Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ.ಬಂಗಾಳ, ಪುದುಚೇರಿ,ಕೇರಳ, ತಮಿಳುನಾಡು,...

ಪ.ಬಂಗಾಳ, ಪುದುಚೇರಿ,ಕೇರಳ, ತಮಿಳುನಾಡು, ಅಸ್ಸಾಂ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟ

ಮಾರ್ಚ್ 27ರಿಂದ ಚುನಾವಣೆ, ಮೇ 2ಕ್ಕೆ ಫಲಿತಾಂಶ, ಇಲ್ಲಿದೆ ಸಂಪೂರ್ಣ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ26 Feb 2021 5:27 PM IST
share
ಪ.ಬಂಗಾಳ, ಪುದುಚೇರಿ,ಕೇರಳ, ತಮಿಳುನಾಡು, ಅಸ್ಸಾಂ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟ

ಹೊಸದಿಲ್ಲಿ,ಫೆ.26: ಅಸ್ಸಾಂ,ಪಶ್ಚಿಮ ಬಂಗಾಳ,ತಮಿಳುನಾಡು,ಕೇರಳ ಮತ್ತು ಪುದುಚೇರಿ ವಿಧಾನಸಭೆಗಳ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗವು ಶುಕ್ರವಾರ ಪ್ರಕಟಿಸಿದೆ. ಈ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿ ಮೇ ಮತ್ತು ಜೂನ್‌ನಲ್ಲಿ ಅಂತ್ಯಗೊಳ್ಳಲಿವೆ. ಆದರೆ ವಿ.ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರಕಾರವು ವಿಶ್ವಾಸ ಮತವನ್ನು ಗೆಲ್ಲಲು ಇತ್ತೀಚಿಗೆ ವಿಫಲಗೊಂಡ ಬಳಿಕ ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲಾಗಿದೆ.

ಅಸ್ಸಾಮಿನಲ್ಲಿ ಮಾ.27,ಎ.1 ಮತ್ತು ಎ.6 ಹೀಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಕೇರಳ,ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಎ.6ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಮಾ.27,ಎ.1,6,10,17,22,26 ಮತ್ತು ಎ.29 ಹೀಗೆ ಎಂಟು ಹಂತಗಳಲ್ಲಿ ಮತದಾನ ನಡೆಯಲಿದೆ.

   ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಮತಗಳ ಎಣಿಕೆಯು ಮೇ 2ರಂದು ನಡೆಯಲಿದೆ.ಇಲ್ಲಿ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದ ನಿರ್ಗಮನಗೊಳ್ಳಲಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ ಅರೋರಾ ಅವರು,ಸಾಮಾಜಿಕ ಅಂತರ,ಮತದಾರರಿಗೆ ಮಾಸ್ಕ್‌ಗಳು,ಸ್ಯಾನಿಟೈಸರ್ ಮತ್ತು ಕೈಗವುಸುಗಳ ಲಭ್ಯತೆ ಸೇರಿದಂತೆ ಅಸ್ತಿತ್ವದಲ್ಲಿರುವ ಎಲ್ಲ ಕೋವಿಡ್-19 ಮಾರ್ಗಸೂಚಿಗಳನ್ನು ಚುನಾವಣೆಗಳ ಸಂದರ್ಭದಲ್ಲಿ ಪಾಲಿಸಲಾಗುವುದು. ಮತದಾನದ ಸಮಯವನ್ನು ಒಂದು ಗಂಟೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಪ್ರತಿ ಮತಗಟ್ಟೆಗೆ ಮತದಾರರ ಸಂಖ್ಯೆಯನ್ನು ಒಂದು ಸಾವಿರಕ್ಕೆ ಸೀಮಿತಗೊಳಿಸಲಾಗುವುದು. ಕೋವಿಡ್-19 ರೋಗಿಗಳು ಅಂಚೆ ಮತಪತ್ರದ ಮೂಲಕ ಅಥವಾ ಚುನಾವಣೆಯ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಮತದಾನ ಮಾಡುವ ಅವಕಾಶವನ್ನು ಮಂದುವರಿಸಲಾಗುವುದು ಎಂದರು.

ಕಳೆದ ವರ್ಷ ಕೋವಿಡ್-19 ಸಾಂಕ್ರಾಮಿಕವನ್ನೆದುರಿಸುತ್ತಿದ್ದ ಇಡೀ ವಿಶ್ವವು ಪ್ರಜೆಗಳ ಆರೋಗ್ಯ ರಕ್ಷಣೆ ಮತ್ತು ಸುರಕ್ಷತೆಯ ಜೊತೆ ಅವರ ಹಕ್ಕುಗಳನ್ನು ಸಮತೋಲನಗೊಳಿಸುವುದು ಹೇಗೆ ಎಂಬ ಬಗ್ಗೆ ಚಿಂತನೆ ನಡೆಸುತ್ತಿತ್ತು. ದೊಡ್ಡ ಮಟ್ಟದಲ್ಲಿ ಚುನಾವಣೆಗಳನ್ನು ಹೇಗೆ ನಡೆಸುವುದು ಎನ್ನುವುದನ್ನು ಪರಿಶೀಲಿಸಲು ಆಯೋಗವು ಕಳೆದ ವರ್ಷದ ರಾಜ್ಯಸಭಾ ಚುನಾವಣೆಗಳು ಮತ್ತು ಬಿಹಾರ ಚುನಾವಣೆಗಳನ್ನು ಲಿಟ್ಮಸ್ ಪರೀಕ್ಷೆಯನ್ನಾಗಿ ಪರಿಗಣಿಸಿತ್ತು ಎಂದು ಅರೋರಾ ತಿಳಿಸಿದರು.

ಚುನಾವಣಾ ದಿನಾಂಕಗಳ ಪ್ರಕಟನೆಗೆ ಮುನ್ನ ಅರೋರಾ,ಚುನಾವಣಾ ಆಯುಕ್ತರಾದ ಸುಶೀಲಚಂದ್ರ ಮತ್ತು ರಾಜೀವ ಕುಮಾರ ಅವರನ್ನೊಳಗೊಂಡ ಚುನಾವಣಾ ಆಯೋಗವು ಎಲ್ಲ ಐದು ಪ್ರದೇಶಗಳಲ್ಲಿಯ ಪಾಲುದಾರರು ಮತ್ತು ಚುನಾವಣಾಧಿಕಾರಿಗಳೊಂದಿಗೆ ವ್ಯಾಪಕ ಸಭೆಗಳನ್ನು ನಡೆಸಿತ್ತು.

ಚುನಾವಣಾಧಿಕಾರಿಗಳು ಆದ್ಯತೆಯ ಮೇರೆಗೆ ಕೋವಿಡ್-19 ಲಸಿಕೆಯನ್ನು ಪಡೆಯುವಂತಾಗಲು ಅವರನ್ನು ಮುಂಚೂಣಿ ಆರೋಗ್ಯ ಕಾರ್ಯಕರ್ತರೆಂದು ಪರಿಗಣಿಸುವಂತೆ ಆಯೋಗವು ಸರಕಾರಕ್ಕೆ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X