Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೀರವ್ ಮೋದಿಯನ್ನು ಭಾರತಕ್ಕೆ...

ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಬಹುದು: ಇಂಗ್ಲೆಂಡ್ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ25 Feb 2021 4:48 PM IST
share
ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಬಹುದು: ಇಂಗ್ಲೆಂಡ್ ನ್ಯಾಯಾಲಯ


ಲಂಡನ್,ಫೆ.25: 14,000 ಕೋ.ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ವಂಚನೆ ಮತ್ತು ಅಕ್ರಮ ಹಣ ವಹಿವಾಟು ಆರೋಪಗಳಲ್ಲಿ ಬೇಕಾಗಿರುವ ವಜ್ರಾಭರಣಗಳ ವ್ಯಾಪಾರಿ ನೀರವ ಮೋದಿಯನ್ನು ಭಾರತಕ್ಕೆ ಹಸ್ತಾಂತರ ಮಾಡುವಂತೆ ಇಲ್ಲಿಯ ವೆಸ್ಟ್ ಮಿನ್‌ಸ್ಟರ್ಸ್ ಕೋರ್ಟ್ ಗುರುವಾರ ತೀರ್ಪು ನೀಡಿದೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಮೋದಿಯ ಮಾನಸಿಕ ಆರೋಗ್ಯ ಹದಗೆಟ್ಟಿದೆ ಮತ್ತು ಭಾರತದಲ್ಲಿಯ ಜೈಲುಗಳಲ್ಲಿ ಸ್ಥಿತಿ ಚೆನ್ನಾಗಿಲ್ಲ ಇತ್ಯಾದಿ ವಾದಗಳನ್ನು ನ್ಯಾಯಾಲಯವು ತಳ್ಳಿಹಾಕಿದೆ. ಭಾರತಕ್ಕೆ ಮೋದಿಯ ಹಸ್ತಾಂತರ ಮಾನವ ಹಕ್ಕುಗಳಿಗೆ ಅನುಗುಣವಾಗಿದೆ ಎಂದು ಹೇಳಿದ ಜಿಲ್ಲಾ ನ್ಯಾಯಾಧೀಶ ಸ್ಯಾಮ್ಯುಯೆಲ್ ಗೂಝಿ ಅವರು,ತನ್ನ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಹಕ್ಕು ಆರೋಪಿಗೆ ಇದೆ ಎಂದು ತಿಳಿಸಿದರು.

ಭಾರತ ಸರಕಾರದ ನಿವೇದನೆಗಳನ್ನು ಪುರಸ್ಕರಿಸಿದ ನ್ಯಾಯಾಧೀಶರು,ಹಸ್ತಾಂತರ ಮಾಡಿದರೆ ಮೋದಿಗೆ ನ್ಯಾಯ ದೊರಕುವುದಿಲ್ಲ ಎನ್ನುವುದಕ್ಕೆ ಯಾವುದೇ ಸಾಕ್ಷಾಧಾರಗಳಿಲ್ಲ ಎಂದರು.

ಮೋದಿ ಭಾರತದಲ್ಲಿ ವಿಚಾರಣೆಯನ್ನು ಎದುರಿಸಬೇಕು ಎನ್ನಲು ಬಲವಾದ ಕಾರಣಗಳಿವೆ. ಲೆಟರ್ ಆಫ್ ಅಂಡರ್‌ಟೇಕಿಂಗ್ (ಎಲ್‌ಒಯು) ಅಥವಾ ಹೊಣೆಗಾರಿಕೆ ಮುಚ್ಚಳಿಕೆಗಳ ಮೂಲಕ ಭಾರೀ ಪ್ರಮಾಣದಲ್ಲಿ ಸಾಲಗಳ ಮಂಜೂರಾತಿಯಲ್ಲಿ ಮೋದಿ ಮತ್ತು ಬ್ಯಾಂಕ್ ಅಧಿಕಾರಿಗಳು ಶಾಮೀಲಾಗಿದ್ದರು ಎನ್ನುವುದು ಸ್ಪಷ್ಟವಾಗಿದೆ. ಬಳಿಕ ಮೋದಿ ಸಾಲವನ್ನು ಪಡೆದಿರುವುದನ್ನು ಒಪ್ಪಿಕೊಂಡು ಪಿಎನ್‌ಬಿಗೆ ವೈಯಕ್ತಿಕ ಪತ್ರವನ್ನು ಬರೆದಿದ್ದರು ಮತ್ತು ಅದನ್ನು ಮರುಪಾವತಿಸುವ ಭರವಸೆಯನ್ನು ನೀಡಿದ್ದರು. ಮೋದಿಯ ಸಂಸ್ಥೆಗಳು ನಕಲಿ ಪಾಲುದಾರರಾಗಿದ್ದವು ಎನ್ನುವುದರ ಬಗ್ಗೆ ಸಿಬಿಐ ತನಿಖೆಯನ್ನು ನಡೆಸುತ್ತಿದೆ. ಇವು ಮೋದಿ ನಡೆಸುತ್ತಿದ್ದ ಛಾಯಾ ಕಂಪನಿಗಳಾಗಿದ್ದವು ಎಂದು ಹೇಳಿದ ನ್ಯಾಯಾಧೀಶರು,‘ಮೋದಿ ಕಾನೂನುಬದ್ಧ ವ್ಯವಹಾರ ನಡೆಸುತ್ತಿದ್ದರು ಎನ್ನುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಯಾವುದೇ ಪ್ರಾಮಾಣಿಕ ವ್ಯವಹಾರಗಳು ಕಂಡು ಬಂದಿಲ್ಲ. ನನ್ನ ನಂಬಿಕೆಯಂತೆ ನಡೆದಿರುವುದೆಲ್ಲ ಅಪ್ರಾಮಾಣಿಕ ಪ್ರಕ್ರಿಯೆಯಾಗಿದೆ ’ ಎಂದರು.

 ಎಲ್‌ಒಯುಗಳನ್ನು ಪಡೆದುಕೊಂಡ ವಿಧಾನ ಮತ್ತು ಇತರ ಅಂಶಗಳನ್ನು ಪರಿಗಣಿಸಿದಾಗ ಮೋದಿ ಮತ್ತು ಅವರ ಸಹಚರರು ಮೋಸದಿಂದ ಕಾರ್ಯ ನಿರ್ವಹಿಸುತ್ತಿದ್ದರು ಎನ್ನುವುದು ಸ್ಪಷ್ಟವಾಗಿದೆ ಎಂದ ನ್ಯಾಯಾಧೀಶರು,ಇವುಗಳಲ್ಲಿ ಹಲವು ವಿಷಯಗಳಲ್ಲಿ ಭಾರತದಲ್ಲಿ ವಿಚಾರಣೆ ನಡೆಯಬೇಕಿದೆ. ಮೋದಿ ತಪ್ಪಿತಸ್ಥ ಎಂದು ಘೋಷಿಸಲು ಸಾಕ್ಷಾಧಾರಗಳಿವೆ ಎನ್ನುವುದು ತನಗೆ ತೃಪ್ತಿ ನೀಡಿದೆ. ಅವರ ವಿರುದ್ಧ ಅಕ್ರಮ ಹಣ ಪ್ರಕರಣವಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿದರು.

ನೈರುತ್ಯ ಲಂಡನ್ನಿನ ವಾಂಡ್ಸ್‌ವರ್ತ್ ಜೈಲಿನಲ್ಲಿರುವ ಮೋದಿಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗಿತ್ತು.

ನ್ಯಾಯಾಲಯದ ತೀರ್ಪನ್ನು ಈಗ ಅಂಕಿತಕ್ಕಾಗಿ ಬ್ರಿಟನ್ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರಿಗೆ ಕಳುಹಿಸಲಾಗುತ್ತದೆ. ಫಲಿತಾಂಶವನ್ನು ಅವಲಂಬಿಸಿ ಉಭಯ ಪಕ್ಷಗಳು ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿಗಳನ್ನು ಸಲ್ಲಿಸುವ ಅವಕಾಶಗಳಿವೆ.

ಮೋದಿಯನ್ನು ಹಸ್ತಾಂತರ ವಾರಂಟ್‌ನಡಿ 2019,ಮಾ.19ರಂದು ಲಂಡನ್ನಿನಲ್ಲಿ ಬಂಧಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X