Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ್ ಬಂದ್: ಮಿಶ್ರ ಪ್ರತಿಕ್ರಿಯೆ

ಭಾರತ್ ಬಂದ್: ಮಿಶ್ರ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ26 Feb 2021 11:31 PM IST
share
ಭಾರತ್ ಬಂದ್: ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ, ಫೆ. 26: ತೈಲ ಬೆಲೆ, ಜಿಎಸ್‌ಟಿ ಏರಿಕೆ ಖಂಡಿಸಿ ಹಾಗೂ ಜಿಎಸ್‌ಟಿಯ ಮರು ಪರಿಶೀಲನೆಗೆ ಆಗ್ರಹಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಶುಕ್ರವಾರ ಕರೆ ನೀಡಿದ್ದ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಂದ್ ಸಂದರ್ಭ ಹೊಸದಿಲ್ಲಿಯಲ್ಲಿ ಹಲವು ಮಾರುಕಟ್ಟೆಗಳು ತೆರೆದಿದ್ದವು. ಇನ್ನೊಂದು ದಿನ ನಷ್ಟಕ್ಕೆ ಒಳಗಾಗಲು ಬಯಸದೇ ಇರುವುದರಿಂದ ಬಂದ್‌ಗೆ ಬೆಂಬಲದ ಹೊರತಾಗಿಯು ಸಂಸ್ಥೆಗಳನ್ನು ಮುಚ್ಚಿಲ್ಲ ಎಂದು ಹಲವು ವ್ಯಾಪಾರಿಗಳು ಹೇಳಿದ್ದಾರೆ. ಸಿಎಐಟಿ ತನ್ನ ಹೇಳಿಕೆಯಲ್ಲಿ, ದೇಶಾದ್ಯಂತ 40 ಸಾವಿರ ವ್ಯಾಪಾರಿಗಳ ಸಂಘಟನೆಗಳಿಗೆ ಸೇರಿದ 8 ಕೋಟಿಗೂ ಅಧಿಕ ಉದ್ಯಮ ಸಂಸ್ಥೆಗಳು ಬಾಗಿಲು ಮುಚ್ಚಿದ್ದುದರಿಂದ ಹಾಗೂ ವಾಣಿಜ್ಯ ಮಾರುಕಟ್ಟೆಯಲ್ಲಿ ಯಾವುದೇ ರೀತಿಯ ವ್ಯಾಪಾರ ಚಟುವಟಿಕೆಗಳು ನಡೆಯದೇ ಇರುವುದರಿಂದ ಭಾರತ್ ಬಂದ್ ಯಶಸ್ವಿಯಾಗಿದೆ ಎಂದು ಸಿಎಐಟಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

‘‘ದಿಲ್ಲಿಯ ಹೆಚ್ಚಿನ ಮಾರುಕಟ್ಟೆಗಳು ತೆರೆದಿದ್ದವು. ಆದರೆ, ಸಂಘಟನೆ ಭಾರತ್ ಬಂದ್‌ಗೆ ತನ್ನ ಬೆಂಬಲ ವ್ಯಕ್ತಪಡಿಸಿದೆ. ಸುಮಾರು ಶೇ. 98 ಮಾರುಕಟ್ಟೆ, ಹೊಟೇಲ್, ಕೈಗಾರಿಕಾ ಪ್ರದೇಶ ಮುಚ್ಚಿದ್ದವು. ಚೌರಿ ಬಝಾರ್ ಹಾಗೂ ಕರೋಲ್ ಬಾಗ್‌ನ ಕೆಲವು ಭಾಗಗಳಲ್ಲಿ ಮಾತ್ರ ವ್ಯವಹಾರ ಮುಂದುವರಿದಿತ್ತು. ಆದರೆ, ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಾವು ಕಾಶ್ಮೀರಿ ಗೇಟ್‌ನಲ್ಲಿ ಅಪರಾಹ್ನ 12.30ಕ್ಕೆ ಪ್ರತಿಭಟನೆ ನಡೆಸಿದ್ದೇವೆ’’ ಎಂದು ಚೇಂಬರ್ಸ್‌ ಆಫ್ ಟ್ರೇಡ್ ಆ್ಯಂಡ್ ಇಂಡಸ್ಟ್ರಿಯ ಅಧ್ಯಕ್ಷ ಬ್ರಿಜೆಜ್ ಗೋಯಲ್ ಹೇಳಿದ್ದಾರೆ.

‘‘ಈ ಬಾರಿ ಮಾರುಕಟ್ಟೆ ಬಂದ್ ಮಾಡುವುದು ಪ್ರಾಯೋಗಿಕವಾಗಿ ಕಾರ್ಯಸಾಧುವಲ್ಲ. ವ್ಯಾಪಾರಿಗಳು ಈಗಾಗಲೆ ಲಾಕ್‌ಡೌನ್‌ನಿಂದ ನಷ್ಟ ಅನುಭವಿಸಿದ್ದಾರೆ. ನಾವು ಬಂದ್‌ಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಅಲ್ಲದೆ ಈ ಬೇಡಿಕೆ ಸರಿಯಾದುದು ಎಂಬುದು ನಮ್ಮ ಭಾವನೆ’’ ಎಂದು ಹೊಸದಿಲ್ಲಿ ವ್ಯಾಪಾರಿಗಳ ಸಂಘಟನೆಯ ಅಧ್ಯಕ್ಷ ಅತುಲ್ ಭಾರ್ಗವ್ ಅವರು ಹೇಳಿದ್ದಾರೆ. ಒಡಿಶಾದಲ್ಲಿ ವ್ಯಾಪಾರಿಗಳು ಅಂಗಡಿ, ವಾಣಿಜ್ಯ ಸಂಸ್ಥೆಗಳ ಬಾಗಿಲು ಮುಚಿದ್ದರು. ವಾಣಿಜ್ಯ ವಾಹನಗಳು ರಸ್ತೆಗಿಳಿಯಿಲಿಲ್ಲ. ರಾಜ್ಯದಲ್ಲಿ ಸುಮಾರು 20 ಲಕ್ಷ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳು ಮುಚಿದ್ದವು. ಭುವನೇಶ್ವರ, ಕತಕ್, ರೂರ್ಕೆಲಾ, ಸಾಂಬಾಲ್ಪುರ, ಬಾಲಸೋರೆ ಹಾಗೂ ಬೆಹ್ರಾಮ್‌ಪುರದ ವಿವಿಧ ಭಾಗಗಳಲ್ಲಿ ಬಂದ್‌ಗೆ ಬೆಂಬಲ ವ್ಯಕ್ತವಾಗಿತ್ತು. ಇನ್ನೊಂದೆಡೆ ಮಧ್ಯಪ್ರದೇಶದ ವ್ಯವಹಾರ ರಾಜಧಾನಿಯಾದ ಇಂದೋರ್‌ನಲ್ಲಿ ಯಾವುದೇ ಅಂಗಡಿ-ಮುಂಗಟ್ಟುಗಳು ಮುಚ್ಚಲಿಲ್ಲ. ಲಾಕ್‌ಡೌನ್‌ನಿಂದ ಈಗಾಗಲೇ ನಷ್ಟ ಅನುಭವಿಸಿರುವುದರಿಂದ ಬಂದ್ ಸಾಧ್ಯವಿಲ್ಲ ಎಂದು ವ್ಯಾಪಾರಿಗಳು ಹೇಳಿದ್ದಾರೆ. ಜಿಎಸ್‌ಟಿ ವೈಪರಿತ್ಯದ ಬಗ್ಗೆ ನಾವು ಈಗಾಗಲೇ ವಿರೋಧ ದಾಖಲಿಸಿದ್ದೇವೆ. ಆದರೆ, ಈ ವಿಷಯದ ಕುರಿತಂತೆ ಬಂದ್‌ಗೆ ನಮಗೆ ಬೆಂಬಲ ವ್ಯಕ್ತವಾಗಿಲ್ಲ ಎಂದು ಅಹಿಲ್ಯಾ ಚೇಂಬರ್ಸ್‌ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್‌ನ ಅಧ್ಯಕ್ಷ ರಮೇಶ್ ಖಂಡೇವಾಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X