Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉನ್ನಾವೊ: ಇಬ್ಬರು ಬಾಲಕಿಯರ ಹತ್ಯೆ...

ಉನ್ನಾವೊ: ಇಬ್ಬರು ಬಾಲಕಿಯರ ಹತ್ಯೆ ಪ್ರಕರಣ; 8 ಟ್ವಿಟ್ಟರ್ ಹ್ಯಾಂಡಲ್ ವಿರುದ್ಧ ಎಫ್ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ22 Feb 2021 10:49 PM IST
share
ಉನ್ನಾವೊ: ಇಬ್ಬರು ಬಾಲಕಿಯರ ಹತ್ಯೆ ಪ್ರಕರಣ; 8 ಟ್ವಿಟ್ಟರ್ ಹ್ಯಾಂಡಲ್ ವಿರುದ್ಧ ಎಫ್ಐಆರ್ ದಾಖಲು

ಲಕ್ನೋ, ಫೆ. 22: ಉತ್ತರಪ್ರದೇಶದ ಆದಿತ್ಯನಾಥ್ ಸರಕಾರ ಸಾಮಾಜಿಕ ಮಾಧ್ಯಮದ ‘ಅಪರಾಧಿ’ಗಳನ್ನು ನಿಗ್ರಹಿಸಲು ಆರಂಭಿಸಿದೆ. ಜಿಲ್ಲೆಯ ಬಬುರ್ಹಾ ಗ್ರಾಮದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೃತದೇಹಗಳು ಪತ್ತೆಯಾಗಿರುವುದಕ್ಕೆ ಸಂಬಂಧಿಸಿ ಹಾದಿ ತಪ್ಪಿಸುವ ಮಾಹಿತಿಯನ್ನು ಹರಡುತ್ತಿರುವ ಆರೋಪದಲ್ಲಿ ಹಿರಿಯ ಪತ್ರಕರ್ತೆ ಬರ್ಖಾ ದತ್ತ್ ಅವರ @themojostory ಸೇರಿದಂತೆ 8 ಟ್ವಿಟ್ಟರ್ ಹ್ಯಾಂಡಲ್ ಹಾಗೂ ಅದರ ಬಳಕೆದಾರರ ವಿರುದ್ಧ ಉನ್ನಾವೊ ಪೊಲೀಸರು ರವಿವಾರ ಎಫ್ಐಆರ್ ದಾಖಲಿಸಿದ್ದಾರೆ. 

ಎಫ್ಐಆರ್ ದಾಖಲಿಸಿದ ಇತರ ಹ್ಯಾಂಡಲ್ಗಳಲ್ಲಿ @bhimsenaChief (ನವಾಬ್ ಸತ್ಪಾಲ್), @NilimDutta, @janjagranlive, @SurajKrBaudh (ಅಜಾದ್ ಸಮಾಜ ಪಕ್ಷದ ವಕ್ತಾರ), @vijayambedkarUP, @Abhaykumarazad97 @Rahuldiwkr ಕೂಡಾ ಸೇರಿವೆ.

ತನ್ನ ಟ್ವೀಟ್ಗಳ ಮೂಲಕ ತಪ್ಪು ಮಾಹಿತಿ ಹರಡಿದ ಆರೋಪದಲ್ಲಿ ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಉದಿತ್ ರಾಜ್ ಅವರ ವಿರುದ್ಧ ಉನ್ನಾವೊ ಪೊಲೀಸರು ಶನಿವಾರ ಬೆಳಗ್ಗೆ ಪ್ರಕರಣ ದಾಖಲಿಸಿದ್ದರು. ಉನ್ನಾವೊದ ಹೊಲದಲ್ಲಿ ಪತ್ತೆಯಾದ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿತ್ತು ಹಾಗೂ ಬಾಲಕಿಯರ ಕುಟುಂಬದ ಅಭಿಪ್ರಾಯಕ್ಕೆ ವಿರುದ್ಧವಾಗಿ ಅಂತ್ಯ ಕ್ರಿಯೆ ನಡೆಸಲಾಗಿತ್ತು ಎಂದು ಈ 8 ಟ್ವಿಟ್ಟರ್ ಹ್ಯಾಂಡಲ್ನ ಬಳಕೆದಾರರು ಟ್ವೀಟ್ ಮಾಡಿದ್ದರು ಎಂದು ಉನ್ನಾವೊ ಪೊಲೀಸರು ಪ್ರತಿಪಾದಿಸಿದ್ದಾರೆ. ಗಲಬೆ ಕಾರಣವಾಗುವ ಉದ್ದೇಶದಿಂದ ವದಂತಿ ಹರಡಿದ ಆರೋಪದ ಅಡಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಈ ಟ್ವಿಟ್ಟರ್ ಬಳಕೆದಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ಸಾಮಾಜಿಕ ಮಾಧ್ಯಮದ ಮೂಲಕ ಉದ್ವಿಗ್ನತೆಯ ಹೆಚ್ಚಿಸಲು ಹಾಗೂ ಕೋಮ ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸುವ ಯಾರನ್ನೂ ಸುಮ್ಮನೆ ಬಿಡುವುದಿಲ್ಲ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ, ಟ್ವೀಟ್ಗಳ ಬಗ್ಗೆ ತನಿಖೆ ನಡೆಸಲಾಗುವುದು. ಆಡಳಿತಾರೂಡ ಸರಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನವಾಗಿ ನಿರ್ದಿಷ್ಟ ಪಕ್ಷ, ಘಟಕ ಹಾಗೂ ಗುಂಪುಗಳಿಗೆ ಸಂಬಂಧಿಸಿ ಜನರು ಉದ್ದೇಶಪೂರ್ವಕವಾಗಿ ಈ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಅಲ್ಲದೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ ಎಂದು ಉನ್ನಾವೊ ಪೊಲೀಸ್ ಅಧೀಕ್ಷಕ ಆನಂದ್ ಕುಲಕರ್ಣಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X