ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಸಂಪುಟ ಅಸ್ತು
ಹೊಸದಿಲ್ಲಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಬಹುಮತ ಸಾಬೀತು ವೇಳೆ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಕುರಿತ ಪ್ರಸ್ತಾವಕ್ಕೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಸಂಪುಟ ನಿರ್ಧಾರವನ್ನು ಬುಧವಾರ ಘೋಷಿಸಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಪುದುಚೇರಿಯ ಮುಖ್ಯಮಂತ್ರಿ ರಾಜೀನಾಮೆ ನೀಡಿದ ಬಳಿಕ ಯಾವ ಪಕ್ಷವೂ ಅಲ್ಲಿ ಸರಕಾರ ರಚಿಸಲು ಮುಂದೆ ಬಾರದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಲೆಫ್ಟಿನೆಂಟ್ ಜನರಲ್ ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದು, ಕೇಂದ್ರ ಸಚಿವ ಸಂಪುಟ ಅದನ್ನು ಅನುಮೋದಿಸಿದೆ ಎಂದು ಸಚಿವರು ಹೇಳಿದ್ದಾರೆ.
Next Story