Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಕ್ಕೆ ಗಡಿನಾಡ ಕನ್ನಡಿಗರ ಸ್ಥಿತಿಗತಿ...

ಸರಕಾರಕ್ಕೆ ಗಡಿನಾಡ ಕನ್ನಡಿಗರ ಸ್ಥಿತಿಗತಿ ಆದ್ಯತೆ ಆಗಬೇಕಾಗಿದೆ: ಡಾ.ಸಿ.ಸೋಮಶೇಖರ್

14ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ27 Feb 2021 11:32 PM IST
share
ಸರಕಾರಕ್ಕೆ ಗಡಿನಾಡ ಕನ್ನಡಿಗರ ಸ್ಥಿತಿಗತಿ ಆದ್ಯತೆ ಆಗಬೇಕಾಗಿದೆ: ಡಾ.ಸಿ.ಸೋಮಶೇಖರ್

ಬೆಂಗಳೂರು, ಫೆ.27: ಗಡಿ ಭಾಗದಲ್ಲಿರುವ ಕನ್ನಡಿಗರ ಸ್ಥಿತಿ ಚಿಂತಾಜನಕವಾಗಿದೆ. ಸಂಕಷ್ಟದಲ್ಲಿರುವ ಈ ಕನ್ನಡಿಗರ ಬಗ್ಗೆ ಬೆಳಕು ಚೆಲ್ಲುವ ಕೆಲಸವಾಗಬೇಕಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅಭಿಪ್ರಾಯಿಸಿದ್ದಾರೆ.

ಶನಿವಾರ ಹೃದಯವಾಹಿನಿ ಕರ್ನಾಟಕದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ `14ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ 2021'ರ ಸಮ್ಮೇಳನಾಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇವತ್ತು ರಾಜ್ಯದ ಸುತ್ತಲಿರುವ ಗಡಿಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸ್ಥಿತಿಗತಿಗಳನ್ನು ಆದ್ಯತೆಯಾಗಿಸಿಕೊಂಡು ಕಾರ್ಯಕ್ರಮ ರೂಪಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕನ್ನಡಿಗರು ಅಧಿಕ ಸಂಖ್ಯೆಯಲ್ಲಿರುವ ಬೆಳಗಾವಿಯ ಗಡಿ ಪ್ರದೇಶಗಳಾದ ಅಕ್ಕಲಕೋಟೆ ಹಾಗೂ ದಕ್ಷಿಣ ಸೊಲ್ಲಾಪುರದ ಭಾಗಗಳಲ್ಲಿ ಅನ್ಯ ಭಾಷಿಕರ ಸಮೀಕ್ಷೆ ನಡೆಸಲು ಕೆಲ ಗ್ರಾಮ ಪಂಚಾಯತ್‍ಗಳಿಗೆ ಮಹಾರಾಷ್ಟ್ರ ಸರಕಾರ ಆದೇಶ ಹೊರಡಿಸಿರುವುದು ದುರ್ದೈವ ಸಂಗತಿ. ಇದನ್ನು ಎಲ್ಲ ಕನ್ನಡಿಗರು ತೀವ್ರವಾಗಿ ವಿರೋಧಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳಿಗೂ ನಾವು ಸಂವೇದನಾಶೀಲರಾಗಿ ಸ್ಪಂದಿಸಬೇಕಿದೆ. ಜತೆಗೆ ಆರು ರಾಜ್ಯಗಳ ಗಡಿ ಭಾಗದಲ್ಲಿನ ಕನ್ನಡಿಗರಿಗೂ ಸಾಂಸ್ಕೃತಿಕ ಹಾಗೂ ಸಾಮಾಜಿಕ ಭದ್ರತೆಯನ್ನು ಸರಕಾರ ಒದಗಿಸಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರಾಮಾಣಿಕವಾಗಿ ಶ್ರಮಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ 2021ನೇ ಸಾಲಿನ `ಹೃದಯವಂತ ಪ್ರಶಸ್ತಿ'ಯನ್ನು ಸುರೇಶ್‍ ಕುಮಾರ್ (ಪರಿಸರ), ಎಚ್.ರಾಜಣ್ಣ (ಆಡಳಿತ ಸೇವೆ), ಎಚ್.ಜಿ. ಅನಿಲ್‍ ಕುಮಾರ್ (ಪತ್ರಿಕೋದ್ಯಮ), ಅಬ್ದುಲ್ ಸುಬಾನ್ (ಶಿಕ್ಷಣ), ಕೆ.ವನಿತಾ (ಶಿಕ್ಷಣ), ವಿನಯ್ ಕೆ.ಸಿ. ರಾಜಾವತ್ (ಸಮಾಜ ಸೇವೆ), ಬಾಣಾವರ ವಿಜಯಕುಮಾರ್ (ಸಂಗೀತ), ವಿಜಯ್ ಶ್ರೀನಿವಾಸ್ (ಸ್ಯಾಕ್ಸೋಫೋನ್), ಕೆ.ಪಿ. ನಾರಾಯಣ್ (ನಾದಸ್ವರ) ಅವರಿಗೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಚಿತ್ತೂರಿನ ಆರ್‍ವಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆರ್.ವೆಂಕಟಸ್ವಾಮಿ, ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಗೌರವಾಧ್ಯಕ್ಷ ಹಾಜಿ ಮುನೀರ್ ಬಾವ, ಮಸ್ಕಟ್ ಒಮಾನ್ ಕನ್ನಡಿಗರು ಅಧ್ಯಕ್ಷ ಎಸ್‍ಡಿಟಿ ಪ್ರಸಾದ್, ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಅಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್, ಸ್ವಾಮಿ ಎಂಟರ್‍ಪ್ರೈಸಸ್ ಮುಖ್ಯಸ್ಥ ಗೋನಾ ಸ್ವಾಮಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X