Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಗ್ರಾಮೀಣ ತಂಡದಿಂದ 'ಸೀಪ್ಲೇನ್'...

ಉಡುಪಿ: ಗ್ರಾಮೀಣ ತಂಡದಿಂದ 'ಸೀಪ್ಲೇನ್' ಸಿದ್ಧ; ವಿಮಾನ ಹಾರಾಟ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ26 Feb 2021 8:13 PM IST
share
ಉಡುಪಿ: ಗ್ರಾಮೀಣ ತಂಡದಿಂದ ಸೀಪ್ಲೇನ್ ಸಿದ್ಧ; ವಿಮಾನ ಹಾರಾಟ ಯಶಸ್ವಿ

ಉಡುಪಿ, ಫೆ. 26: ಏರೋನಾಟಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡವೊಂದು ಧೃತಿ ಎಂಬ ಸಂಸ್ಥೆಯಡಿಯಲ್ಲಿ ನದಿಯಲ್ಲಿ ತೇಲುತ್ತಾ ಹೋಗಿ, ಆಗಸದಲ್ಲಿ ಹಾರುವ ಸೀಪ್ಲೇನ್‌ವೊಂದನ್ನು ಸಿದ್ಧಪಡಿಸಿದೆ.

ಬೀಚ್ ಟೂರಿಸಂಗೆ ಪೂರಕವಾಗಿ ಹಿನ್ನೀರಿನಲ್ಲಿ ವಿಶೇಷ ಪ್ರಯಾಣ ಅನುಭವ ನೀಡುವ ಸೀಪ್ಲೇನ್ ಬಗ್ಗೆ ಪ್ರತಿಭಾನ್ವಿತರ ತಂಡ ಕನಸು ಕಂಡಿದ್ದು, ಹೆಜಮಾಡಿ ಗ್ರಾಮೀಣ ಭಾಗದ ಶಾಂಭವಿ ನದಿಯಲ್ಲಿ ಹಲವು ದಿನಗಳ ಕಾಲ ಪರಿಶ್ರಮ ಪಟ್ಟು ಇದೀಗ ಸೀಪ್ಲೇನ್ ಹಾರಾಟವನ್ನು ಯಶಸ್ವಿಗೊಳಿಸಿದ್ದಾರೆ.

ಎನ್‌ಸಿಸಿ ಏರೋ ಮಾಡೆಲಿಂಗ್ ಇನ್‌ಸ್ಟ್ರಕ್ಟರ್ ಆಗಿರುವ ಹೆಜಮಾಡಿ ನಡಿ ಕುದ್ರು ನಿವಾಸಿ ಪುಷ್ಪರಾಜ್ ಅಮೀನ್ ಕಳೆದ 15 ವರ್ಷಗಳ ಪರಿಶ್ರಮದಿಂದ ಈ ಸೀಪ್ಲೇನ್ ಸಿದ್ಧಗೊಂಡಿದೆ. ಒಬ್ಬ ವ್ಯಕ್ತಿ ಕುಳಿತು ನೀರಲ್ಲಿ ತೇಲುವ ಬಾನಲ್ಲಿ ಹಾರುವ ಮೈಕ್ರೋಲೈಟ್ ಸೀಪ್ಲೇನ್ ಯಶಸ್ವಿ ಹಾರಾಟ ನಡೆದಿದ್ದು, ರಾಜ್ಯ, ಕೇಂದ್ರ ಸರಕಾರ ಅಥವಾ ಖಾಸಗಿ ವಲಯದ ಸಹಕಾರ ಸಿಗುವ ನಿರೀಕ್ಷೆಯಲ್ಲಿ ಈ ತಂಡ ಇದೆ.

‘ಸದ್ಯ ಪೈಲೆಟ್ ಮಾತ್ರ ಕುಳಿತು ಹಾರುವ ವಿಮಾನ ತಯಾರಿಸಲಾಗಿದ್ದು, ಏರೋನಾಟಿಕಲ್ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಕ್ಲಾಸ್ ಕೊಡುವ ಜೊತೆಗೆ ಮುಂದಿನ ದಿನಗಳಲ್ಲಿ ಏಳು ಜನ ಕೂರುವ ಸಾಮರ್ಥ್ಯದ ವಿಮಾನ ತಯಾರು ಮಾಡುವ ಕಸನು ಇಟ್ಟುಕೊಳ್ಳಲಾಗಿದೆ’ ಎಂದು ಪುಷ್ಪರಾಜ್ ಅಮೀನ್ ತಿಳಿಸಿದ್ದಾರೆ.

190 ಕೆಜಿ ಭಾರ ಹೊತ್ತೊಯ್ಯುವ ಈ ವಿಮಾನವನ್ನು, ಏರ್‌ಕ್ರಾಫ್ಟ್ ಗ್ರೇಡ್ ಅಲುಮೀನಿಯಂ, ಸ್ಟೀಲ್ ಸ್ಪೆಷಲ್ ನೈಲರ್ ಬ್ರೈಡೆಡ್ ರೋಪ್, ನೈಲಾನ್ ಫ್ಯಾಬ್ರಿಕ್ ಕ್ಲಾತ್, 33 ಎಚ್‌ಪಿ ಪವರ್ 200 ಸಿಸಿ ಸಿಮೊನಿನಿ ಇಟಾಲಿಯನ್ ಇಂಜಿನ್, 53 ಇಂಚಿನ ಮರದ ಪ್ರೊಫೆಲ್ಲರ್ ಪರಿಕರವನ್ನು ಬಳಸಿ ತಯಾರಿಸಲಾಗಿದೆ. ವಿಮಾನಕ್ಕೆ ಪೆಟ್ರೋಲ್‌ನ್ನು ಇಂಧನವಾಗಿ ಬಳಸಲಾಗಿದೆ. ಇತ್ತೀಚೆಗೆ ನಾಲ್ಕೈದು ಬಾರಿ 7 ರಿಂದ 10 ಅಡಿ ಮೇಲಕ್ಕೆ ಏಕವ್ಯಕ್ತಿ ಚಾಲಕ ಸಹಿತ ಸೀಪ್ಲೇನ್ ಹಾರಾಟ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

‘ವಿಮಾನ ತಯಾರಿಗಾಗಿ ಈವರೆಗೆ ಒಟ್ಟು 7 ಲಕ್ಷ ರೂ. ಖರ್ಚು ಆಗಿದೆ. ಇದಕ್ಕಾಗಿ ಗೆಳೆಯರು, ಸಂಬಂಧಿಕರು ಸಹಾಯ ನೀಡಿದ್ದಾರೆ. ಸ್ವಲ್ಪಹಣ ಸಾಲ ಮಾಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರ ನಡಿಕುದ್ರುವಿನಲ್ಲಿ ಕಾರ್ಯಾ ಗಾರದ ವ್ಯವಸ್ಥೆ ಮಾಡಿಕೊಡಬೇಕು. ಈ ಕಾರ್ಯವನ್ನು ತಜ್ಞರ ಸಹಕಾರದಿಂದ ಪರಿಶೀಲಿಸಿ ತಂಡದ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಬೇಕು. ಅನ್ವೇಷಣೆಗೆ ಬೇಕಾದ ಕೆಲ ಟೂಲ್ಸ್‌ಗಳಿಗೆ ಸಹಾಯಧನ ನೀಡಬೇಕು ಎಂದು ಅವರು ಮನವಿ ಮಾಡಿ ದ್ದಾರೆ.

ಏರೋನಾಟಿಕ್ ಪ್ರೊಫೆಸರ್ ಶೆನಾಯ್ ರಾವ್, ವಿದ್ಯಾರ್ಥಿ ಉತ್ಸವ್ ಉಮೇಶ್, ಆಸಕ್ತ ವಿದ್ಯಾರ್ಥಿಗಳಾದ ಅಶ್ವಿನಿ ರಾವ್, ಯು.ವಾಸುರಾಜ್ ಅಮೀನ್, ಅಭಿಷೇಕ್ ಎನ್.ಕೋಟ್ಯಾನ್, ರೇಶ್ಮಾ ಜೆ.ಬಂಗೇರ ಈ ತಂಡದಲ್ಲಿ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X