Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಸೇನಾ ನೇಮಕಾತಿ ಪ್ರಕ್ರಿಯೆಗೆ...

ಶಿವಮೊಗ್ಗ: ಸೇನಾ ನೇಮಕಾತಿ ಪ್ರಕ್ರಿಯೆಗೆ ದೈಹಿಕ ಮತ್ತು ಲಿಖಿತ ಪರೀಕ್ಷಾ ತರಬೇತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ25 Feb 2021 10:44 PM IST
share
ಶಿವಮೊಗ್ಗ: ಸೇನಾ ನೇಮಕಾತಿ ಪ್ರಕ್ರಿಯೆಗೆ ದೈಹಿಕ ಮತ್ತು ಲಿಖಿತ ಪರೀಕ್ಷಾ ತರಬೇತಿ ಶಿಬಿರ

ಶಿವಮೊಗ್ಗ: ದೇಶ ಸೇವೆಯು ಜೀವನದ ಅತ್ಯಂತ ಶ್ರೇಷ್ಠ ಕಾರ್ಯವಾಗಿದ್ದು, ಯುವಜನತೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವ ಬಗ್ಗೆ ದೃಢಸಂಕಲ್ಪ ಹೊಂದಬೇಕು ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ. ಎನ್.ಕೆ.ಶಿವಣ್ಣ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಶಿವಮೊಗ್ಗ, ಮಲ್ನಾಡ್ ಸೋಲ್ಜರ್ ‌ಕೋಚಿಂಗ್ ಸೆಂಟರ್ ‌ಆನಂದಪುರ, ಸಮನ್ವಯಟ್ರಸ್ಟ್ ಶಿವಮೊಗ್ಗ ಹಾಗೂ ಎಟಿಎನ್‌ಸಿಸಿ ಸೇವಾ ಮನಸ್ ಸಂಸ್ಥೆ ವತಿಯಿಂದ ಗುರುವಾರ ಆಯೋಜಿಸಿದ್ದ “ಸೇನಾ ನೇಮಕಾತಿಗೆ 15 ದಿನಗಳ ಪೂರ್ವಭಾವಿ ತರಬೇತಿ ಶಿಬಿರ" ಉದ್ಘಾಟಿಸಿ ಮಾತನಾಡಿದರು.

ಸೈನ್ಯಕ್ಕೆ ಸೇರಲು ಆಸಕ್ತಿ ಇರುವಯುವಜನರು ಮಾಜಿ ಸೈನಿಕರಿಂದ ಸೂಕ್ತ ರೀತಿಯಲ್ಲಿ ಮಾರ್ಗದರ್ಶನ ಪಡೆದು ತರಬೇತಿ ಹೊಂದಬೇಕು. ಭಾರತೀಯ ಸೇನೆಗೆ ಸೇರುವ ಮೂಲಕ ಭಾರತರಾಷ್ಟ್ರದ ಅಭಿವೃದ್ಧಿ, ಪ್ರಗತಿ ಹಾಗೂ ಸುರಕ್ಷತೆಗೆ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಮೊಬೈಲ್, ತಂತ್ರಜ್ಞಾನದಿಂದ ಒಳ್ಳೆಯ ಹಾಗೂ ಕೆಟ್ಟ ಉಪಯೋಗಗಳಿದ್ದು, ಆದರೆ ಇತ್ತೀಚಿನ ದಿನಗಳಲ್ಲಿ ಬಹುತೇಕ ಯುವಜನತೆ ಮೊಬೈಲ್ ಗೀಳಿನಲ್ಲಿ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿಕೊಳ್ಳುತ್ತಿದ್ದಾರೆ. ಯುವಜನತೆ ಕೆಟ್ಟ ಹವ್ಯಾಸಗಳಿಂದ ದೂರ ಉಳಿದು ಒಳ್ಳೆಯ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ರಾಷ್ಟ್ರ ಸೇವೆಯಲ್ಲಿ ಭಾಗಿಯಾಗುವ ಸಂಕಲ್ಪ ತೊಡಬೇಕು ಎಂದು ಹೇಳಿದರು.

ಮಾಜಿ ಸೈನಿಕರ ಸಮಸ್ಯೆಗಳನ್ನು ನಿವಾರಿಸುವ ಬಗ್ಗೆ ಜನಪ್ರತಿನಿಧಿಗಳು ಸರಿಯಾದ ರೀತಿ ಸ್ಪಂದಿಸುತ್ತಿಲ್ಲ. ರಾಜ್ಯಮಟ್ಟದಲ್ಲಿ ಮಾಜಿ ಸೈನಿಕರ ಪರಧ್ವನಿ ಎತ್ತಲು ಸಂಘಟನೆ ಅತ್ಯಂತ ಅವಶ್ಯಕವಾಗಿದ್ದು, ರಾಜ್ಯ ಮಟ್ಟದಲ್ಲಿ ಮಾಜಿ ಸೈನಿಕರ ಸಂಘಟಿಸುವ ಕಾರ್ಯ ನಡೆಸಲಾಗುತ್ತಿದೆ ಎಂದರು.

ಜಿಲ್ಲಾ ಸೈನಿಕ ಮತ್ತು ಪುರ್ನವಸತಿ ಇಲಾಖೆ ಉಪ ನಿರ್ದೇಶಕಡಾ. ಸಿ.ಎ.ಹಿರೇಮಠ ಮಾತನಾಡಿ, ದೇಶದ ಇತರೆ ರಾಜ್ಯ ಹಾಗೂ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಮಲೆನಾಡಿನಲ್ಲಿ ಸೈನಿಕರ ಸಂಖ್ಯೆ ಕಡಿಮೆ ಇದ್ದು, ಭಾರತೀಯ ಸೇನೆಯಲ್ಲಿ ಮಲೆನಾಡಿನ ಯುವ ಜನತೆ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಆಯೋಜಿಸಿರುವ ತರಬೇತಿ ಶಿಬಿರ ಶ್ಲಾಘನೀಯ ಎಂದು ಹೇಳಿದರು.

ಉತ್ತರ ಭಾರತದಲ್ಲಿ ಭಾರತೀಯ ಸೇನೆಗೆ ಕೆಲಸಕ್ಕೆ ಸೇರುವುದು ಎಂದರೆ ಜೀವನದ ಅತ್ಯಂತ ಶ್ರೇಷ್ಠ ಹಾಗೂ ಗೌರವದ ಸಂಗತಿ. ಭಾರತೀಯ ಸೇನೆಯ ಸೇವೆಯಲ್ಲಿ ಭಾಗಿಯಾಗುವುದು ಹಾಗೂ ದೇಶ ಸೇವೆಯ ಮಹತ್ವವನ್ನುಯುವ ಜನತೆ ಅರಿವು ಮೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮಲ್ನಾಡ್ ಸೋಲ್ಜರ್ ಕೋಚಿಂಗ್ ಸೆಂಟರ್‌ನ ಕಿಶೋರ್ ಭೈರಾಪುರ ಮಾತನಾಡಿ, ಮಾಹಿತಿ ಕೊರತೆ ಹಾಗೂ ಸೂಕ್ತ ಮಾರ್ಗದರ್ಶನ ಸಿಗದ ಕಾರಣ ಯುವಜನತೆ ಸೈನ್ಯಕ್ಕೆ ಸೇರಲು ಸಾಧ್ಯವಾಗುತ್ತಿಲ್ಲ. ಭಾರತೀಯ ಸೇನೆಗೆ ಸೇರಲು ಇಚ್ಚಿಸುವ ಯುವಜನರಿಗೆ ಸೂಕ್ತ ಮಾರ್ಗದರ್ಶನ ನೀಡುವ ಜತೆಯಲ್ಲಿ ಸೇನೆಗೆ ಸೇರುವ ತನಕ ಅಗತ್ಯ ತರಬೇತಿ ನೀಡಲಿದ್ದೇವೆ ಎಂದು ಹೇಳಿದರು.

ಮಾಜಿ ಸೈನಿಕರಾದ ಸುಭಾಷ್‌ಚಂದ್ರ ತೇಜಸ್ವಿ ಹಾಗೂ ಕಿಶೋರ್ ಬೈರಾಪುರ ನೇತೃತ್ವದಲ್ಲಿ ಸೇನಾ ನೇಮಕಾತಿಗೆ 15 ದಿನಗಳ ಪೂರ್ವಭಾವಿ ತರಬೇತಿ ಶಿಬಿರ ನಡೆಯಲಿದೆ. ಮುಂದಿನ ತಿಂಗಳು ಉಡುಪಿಯಲ್ಲಿ ನಡೆಯಲಿರುವ ಸೇನಾ ನೇಮಕಾತಿರ್‍ಯಾಲಿ ಹಿನ್ನೆಲೆಯಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ನಂದಿನಿ ಸಾಗರ ಕಾರ್ಯಕ್ರಮ ನಿರೂಪಿಸಿದರು.

ಹಾರ್‍ನಹಳ್ಳಿ ಚೌಕಿಮಠದ ಶ್ರೀ ನೀಲಕಂಠ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾಕೌಶಲ್ಯಅಭಿವೃದ್ಧಿ ಇಲಾಖೆ ವ್ಯವಸ್ಥಾಪಕ ಸಮನ್ವಯ ಕಾಶಿ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಜಿಲ್ಲಾಧ್ಯಕ್ಷ ಹನುಮಂತಪ್ಪ, ಶಿವಮೊಗ್ಗ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಶಿವಮೊಗ್ಗದ ಉಪಾಧ್ಯಕ್ಷ ಎಚ್.ಕೆ.ಚೂಡಪ್ಪ, ನಿರ್ದೇಶಕ ಪ್ರಕಾಶ್‌ಗೌಡ, ವಾಸಪ್ಪ, ರಂಗರಾಜು ಬಾಳೆಗುಂಡಿ, ಪ್ರತಿನಿಧಿ ಸೇವಾ ಮನಸ್‌ನಆದಿತ್ಯ, ತರಬೇತಿ ಶಿಬಿರದ ಸಹ ಸಂಯೋಜಕ ಬಾಬು ಶಾಬಾಜ್, ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಮಾಜಿ ಸೈನಿಕರನ್ನು ಸಂಘಟಿಸಿ ರಾಜ್ಯ ಮಟ್ಟದ ಸಮಾವೇಶ ಆಯೋಜಿಸುವ ಉದ್ದೇಶ ಹೊಂದಲಾಗಿದೆ. ಅಲ್ಲದೇ ಪ್ರತಿ ಜಿಲ್ಲೆಗಳಲ್ಲಿ ಸೇನಾ ನೇಮಕಾತಿ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲು ಸಹ ಯೋಜನೆ ರೂಪಿಸಲಾಗುವುದು.
-ಡಾ. ಎನ್.ಕೆ.ಶಿವಣ್ಣ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ
**ಕೋಟ್**

ಸೈನ್ಯದಲ್ಲಿ ಸೇವೆ ಸಲ್ಲಿಸುವ ಆಸಕ್ತ ಯುವಜನರಿಗೆ 2019ರಲ್ಲಿ ತರಬೇತಿ ನೀಡಿದ್ದು, ಮಲೆನಾಡಿನಲ್ಲಿ ತರಬೇತಿ ಪಡೆದ 26 ಜನರು ಭಾರತೀಯ ಸೇನೆಗೆ ನೇಮಕಾತಿ ಆಗಿದ್ದಾರೆ. ಕಳೆದ ವರ್ಷ ಲಾಕ್‌ಡೌನ್‌ ಕಾರಣ ತರಬೇತಿ ನಡೆಸಲು ಸಾಧ್ಯವಾಗಲಿಲ್ಲ. ಈ ವರ್ಷದಲ್ಲಿ ತರಬೇತಿ ಪಡೆಯುವ ಯುವಜನರಲ್ಲಿ ಕನಿಷ್ಠ 100 ಯುವಜನತೆಯನ್ನು ಸೇನೆಗೆ ಸೇರಿಸುವ ಗುರಿ ಇದೆ.
-ಕಿಶೋರ್ ಭೈರಾಪುರ, ಮಲ್ನಾಡ್ ಸೋಲ್ಜರ್‌ ಕೋಚಿಂಗ್ ಸೆಂಟರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X