಜಯೇಂದ್ರ, ಸಿಎಂ ಬಗ್ಗೆ ಯತ್ನಾಳ್ ಕಂಪ್ಲೇಂಟ್ ಮಾಡಿದ್ದಾರೆ. ಯತ್ನಾಳ್ ಬಳಿ ಡಾಕ್ಯುಮೆಂಟ್ ಏನಿದೆಯೋ ನೋಡೋಣ. ಯತ್ನಾಳ್ ಕೇಂದ್ರ ನಾಯಕರಿಗೆ ಡಾಕ್ಯುಮೆಂಟ್ ಸಹಿತ ಹೈಕಮಾಂಡ್ ಗೆ ಹನ್ನೊಂದು ಪುಟದ ಉತ್ತರ ನೀಡಿದ್ದೇನೆ ಎಂದಿದ್ದಾರೆ. ಇವರ ಉತ್ತರ ನೋಡಿ ಹೈಕಮಾಂಡ್ ಕ್ರಮ ಕೈಗೊಳ್ಳಲಿದೆ ಎಂದರು.

ಐಎಂಎ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಿಬಿಐ ತಗೆದುಕೊಳ್ಳುತ್ತಿರುವ ಬಗ್ಗೆ ನಾನು ರಾಜಕೀಯವಾಗಿ ತೆಗೆದುಕೊಳ್ಳುವುದಿಲ್ಲ. ಐಎಂಎಯಿಂದ ಸಿದ್ದರಾಮಯ್ಯ, ಕುಮಾರಸ್ವಾಮಿ, ಆರ್.ವಿ.ದೇಶಪಾಂಡೆ, ಪರಮೇಶ್ವರ್ ಅವರಿಗೂ ಹಣ ಬಂದಿದೆ ಎಂಬ ಆರೋಪ ಕೇಳಿ ಬಂದಿದೆ. ಇಲ್ಲಿ ನಾನು ರಾಜಕಾರಣ ಮಾಡುವುದಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೆ ಉಪ್ಪು ತಿಂದವರು ನೀರು ಕುಡಿಯುತ್ತಾರೆ ಅಷ್ಟೇ ಎಂದರು.

ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ರಾಜ್ಯದಲ್ಲಿ ಹಲವು ಸಮಾಜದವರು ಮೀಸಲಾತಿ ಕೇಳುತ್ತಿದ್ದಾರೆ. ಯಾವ ಸಮಾಜಕ್ಕೆ ಅರ್ಹತೆ ಇದೆಯೋ ಅವರಿಗೆ ಮೀಸಲಾತಿ ನೀಡಬೇಕು ಎಂಬುದು ಅಂಬೇಡ್ಕರ್ ಆಶಯವಾಗಿತ್ತು. ಇಂದು ಸ್ವಾಮೀಜಿಗಳು ಮೀಸಲಾತಿ ಹೋರಾಟದ ನೇತೃತ್ವ ವಹಿಸಿರುವುದು ಸ್ವಾಗತಾರ್ಹ ವಿಷಯ ಎಂದರು.

ಹುಣಸೋಡು ಸ್ಫೋಟ ಪ್ರಕರಣದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಕರಣದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಘಟನೆ ನಡೆದು ಒಂದು ತಿಂಗಳು ಆಗಿದೆ. ಸ್ಫೋಟ ಪ್ರಕರಣದ ತನಿಖೆ ಉತ್ತಮ ಹಾದಿಯಲ್ಲಿ ಸಾಗುತ್ತಿದೆ. ಪ್ರಕರಣ ಕುರಿತು ಮಾಹಿತಿ ಪಡೆಯಲು ತನಿಖಾಧಿಕಾರಿಗಳು ಜಿಲ್ಲಾಧಿಕಾರಿಯನ್ನು ಕರೆದಿದ್ದಾರೆ. ಯಾವಾಗ ವರದಿ ಬರುತ್ತದೆ ಎಂಬುದನ್ನು ಕಾದು ನೋಡೋಣ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X