Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಧ್ಯಕ್ಷರ ವಿರುದ್ಧ ಕೇಂದ್ರಕ್ಕೆ...

ಅಧ್ಯಕ್ಷರ ವಿರುದ್ಧ ಕೇಂದ್ರಕ್ಕೆ ನಿರ್ದೇಶಕಿಯ ಪತ್ರ: ಐಐಎಂ-ಸಿ ಆಡಳಿತ ಮಂಡಳಿಯ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ27 Feb 2021 11:37 PM IST
share

ಹೊಸದಿಲ್ಲಿ,ಫೆ.27: ಸಂಸ್ಥೆಯ ಅಧ್ಯಕ್ಷರ ವಿರುದ್ಧ ಕೇಂದ್ರ ಸರಕಾರಕ್ಕೆ ಪತ್ರವನ್ನು ಬರೆದಿದ್ದಕ್ಕಾಗಿ ನಿರ್ದೇಶಕಿ ಅಂಜು ಸೇಠ್ ವಿರುದ್ಧ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಕಲಕತ್ತಾ)ನ ಆಡಳಿತ ಮಂಡಳಿಯು ನಿರ್ಣಯವೊಂದನ್ನು ಅಂಗೀಕರಿಸಿದೆ.

ಅಂಜು ಸೇಠ್ 2018 ನವೆಂಬರ್‌ನಲ್ಲಿ ಐಐಎಂ ನಿರ್ದೇಶಕರ ಹುದ್ದೆಗೆ ನೇಮಕಗೊಂಡಿದ್ದ ಮೊದಲ ಮಹಿಳೆಯಾಗಿದ್ದು,ಅವರ ಅಧಿಕಾರಾವಧಿಯು ಈ ವರ್ಷ ಅಂತ್ಯಗೊಳ್ಳುತ್ತದೆ. ಸಂಸ್ಥೆಯ ವ್ಯವಹಾರಗಳ ನಿರ್ವಹಣೆಯ ಬಗ್ಗೆ ಸೇಠ್ ಮತ್ತು ಶ್ರೀಕೃಷ್ಣ ಕುಲಕರ್ಣಿ ಅಧ್ಯಕ್ಷತೆಯ ಆಡಳಿತ ಮಂಡಳಿ ನಡುವೆ ಆಗಾಗ್ಗೆ ಜಟಾಪಟಿ ನಡೆಯುತ್ತಲೇ ಇತ್ತು.

ಐಐಎಂ ಕಾಯ್ದೆಯಲ್ಲಿ ಬದಲಾವಣೆಗಳನ್ನು ತಂದ ಬಳಿಕ ಐಐಎಂ ಮಂಡಳಿಯೊಂದು ಇದೇ ಮೊದಲ ಬಾರಿಗೆ ಇಂತಹ ನಿರ್ಣಯವೊಂದನ್ನು ಅಂಗೀಕರಿಸಿದೆ. ಫೆ.20ರಂದು ಅಂಗೀಕರಿಸಲಾದ ನಿರ್ಣಯದಲ್ಲಿ ಆಡಳಿತ ಮಂಡಳಿಯು,ಸೇಠ್ ಅಧ್ಯಕ್ಷರ ವಿರುದ್ಧ ನೇರವಾಗಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಮತ್ತು ಅವರು ಬೋಧಕ ವರ್ಗದೊಂದಿಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿದೆ. ಸೇಠ್ ನಡವಳಿಕೆಯನ್ನು ಪರಿಶೀಲಿಸಲೂ ನಿರ್ಧರಿಸಿರುವ ಅದು,ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಂಗ್ರಹಿಸುವಂತೆ ಮತ್ತು ಸಾಧ್ಯವಾದಷ್ಟು ಶೀಘ್ರ ತನ್ನೆದುರು ಮಂಡಿಸುವಂತೆ ಸಂಸ್ಥೆಯ ಕಾರ್ಯದರ್ಶಿಗೆ ನಿರ್ದೇಶ ನೀಡಿದೆ.

ಆಡಳಿತ ಮಂಡಳಿಯ ನಿರ್ದೇಶಕರ ವಿಚಾರಣೆಯನ್ನು ನಡೆಸಿ ಮತ್ತು ತನ್ನ ಅಭಿಪ್ರಾಯವನ್ನು ತಿಳಿಸಲು ಅವರಿಗೆ ನ್ಯಾಯಯುತ ಅವಕಾಶವನ್ನು ನೀಡಿದ ಬಳಿಕವಷ್ಟೇ ಅವರನ್ನು ಹುದ್ದೆಯಿಂದ ವಜಾಗೊಳಿಸಬಹುದು ಎಂದು ನೂತನ ಐಐಎಂ ಕಾಯ್ದೆಯಲ್ಲಿ ಹೇಳಲಾಗಿದೆ. ಮಂಡಳಿಯ ನಿರ್ಣಯವು ಸೇಠ್ ವಿರುದ್ಧ ವಿಚಾರಣೆಗೆ ಅವಕಾಶ ಕಲ್ಪಿಸಬಹುದೇ ಎನ್ನುವುದು ಸ್ಪಷ್ಟವಾಗಿಲ್ಲ.

ಕುಲಕರ್ಣಿ ಮತ್ತು ಶಿಕ್ಷಣ ಸಚಿವಾಲಯಕ್ಕೆ ಬರೆದಿದ್ದ ಪತ್ರಗಳಲ್ಲಿ ಸೇಠ್,ಅಧ್ಯಕ್ಷರು ತನ್ನ ಕಾರ್ಯಕಾರಿ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಐಐಎಂ ಕಾಯ್ದೆಯಡಿ ನೂತನ ನಿಯಮಗಳ ಕರಡು ಸಿದ್ಧಪಡಿಸುವಿಕೆ ಸಂದರ್ಭದಲ್ಲಿ ತನ್ನನ್ನು ಕಡೆಗಣಿಸಲಾಗಿತ್ತು ಎಂದೂ ಅವರು ಆರೋಪಿಸಿದ್ದರು.

ಸೇಠ್ ನೇರವಾಗಿ ಕೇಂದ್ರಕ್ಕೆ ಪತ್ರ ಬರೆದಿರುವುದು ಸಾರಾಸಗಟು ಅನುಚಿತ ವರ್ತನೆಯಾಗಿದೆ ಮತ್ತು ತಪ್ಪು ಮಾಹಿತಿಗಳ ಮೂಲಕ ಸಚಿವಾಲಯ ಹಾಗೂ ಆಡಳಿತ ಮಂಡಳಿಯ ನಡುವೆ ಗೊಂದಲವನ್ನು ಸೃಷ್ಟಿಸುವುದು ಅವರ ಉದ್ದೇಶವಾಗಿದೆ ಎಂದಿರುವ ಮಂಡಳಿಯು,ಅವರು ಐಐಎಂ-ಸಿ ಬೋಧಕವೃಂದದೊಂದಿಗೆ ತನ್ನ ಭಿನ್ನಾಭಿಪ್ರಾಯದ ಬಗ್ಗೆ ರಾಷ್ಟ್ರೀಯ ದೈನಿಕವೊಂದಕ್ಕೆ ಸಂದರ್ಶನ ನೀಡಿದ್ದನ್ನೂ ಆಕ್ಷೇಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X