Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇಂದ್ರ ಪುರಾತತ್ವ ಇಲಾಖೆ ಸಕ್ರಿಯವಾಗಿ...

ಕೇಂದ್ರ ಪುರಾತತ್ವ ಇಲಾಖೆ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿಲ್ಲ: ಕೆ.ಕೆ.ಮುಹಮ್ಮದ್

ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಪುರಾತತ್ವ ಶಾಸ್ತ್ರಜ್ಞ

ವಾರ್ತಾಭಾರತಿವಾರ್ತಾಭಾರತಿ28 Feb 2021 7:04 PM IST
share
ಕೇಂದ್ರ ಪುರಾತತ್ವ ಇಲಾಖೆ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿಲ್ಲ: ಕೆ.ಕೆ.ಮುಹಮ್ಮದ್

ಉಡುಪಿ, ಫೆ.28: ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರದ ಪುರಾತತ್ವ ಇಲಾಖೆ ಸಕ್ರಿಯವಾಗಿ ಕೆಲಸ ಮಾಡುತ್ತಿಲ್ಲ. ಅದು ಇನ್ನಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ದೇಶದ ಖ್ಯಾತನಾಮ ಪುರಾತತ್ವ ಶಾಸ್ತ್ರಜ್ಞರಲ್ಲಿ ಒಬ್ಬರಾದ ಪದ್ಮಶ್ರಿ ಪ್ರಶಸ್ತಿ ವಿಜೇತ ಕೇರಳ ಮೂಲದ ಕೆ.ಕೆ.ಮುಹಮ್ಮದ್ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಉಡುಪಿಯ ಡಾ.ಪಾದೂರು ಗುರುರಾಜ ಭಟ್ ಸ್ಮಾರಕ ಟ್ರಸ್ಟ್‌ನ ವತಿಯಿಂದ ನೀಡಲಾಗುವ 2021ನೇ ಸಾಲಿನ ಪ್ರತಿಷ್ಠಿತ ಡಾ.ಪಾದೂರು ಗುರುರಾಜ ಭಟ್ ಸ್ಮಾರಕ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಇಲಾಖೆ ಸಕ್ಷಮವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಇತ್ತು. ಆದರೆ ಅದು ನಿರೀಕ್ಷಿತ ಪ್ರಮಾಣದಲ್ಲಿ ಕೆಲಸ ಮಾಡುತ್ತಿಲ್ಲ. ಅಲ್ಲದೇ ಈಗ ಇಲಾಖೆಯ ಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ ಎಂದವರು ಹೇಳಿದರು.

ಬಿಜೆಪಿ ಸರಕಾರ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತದೆ ಎಂಬ ವಾತಾವರಣ ಸೃಷ್ಟಿಸಲಾಗಿತ್ತು. ಪ್ರಾಚ್ಯ ವಸ್ತುಗಳ ಸಂರಕ್ಷಣೆ ವಿಚಾರದಲ್ಲಿ ಇಲಾಖೆಯ ಈಗಿನ ಕೆಲಸ ಹಿಂದಿಗಿಂತಲೂ ಕಳಪೆಯಾಗಿದೆ. ಹೀಗಾಗಿ ಬಿಜೆಪಿ ಸರಕಾರವನ್ನು ನಾನು ಬಹಿರಂಗವಾಗಿಯೇ ಟೀಕಿಸುತ್ತಿದ್ದೇನೆ ಎಂದ ಅವರು, ಪುರಾತತ್ವ ಇಲಾಖೆಗೆ ಕಾಂಗ್ರೆಸ್ ಸರಕಾರಗಳು ಅತ್ಯುತ್ತಮ ಕೊಡುಗೆಯನ್ನು ನೀಡಿದ್ದವು ಎಂದರು.

ರಾಮಮಂದಿರ ವಿಚಾರವನ್ನು ವಿವಾದಿತ ಎನ್ನುವುದು ತಪ್ಪು. ಈಗ ಆ ಪ್ರಕರಣದಲ್ಲಿ ಯಾವುದೇ ವಿವಾದಗಳು ಉಳಿದಿಲ್ಲ. ಕೆಲವರು ವಾದವನ್ನು ಜೀವಂತ ಇರಿಸಲು ಪ್ರಯತ್ನಿಸುತ್ತಿರಬಹುದು. ಸುಪ್ರೀಂಕೋರ್ಟ್ ಈ ವಿವಾದವನ್ನು ಸಂಪೂರ್ಣವಾಗಿ ಬಗೆಹರಿಸಿದೆ. ಇನ್ನು ಯಾವುದೇ ಗೊಂದಲಕ್ಕೂ ಅವಕಾಶವಿಲ್ಲ ಎಂದವರು ಸ್ಪಷ್ಟ ಪಡಿಸಿದರು.

ಕರಾವಳಿಯ ಪ್ರಸಿದ್ಧ ಪುರಾತತ್ವ ಶಾಸ್ತ್ರಜ್ಞರೂ, ಇತಿಹಾಸಕಾರರೂ ಆಗಿದ್ದ ಡಾ.ಪಾದೂರು ಗುರುರಾಜ ಭಟ್ ನೆನಪಿನಲ್ಲಿ ನೀಡಿದ ತನಗೆ ಅತ್ಯಂತ ನೆಚ್ಚಿನದ್ದಾಗಿದೆ. ಇಷ್ಟೊಂದು ಭಾವನಾತ್ಮಕವಾಗಿ ನನಗೆ ಎಲ್ಲಿಯೂ ಗೌರವ ಸಿಕ್ಕಿಲ್ಲ. ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ನನಗೆ ಶಬ್ದಗಳೇ ಸಿಗುತ್ತಿಲ್ಲ ಎಂದು ಕೇಂದ್ರ ಸರಕಾರದಿಂದ ಪದ್ಮಶ್ರಿ ಪ್ರಶಸ್ತಿ ಪಡೆದಿರುವ ಮುಹಮ್ಮದ್ ಬಾವುಕರಾಗಿ ನುಡಿದರು.

'ಕಾಶಿ, ಮಥುರಾ ವಿವಾದಕ್ಕೆ ಅವಕಾಶವಿಲ್ಲ'
ರಾಮಜನ್ಮಭೂಮಿ- ಬಾಬ್ರಿ ಮಸೀದಿ ವಿವಾದದ ಮಾದರಿಯಲ್ಲಿ ಕಾಶಿ, ಮಥುರಾ ವಿವಾದವನ್ನು ಬಗೆಹರಿಸಲು ಸಾಧ್ಯವಿಲ್ಲ. 1991ರ ಪ್ರಾರ್ಥನಾ ಸ್ಥಳಗಳ ಕಾಯ್ದೆಯ ಅನ್ವಯ 1947ಕ್ಕೆ ಮೊದಲು ಇದ್ದ ಸ್ಥಿತಿಯನ್ನು ಈಗಿರುವ ಉಳಿದೆಲ್ಲಾ ವಿವಾದಗಳಲ್ಲೂ ಉಳಿಸಿಕೊಳ್ಳಬೇಕಾಗುತ್ತದೆ. ಅಯೋಧ್ಯೆ ಪ್ರಕರಣ ಈ ಕಾಯಿದೆಯಿಂದ ಹೊರತಾಗಿದೆ. ಹೀಗಾಗಿ ಸಾಂವಿಧಾನಿಕ ನಿಯಮಾವಳಿಗಳ ಪ್ರಕಾರ ಬೇರೆ ಯಾವುದೇ ದೇವಾಲಯಗಳಿಗೆ ಹೀಗೆ ಬೇಡಿಕೆ ಇಡುವಂತಿಲ್ಲ ಎಂದು ಡಾ.ಮುಹಮ್ಮದ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X