Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಿಂದ ಹತ್ತಿ ಆಮದಿಗೆ ಪಾಕ್ ಆಸಕ್ತಿ:...

ಭಾರತದಿಂದ ಹತ್ತಿ ಆಮದಿಗೆ ಪಾಕ್ ಆಸಕ್ತಿ: ಶೀಘ್ರದಲ್ಲೇ ನಿರ್ಧಾರ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ28 Feb 2021 9:14 PM IST
share
ಭಾರತದಿಂದ ಹತ್ತಿ ಆಮದಿಗೆ ಪಾಕ್ ಆಸಕ್ತಿ: ಶೀಘ್ರದಲ್ಲೇ ನಿರ್ಧಾರ ಘೋಷಣೆ

 ಇಸ್ಲಾಮಾಬಾದ್,ಫೆ.28: ಪುಲ್ವಾಮಾ ದಾಳಿಯ ಬಳಿಕ ಹದಗೆಟ್ಟಿದ್ದ ಭಾರತ-ಪಾಕ್ ದ್ವಿಪಕ್ಷೀಯ ವಾಣಿಜ್ಯ ಬಾಂಧವ್ಯಗಳು, ಇತ್ತೀಚೆಗೆ ಗಡಿನಿಯಂತ್ರಣ ರೇಖೆಯಲ್ಲಿ ಹೊಸತಾಗಿ ಕದನವಿರಾಮ ಒಪ್ಪಂದ ಏರ್ಪಟ್ಟ ಬಳಿಕ, ಹಂತಹಂತವಾಗಿ ಮರುಸ್ಥಾಪನೆಗೊಳ್ಳುವ ಸಾಧ್ಯತೆಗಳು ಉಜ್ವಲವಾಗಿ ಗೋಚರಿಸತೊಡಗಿದೆ.

   ಭಾರತದಿಂದ ಹತ್ತಿ ಹಾಗೂ ಗಿರಣಿನೂಲನ್ನು ಆಮದುಮಾಡಿಕೊಳ್ಳುವ ಬಗ್ಗೆ ಪಾಕಿಸ್ತಾನವು ಮುಂದಿನವಾರ ನಿರ್ಧಾರವೊಂದನ್ನು ಕೈಗೊಳ್ಳುವ ಸಾಧ್ಯತೆಯಿದೆ ಎಂದು ವಾಣಿಜ್ಯ ವಿಷಯಗಳಿಗಾಗಿನ ಪಾಕ್ ಪ್ರಧಾನಿಯವರ ಸಲಹೆಗಾರ ಅಬ್ದುಲ್ ರಝಾಕ್ ದಾವೂದ್ ಅವರು ತಿಳಿಸಿದ್ದಾರೆಂದು ವಾಣಿಜ್ಯ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ‘ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್’ ಪತ್ರಿಕೆ ರವಿವಾರ ವರದಿ ಮಾಡಿದೆ.

   ದೇಶದಲ್ಲಿ ಹತ್ತಿಯ ಕೊರತೆಯಿರುವ ಬಗ್ಗೆ ಈಗಾಗಲೇ ವಾಣಿಜ್ಯ ಖಾತೆಯನ್ನು ಕೂಡಾ ನಿರ್ವಹಿಸುತ್ತಿರುವ ಪ್ರಧಾನಿ ಇಮ್ರಾನ್ ಖಾನ್ ಅವರ ಗಮನಕ್ಕೆ ತರಲಾಗಿದೆಯೆಂದು ಅವರು ಹೇಳಿದ್ದಾರೆ. ಭಾರತದಿಂದ ಹತ್ತಿಯನ್ನು ಆಮದು ಮಾಡಿಕೊಳ್ಳುವ ಬಗ್ಗೆ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡ ಬಳಿಕ ಈ ಬಗ್ಗೆ ಔಪಚಾರಿಕ ಆದೇಶವನ್ನು ಅರ್ಥಿಕ ಸಮನ್ವಯ ಸಮಿತಿಯ ಪರಿಶೀಲನೆಗೆ ಸಲ್ಲಿಸಲಾಗುವುದು ಎಂದು ಪತ್ರಿಕೆ ವರದಿ ಮಾಡಿದೆ.

 ಈ ಬಗ್ಗೆ ವಾಣಿಜ್ಯ ಸಚಿವಾಲಯದಲ್ಲಿ ಆಂತರಿಕ ಸಮಾಲೋಚನೆಗಳು ಈಗಾಗಲೇ ಆರಂಭಗೊಂಡಿದ್ದು, ಪ್ರಧಾನಿಯವರ ಅನುಮೋದನೆ ದೊರೆತ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದೆಂದು ಅವರು ತಿಳಿಸಿದರು.

   ‘‘ಆದರೆ ಈ ಹಂತದಲ್ಲಿ ಈ ಬಗ್ಗೆ ಹೌದು ಅಥವಾ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ. ಸೋಮವಾರದ ವೇಳೆಗೆ ತಾನು ಈ ನಿಟ್ಟಿನಲ್ಲಿ ಉತ್ತರಿಸಲು ಸಾಧ್ಯವಾಗಲಿದೆ’’ ಎಂದು ಅಬ್ದುಲ್ ರಝಾಕ್ ತಿಳಿಸಿದ್ದಾರೆ. ಭಾರತ ಹಾಗೂ ಪಾಕ್ ಜೊತೆಗಿನ ವಾಣಿಜ್ಯ ಬಾಂಧವ್ಯಗಳ ಮರುಸ್ಥಾಪನೆಯಿಂದ ಪಾಕಿಸ್ತಾನದ ವಿವಿಧ ಸಾಮಾಗ್ರಿಗಳ ಉತ್ಪಾದನಾ ವೆಚ್ಚ ಕಡಿಮೆ ಆಗಲಿದೆ ಹಾಗೂ ಆಹಾರವಸ್ತುಗಳು ಸುಸ್ಥಿರವಾಗಿ ಪೂರೈಕೆಯಾಗಲಿವೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ತಿಳಿಸಿದೆ.

 ಭಾರತದ ಜೊತೆ ವಾಣಿಜ್ಯ ಬಾಂಧವ್ಯ ಸ್ಥಗಿತಗೊಂಡ ಬಳಿಕ ಪಾಕಿಸ್ತಾವು ಹತ್ತಿ ಹಾಗೂ ಗಿರಣಿ ನೂಲನ್ನು ದೂರದ ಅಮೆರಿಕ, ಬ್ರೆಝಿಲ್ ಹಾಗೂ ಉಝ್ಬೆಕಿಸ್ತಾನಗಳಿಂದ ದುಬಾರಿ ಬೆಲೆಗೆ ಆಮದು ಮಾಡಿಕೊಳ್ಳುತ್ತಿತ್ತು. ಆದರೆ ಭಾರತದಿಂದ ಹತ್ತಿಯ ಆಮದು ಅತ್ಯಂತ ಅಗ್ಗವಾದುದು ಮಾತ್ರವಲ್ಲದೆ ಕೇವಲ ಮೂರ್ನಾಲ್ಕು ದಿನಗಳೊಳಗೆ ತಲುಪುತ್ತಿತ್ತು. ಗಿರಣಿ ನೂಲಿನ ಆಮದಿನಲ್ಲಿನ ವಿಳಂಬದಿಂದಾಗಿ ಪಾಕಿಸ್ತಾನವು ತನಗೆ ದೊರೆಯುತ್ತಿದ್ದ ರಫ್ತು ಆರ್ಡರ್‌ಗಳನ್ನು ಸಕಾಲಿಕವಾಗಿ ಪೂರೈಕೆ ಮಾಡಲು ಸಾಧ್ಯವಾಗುತ್ತಿರಲಿಲ್ಲ.ಭಾರತದಿಂದ ಹತ್ತಿ ಹಾಗೂ ಗಿರಣಿ ನೂಲನ್ನು ಆಮದು ಮಾಡುವಂತೆ ಪಾಕಿಸ್ತಾನದ ಜವಳಿ ಮಿಲ್‌ಗಳ ಸಂಘವು (ಅಪ್ತಮಾ), ಪಾಕ್ ಸರಕಾರದ ಮೇಲೆ ತೀವ್ರ ಒತ್ತಡವನ್ನು ಹೇರುತ್ತಿದೆಯೆನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X