Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಾಸಗೀಕರಣ ಮಂತ್ರ ಜಪಿಸಿದ ಮೋದಿ :...

ಖಾಸಗೀಕರಣ ಮಂತ್ರ ಜಪಿಸಿದ ಮೋದಿ : ‘ಉದ್ಯಮಗಳನ್ನು ನಡೆಸುವುದು ಸರಕಾರದ ಕೆಲಸವಲ್ಲ’

ವಾರ್ತಾಭಾರತಿವಾರ್ತಾಭಾರತಿ24 Feb 2021 10:12 PM IST
share
ಖಾಸಗೀಕರಣ ಮಂತ್ರ ಜಪಿಸಿದ ಮೋದಿ : ‘ಉದ್ಯಮಗಳನ್ನು ನಡೆಸುವುದು ಸರಕಾರದ ಕೆಲಸವಲ್ಲ’

ಹೊಸದಿಲ್ಲಿ,ಫೆ.24: ಸಾರ್ವಜನಿಕ ರಂಗದ ಉದ್ಯಮಗಳ ಖಾಸಗೀಕರಣದ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಮತ್ತೊಮ್ಮೆ ಪ್ರಬಲವಾಗಿ ಧ್ವನಿಯೆತ್ತಿದ್ದು, ಉದ್ಯಮ,ವಹಿವಾಟುಗಳನ್ನು ನಡೆಸುವುದು ಸರಕಾರದ ಕೆಲಸವಲ್ಲವೆಂದು ಹೇಳಿದ್ದಾರೆ.

 ಈ ವರ್ಷದ ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ವಿವಿಧ ಆರ್ಥಿಕ ಸುಧಾರಣಾ ಕ್ರಮಗಳ ಬಗ್ಗೆ ಮಾತನಾಡಿದ ಪ್ರಧಾನಿ, ಕೇಂದ್ರ ಸರಕಾರವು ‘ನಗದೀಕರಣ ಹಾಗೂ ಆಧುನೀಕರಣ’ ಎಂಬ ಮಂತ್ರದೊಂದಿಗೆ ಮುನ್ನಡೆಯಲಿದೆಯೆಂದರು.
 ಹೂಡಿಕೆ ಹಾಗೂ ಸಾರ್ವಜನಿಕ ಅಸ್ತಿ ನಿರ್ವಹಣಾ ಇಲಾಖೆ (ಡಿಐಪಿಎಎಂ) ಆಯೋಜಿಸಿದ್ದ ಖಾಸಗೀಕರಣ ಕುರಿತ ವೆಬಿನಾರ್ನಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
 ಖಾಸಗೀಕರಣದಿಂದಾಗಿ ಕೇಂದ್ರ ಸರಕಾರವು ಧನಸಂಪಾದನೆಯಾಗಲಿದೆ. ಕೇಂದ್ರ ಸರಕಾರ ತೆರವುಗೊಳಿಸಿದ ಜಾಗವನ್ನು ಖಾಸಗಿ ವಲಯವು ತುಂಬಲಿದ್ದು, ಅದು ಅಪಾರ ಮೊತ್ತದ ಹೂಡಿಕೆ ಹಾಗೂ ಅತ್ಯುತ್ತಮವಾದ ಜಾಗತಿಕ ಔದ್ಯಮಿಕ ಆಚರಣೆಗಳನ್ನು ತರಲಿದೆ ಎಂದವರು ಹೇಳಿದರು.
 ಖಾಸಗೀಕರಣವನ್ನು ಪ್ರಬಲವಾಗಿ ಪ್ರತಿಪಾದಿಸಿದ ಪ್ರಧಾನಿ, ಸಾರ್ವಜನಿಕ ರಂಗದ ಹಲವಾರು ಉದ್ಯಮಗಳು ನಷ್ಟದಲ್ಲಿ ನಡೆಯುತ್ತಿದ್ದು ಅವು ತೆರಿಗೆ ಪಾವತಿದಾರರ ಹಣವನ್ನೇ ಆಧರಿಸಿಕೊಂಡು ನಡೆಯುತ್ತಿವೆಯೆಂದವರು ಹೇಳಿದರು.

ರೋಗಗ್ರಸ್ತ ಸಾರ್ವಜನಿಕರಂಗದ ಉದ್ಯಮಗಳನ್ನು ಆರ್ಥಿಕ ನೆರವನ್ನು ನೀಡುವುದು ಆರ್ಥಿಕತೆಗೆ ಹೊರೆಯಾಗಲಿದೆ ಹಾಗೂ ಪರಂಪರಾಗತವಾದುದೆಂಬ ಏಕೈಕ ಕಾರಣಕ್ಕಾಗಿ ಅದನ್ನು ನಷ್ಟದಲ್ಲಿ ನಡೆಸಿಕೊಂಡು ಹೋಗಬಾರದೆಂದು ಪ್ರಧಾನಿ ಅಭಿಪ್ರಾಯಿಸಿದರು.
 ಖಾಸಗಿ ವಲಯವು ಉದ್ಯಮರಂಗಕ್ಕೆ ದಕ್ಷತೆಯನ್ನು ತಂದುಕೊಡಲಿದೆ ಹಾಗೂ ಉದ್ಯೋಗಗಳನ್ನು ಸೃಷ್ಟಿಸಲಿದೆಯೆಂದು ಪ್ರಧಾನಿ ಹೇಳಿದರು.
ಸರಕಾರದ ಬಳಿ ಹಲವಾರು ಸಮರ್ಥವಾಗಿ ಉಪಯೋಗವಾಗದೆ ಇರುವ ಆಸ್ತಿಗಳಿದ್ದು ಅವುಗಳ ವಿಕ್ರಯದಿಂದ 2.5 ಲಕ್ಷ ಕೋಟಿ ರೂ. ದೊರೆಯಲಿದೆಯೆಂದು ಪ್ರಧಾನಿ ಹೇಳಿದರು. ನಾಲ್ಕು ಆಯಕಟ್ಟಿನ ವಲಯಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಲಯಗಳ ಖಾಸಗೀಕರಣವನ್ನು ನಡೆಸಲು ಸರಕಾರವು ಬದ್ಧವಾಗಿದೆಯೆಂದು ಪ್ರಧಾನಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X