Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣಾ ವ್ಯವಸ್ಥೆ ಬದಲಾಗದೆ ಸಂವಿಧಾನದ...

ಚುನಾವಣಾ ವ್ಯವಸ್ಥೆ ಬದಲಾಗದೆ ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲಾಗದು: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ24 Feb 2021 10:49 PM IST
share
ಚುನಾವಣಾ ವ್ಯವಸ್ಥೆ ಬದಲಾಗದೆ ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲಾಗದು: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆ. 24: ‘ಚುನಾವಣಾ ವ್ಯವಸ್ಥೆ ಬದಲಾಗದ ಹೊರತು ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲು ಸಾಧ್ಯವಿಲ್ಲ. ಮೌಲ್ಯಗಳ ರಕ್ಷಣೆ ಮತ್ತು ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ಗಂಭೀರವಾದ ಚಿಂತನೆ ನಡೆಯಬೇಕು. ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು. ನಾನೂ ಸೇರಿದಂತೆ ಇದು ಎಲ್ಲರ ಜವಾಬ್ದಾರಿ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ‘ಕಾಮನ್‍ವೆಲ್ತ್ ಸಂಸದೀಯ ಸಂಘ' ಕರ್ನಾಟಕ ಶಾಖೆ ವತಿಯಿಂದ ‘ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ' ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಬುದ್ಧ ಮತ್ತು ಬಸವಣ್ಣನವರ ಕಾಲದಲ್ಲಿಯೇ ಸಂಸದೀಯ ವ್ಯವಸ್ಥೆ ಇತ್ತು. ಈ ಕಾರಣಕ್ಕಾಗಿಯೇ ಬಸವಣ್ಣನವರು ಅನುಭವ ಮಂಟಪ ಸ್ಥಾಪನೆ ಮಾಡಿದರು' ಎಂದು ಸ್ಮರಿಸಿದರು.

‘ಇತ್ತೀಚಿನ ದಿನಗಳಲ್ಲಿ ಸಂಸದೀಯ ಮೌಲ್ಯಗಳು ಕುಸಿಯುತ್ತಿರುವುದಂತೂ ನಿಜ. ಅದನ್ನು ತಡೆಯಲೇಬೇಕು. ಅದು ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ವ್ಯವಸ್ಥೆ ಇರಬೇಕು. ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವವನ್ನು ಪ್ರಜಾಪ್ರಭುತ್ವ ಒಳಗೊಂಡಿರಬೇಕು. ಈ ಯಾವುದೂ ಇಲ್ಲದಿದ್ದರೆ ದೇಶ ಉಳಿಯುವುದು ಕಷ್ಟ' ಎಂದು ಸಿದ್ದರಾಮಯ್ಯ ಎಚ್ಚರಿಸಿದರು.

‘ಯಾವುದೇ ಬದಲಾವಣೆಗೆ ನಮ್ಮ ಸಂಪೂರ್ಣ ಸಹಮತ ಇದೆ. ಓದಿಕೊಂಡವರು ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸಭೆ, ವಿಧಾನ ಪರಿಷತ್ತು ಮತ್ತು ಲೋಕಸಭೆಗೆ ಆಯ್ಕೆಯಾಗಿ ಬರಬೇಕು ಎಂಬುದೇನೋ ಸರಿ. ಆದರೆ, ಜಾತಿ ಭಾವನೆ ವಿದ್ಯಾವಂತರಲ್ಲಿಯೇ ಹೆಚ್ಚು. ಇದು ಅತ್ಯಂತ ಅಪಾಯಕಾರಿ' ಎಂದು ಸಿದ್ದರಾಮಯ್ಯ ನುಡಿದರು.

ಹೃದಯ ಅಗತ್ಯ: ‘ಮಾತೃ ಹೃದಯದವರು ಮಾತ್ರ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಲ್ಲರು' ಎಂದ ಸಿದ್ದರಾಮಯ್ಯ, ‘ವಿಧಾನ ಮಂಡಲ ಕಲಾಪವನ್ನು ಎಷ್ಟು ದಿನ ನಡೆಸಬೇಕು ಎಂಬ ಸ್ವಾತಂತ್ಯ ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಇರಬೇಕು' ಎಂದು ಪ್ರತಿಪಾದಿಸಿದರು.

‘ವಿಧಾನ ಮಂಡಲ ಕಲಾಪದ ಅವಧಿಯನ್ನು ಸರಕಾರ ನಿರ್ಧಾರ ಮಾಡುವುದು ಸರಿಯಲ್ಲ. ವರ್ಷದಲ್ಲಿ ಕನಿಷ್ಠ 60 ದಿನಗಳ ಕಾಲ ಕಲಾಪ ನಡೆಯಬೇಕು ಎಂಬ ನಿಯಮವಿದೆ. ಆ ನಿಯಮಕ್ಕೆ ಬದ್ಧವಾಗಿ ಎಲ್ಲರೂ ನಡೆದುಕೊಳ್ಳಬೇಕು. ಹೆಚ್ಚು ದಿನ ಕಲಾಪ ನಡೆದರೆ ಅನುಕೂಲ' ಎಂದು ಸಿದ್ದರಾಮಯ್ಯ ಹೇಳಿದರು.

‘ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1973ರಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲಾಯಿತು. ಇದಕ್ಕೆ ಪೂರ್ವಭಾವಿಯಾಗಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾರಿ ಚರ್ಚೆ ನಡೆದಿತ್ತು. ಆದರೆ, ಇದೀಗ ತರಾತುರಿಯಲ್ಲಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ. ಒಂದೇ ದಿನದಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗುತ್ತಿದೆ. ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಚರ್ಚೆಗೆ ಅವಕಾಶ ಸಿಗಲೇಬೇಕು. ಅವಸರ ಮಾಡಬಾರದು. ವಿಧೇಯಕ ಮಂಡಿಸಿ ಒಂದೇ ದಿನದಲ್ಲಿ ಅಂಗೀಕಾರ ಮಾಡಿ, ಸುಗ್ರೀವಾಜ್ಞೆ ಜಾರಿಗೆ ತರುವ ಅಭ್ಯಾಸ ಒಳ್ಳೆಯದಲ್ಲ ಎಂದು ಸಿದ್ದರಾಮಯ್ಯ, ಸರಕಾರದ ಕ್ರಮವನ್ನು ಖಂಡಿಸಿದರು.

‘ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವುದನ್ನು ತಪ್ಪಿಸಲು ಕಾನೂನು (ಹತ್ತನೇ ಶೆಡ್ಯೂಲ್) ಜಾರಿಗೆ ತರಲಾಯಿತು. ಆದರೂ, ಶಾಸಕರು ರಂಗೋಲಿ ಕೆಳಗೆ ನುಸುಳುತ್ತಾರೆ. ಚುನಾವಣಾ ವ್ಯವಸ್ಥೆಯಲ್ಲಿ ಬದಲಾವಣೆ ತರದಿದ್ದರೆ ಸಂವಿಧಾನದ ಮೌಲ್ಯಗಳು ಕುಸಿಯುವುದನ್ನು ತಪ್ಪಿಸಲು ಸಾಧ್ಯವಿಲ್ಲ' ಎಂದು ಅವರು ನುಡಿದರು.

‘ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ, ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು. ಕ್ರಿಮಿನಲ್‍ಗಳು, ಶ್ರೀಮಂತರು, ಹೊಡಿಬಡಿ ಸಂಸ್ಕೃತಿಯವರು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ. ಚುನಾವಣೆ ಎಂದರೆ ವ್ಯಾಪಾರ, ಹರಾಜು ಎನ್ನುವಂತಾಗಿದೆ. ಹೀಗಾಗಿ ಚುನಾವಣಾ ವ್ಯವಸ್ಥೆ ದಿಕ್ಕಾಪಾಲಾಗಿದೆ. ಮಾಧ್ಯಮದವರಂತೂ ಉದ್ಯಮಿ, ಪತ್ರಕರ್ತ, ರಾಜಕಾರಣಿ ಹೀಗೆ ಎಲ್ಲ ಪಾತ್ರ ನಿಭಾಯಿಸುವುದರಿಂದ ನಾಲ್ಕನೇ ಆಧಾರಸ್ತಂಭ ಗಟ್ಟಿಯಾಗಿ ನಿಲ್ಲುವುದಾದರೂ ಹೇಗೆ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

‘ಪಕ್ಷಾಂತರ ನಿಷೇಧ ಕಾಯ್ದೆ ಶೆಡ್ಯೂಲ್ 10 ಇನ್ನಷ್ಟು ಬಲಗೊಳ್ಳಬೇಕು. ಪಕ್ಷಾಂತರದ ಪಿಡುಗನ್ನು ಕಡ್ಡಾಯವಾಗಿ ತಪ್ಪಿಸಬೇಕು. ಈ ಯಾವುದೂ ಆಗದೆ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುವುದು ಹೇಗೆ? ಎಂದ ಅವರು, ಶಾಸಕರೇ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಕೂರುವುದಿಲ್ಲ. ವಾಟಾಳ್ ನಾಗರಾಜ್ ಶಾಸಕರಾಗಿದ್ದಾಗ ಬೆಳಗ್ಗೆ ಬಂದರೆ ಕಲಾಪ ಮುಗಿಯುವವರೆಗೆ ಹೋಗುತ್ತಿರಲಿಲ್ಲ. ಸಚಿವರೇ ಈಗ ಕಲಾಪದಲ್ಲಿ ಭಾಗವಹಿಸುವುದಿಲ್ಲ. ಇನ್ನು ಶಾಸಕರಿಗೆ ಬುದ್ಧಿ ಹೇಳುವುದಾದರೂ ಹೇಗೆ? ಸಂಸದೀಯ ವ್ಯವಸ್ಥೆ ನಮ್ಮ ದೇಶಕ್ಕೆ ಹೊಸದೇನೂ ಅಲ್ಲ. ಈ ವ್ಯವಸ್ಥೆ ಸುಧಾರಣೆ ಆಗಬೇಕು' ಎಂದು ಅವರು ಸಲಹೆ ಮಾಡಿದರು.

‘ಚುನಾವಣೆಯನ್ನು ಸರಕಾರವೇ ನಡೆಸುವ ವ್ಯವಸ್ಥೆ ಜಾರಿಗೆ ತರಬೇಕು. ನಾಮಪತ್ರ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪ್ರಚಾರಕ್ಕೆ ಹೋಗುವಂತಿರಬಾರದು. ಅಧಿಕಾರಕ್ಕಾಗಿ ನಾವೇ ಮೌಲ್ಯಗಳನ್ನು ನಾಶ ಮಾಡುತ್ತಿದ್ದೇವೆ. ಈ ವ್ಯವಸ್ಥೆ ಸುಧಾರಣೆ ತರಬೇಕಾದರೆ ರಾಜಕೀಯ ಪಕ್ಷಗಳಲ್ಲಿಯೂ ಬದಲಾವಣೆ ಅನಿವಾರ್ಯ'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X