Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿಂದುಳಿದ ವರ್ಗಗಳ ಶೋಷಣೆಗೆ ಮುಂದಾದರೆ...

ಹಿಂದುಳಿದ ವರ್ಗಗಳ ಶೋಷಣೆಗೆ ಮುಂದಾದರೆ ಸುಮ್ಮನಿರಲ್ಲ: ಸರಕಾರಕ್ಕೆ ಎಚ್ಚರಿಕೆ ನೀಡಿದ ಬ್ರಹ್ಮಾನಂದ ಸ್ವಾಮೀಜಿ

ಹಿಂದುಳಿದ ವರ್ಗ 2ಎ ಹಿತರಕ್ಷಣಾ ವೇದಿಕೆಯ ಬೃಹತ್ ಪ್ರತಿಭಟನಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ22 Feb 2021 10:43 PM IST
share
ಹಿಂದುಳಿದ ವರ್ಗಗಳ ಶೋಷಣೆಗೆ ಮುಂದಾದರೆ ಸುಮ್ಮನಿರಲ್ಲ: ಸರಕಾರಕ್ಕೆ ಎಚ್ಚರಿಕೆ ನೀಡಿದ ಬ್ರಹ್ಮಾನಂದ ಸ್ವಾಮೀಜಿ

ಭಟ್ಕಳ, ಫೆ.22: ಪಂಚಮಸಾಲಿಗಳ ಪ್ರತಿರೋಧಕ್ಕೆ ಮಣಿದು ಒಂದು ವೇಳೆ ಸರಕಾರ ಹಿಂದುಳಿದವರ ಶೋಷಣೆಗೆ ಮುಂದಾದರೆ ನಾವು ಸುಮ್ಮನೆ ಕೂಡುವುದಿಲ್ಲ ಸ್ವತಃ ನಾನೇ ಸುಪ್ರೀಂ ಕೋರ್ಟ್ ನಲ್ಲಿ ಸರಕಾರದ ವಿರುದ್ಧ ಹೋರಾಡುವುದಾಗಿ ಉಜಿರೆಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸರಕಾರಕ್ಕೆ ಬಹಿರಂಗವಾಗಿ ಎಚ್ಚರಿಕೆ ನೀಡಿದರು.

ಸೋಮವಾರ ಸಾಗರ ರಸ್ತೆಯ ಪೊಲೀಸ್ ಮೈದಾನದಲ್ಲಿ ನಡೆದ ಹಿಂದುಳಿದ ವರ್ಗ 2ಎ ಹಿತರಕ್ಷಣಾ ವೇದಿಕೆಯ ಬೃಹತ್ ಪ್ರತಿಭಟನಾ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

ಹಿಂದುಳಿದವರ ಹಕ್ಕನ್ನು ಯಾವುದೇ ರೀತಿಯಲ್ಲಿ ಕಸಿದುಕೊಳ್ಳಬಾರದು. ನಮ್ಮ ಅನ್ನದ ಬಟ್ಟಲನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಯಾರೂ ಮಾಡಬಾರದು ಎಂದ ಸ್ವಾಮಿಜಿ, ಸಂವಿಧಾನ ಎಂಬುದು ಭಗವಂತ ಇದ್ದ ಹಾಗೆ. ಸೃಷ್ಟಿ, ಸ್ಥಿತಿ, ಲಯ ಕಾಯ್ದುಕೊಳ್ಳುತ್ತದೆ. ಅದಕ್ಕೆ ಪೂರಕವಾಗಿ ಅಂಬೇಡ್ಕರರ ಸಂವಿಧಾನದ ಕಲಂ 14, 15 ತಾರತಮ್ಯ ಮಾಡಬಾರದು ಎಂದಿದೆ. ಕಲಂ 16ರಲ್ಲಿ ಬಡವರ, ಅತಿ ಹಿಂದುಳಿದವರು, ಅತಿ ಹಿಂದುಳಿದ ಪ್ರದೇಶದಲ್ಲಿರುವವರಿಗೆ ಅವರ ಹಕ್ಕನ್ನು ಕಾಯ್ದಿರಿಸಿಕೊಳ್ಳುವ ಅವಕಾಶ ನೀಡಿದೆ. ಅಲ್ಲದೆ, ಆ ಹಕ್ಕನ್ನು ಸಂವಿಧಾನ ಕಾಯ್ದುಕೊಂಡು ಬಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಸರಕಾರಗಳು, ನಾಯಕರು, ಸ್ವಾಮೀಜಿಗಳು ಅವರವರ ಜನರನ್ನು ಓಲೈಸಲು, ಸಂವಿಧಾನದ ಸಿದ್ಧಾಂತವನ್ನು, ಇತಿಮಿತಿಯನ್ನು ಗಾಳಿಗೆ ತೂರುವಂಥದ್ದಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಮಾವೇಶದ ಮೂಲಕ ಸರಕಾರಕ್ಕೊಂದು ಸಂದೇಶ ನೀಡಲಿದ್ದೇವೆ. ಈಗ ಶಾಂತ ರೀತಿಯ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದಕ್ಕೆ ಪ್ರತಿಫಲ ಸಿಗದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೀವ್ರತರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಿವೃತ್ತ ಪ್ರಾಧ್ಯಾಪಕ ಹೊನ್ನಾವರದ ಡಾ.ಶ್ರೀಪಾದ್ ಶೆಟ್ಟಿ ಮಾತನಾಡಿ, ಈ ಹೋರಾಟ ನಮ್ಮ ಅಸ್ಮಿತೆ ಮತ್ತು ಬದುಕಿನ ಹೋರಾಟವಾಗಿದ್ದು, ಸಮುದ್ರದಲ್ಲಿನ ದೊಡ್ಡ ತಿಮಿಂಗಿಲಗಳು ಚಿಕ್ಕಪುಟ್ಟ ಮೀನುಗಳನ್ನು ನುಂಗುವ ರೀತಿಯಲ್ಲಿ ರಾಜ್ಯದ ದೊಡ್ಡ ಸಮುದಾಯವೊಂದು ಹಿಂದುಳಿದ ವರ್ಗಗಳಿಗೆ ಸೇರಿದ ಚಿಕ್ಕಪುಟ್ಟ ಸಮುದಾಯಗಳನ್ನು ನುಂಗಲು ಹೊಂಚು ಹಾಕುತ್ತಿದೆ. ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನಾ ಹೋರಾಟಗಳು ನಡೆಯಲಿವೆ ಎಂದರು.

ಹಿಂದುಳಿದ ವರ್ಗ 2ಎ ಹಿತರಕ್ಷಣಾ ಹೋರಾಟ ವೇದಿಕೆಯ ಅಧ್ಯಕ್ಷ ಶಾಸಕ ಜೆ.ಡಿ.ನಾಯ್ಕ ಪ್ರಸ್ತಾವಿಕ ಮಾತನಾಡಿ, ಸಮಾವೇಶ ತೆಗೆದುಕೊಂಡ ನಿರ್ಣಯಗಳನ್ನು ಮಂಡಿಸಿದರು.

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಸೂರಜ್ ಸೋನಿ, ಸುಭದ್ರ ದೇವಾಡಿಗ, ಸುಭಾಶ್ ಶೇಟ್ಟಿ ಸೇರಿದಂತೆ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ವಿವಿಧ ಮುಖಂಡರು ವೇದಿಕೆಯಲ್ಲಿದ್ದರು. ಗಂಗಾಧರ್ ನಾಯ್ಕ ನಿರೂಪಿಸಿ, ವಂದಿಸಿದರು.

ನಾನು ಹಿಂದುಳಿದ ವರ್ಗದ ಓರ್ವ ಸದಸ್ಯನಾಗಿ ಈ ಸಮಾವೇಶದಲ್ಲಿ ಭಾಗವಹಿಸಿದ್ದೇನೆ. ನಾನು ಬಿಜೆಪಿ ಪಕ್ಷದ ಶಾಸಕನಾಗಿ ಭಾಗವಹಿಸಿಲ್ಲ. ಈ ಭಾಗದ ಎಲ್ಲ ಹಿಂದುಳಿದ ವರ್ಗಕ್ಕೆ ಸೇರಿದ ಶಾಸಕರಿಗೆ ಕಿವಿ ಮಾತು ಹೇಳುವುದೆಂದರೆ ನೀವೆಲ್ಲರೂ ಕೂಡ ಈ ಹೋರಾಟಕ್ಕೆ ಬೆನ್ನೆಲುಬಾಗಿ ನಿಲ್ಲಬೇಕು. ಇದು ನಮ್ಮ ಮುಂದಿನ ಪೀಳಿಗೆಯ ಅಳಿವು ಉಳಿವಿನ ಪ್ರಶ್ನೆಯಾಗಿದೆ.
ಸುನಿಲ್ ನಾಯ್ಕ, ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X