Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತನ್ವೀರ್ ಸೇಠ್ ಜೆಡಿಎಸ್‍ಗೆ ಬಂದರೆ...

ತನ್ವೀರ್ ಸೇಠ್ ಜೆಡಿಎಸ್‍ಗೆ ಬಂದರೆ ಸ್ವಾಗತಿಸುತ್ತೇವೆ: ಶಾಸಕ ಸಾ.ರಾ.ಮಹೇಶ್

ವಾರ್ತಾಭಾರತಿವಾರ್ತಾಭಾರತಿ28 Feb 2021 10:46 PM IST
share
ತನ್ವೀರ್ ಸೇಠ್ ಜೆಡಿಎಸ್‍ಗೆ ಬಂದರೆ ಸ್ವಾಗತಿಸುತ್ತೇವೆ: ಶಾಸಕ ಸಾ.ರಾ.ಮಹೇಶ್

ಮೈಸೂರು, ಫೆ.28: ಮೈಸೂರು ಮೇಯರ್ ಆಯ್ಕೆ ಸಂಬಂಧ ಶಾಸಕ ತನ್ವೀರ್ ಸೇಠ್ ಅವರದು ಯಾವುದೇ ತಪ್ಪು ಇಲ್ಲ. ಈ ಮೊದಲೇ ಒಪ್ಪಂದದಂತೆ ನಾವು ಮಾತನಾಡಿದ್ದೆವು. ಶಾಸಕ ತನ್ವೀರ್ ಸೇಠ್ ಅವರನ್ನು ಕಾಂಗ್ರೆಸ್ ವಜಾ ಮಾಡಿದರೆ, ಜೆಡಿಎಸ್‍ಗೆ ಸ್ವಾಗತಿಸುತ್ತೇವೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.

ನಗರದ ತಮ್ಮ ಕಚೇರಿಯಲ್ಲಿ ರವಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತನ್ವಿರ್ ಸೇಠ್ ಒಬ್ಬ ಅಲ್ಪಸಂಖ್ಯಾತ ಮುಖಂಡ. ನಮಗೆ ಅವರ ಬಗ್ಗೆ ಗೌರವವಿದೆ. ಅವರು ಜೆಡಿಎಸ್‍ಗೆ ಬಂದರೆ ಸ್ವಾಗತ ಎಂದು ಹೇಳಿದರು.

ಪಕ್ಷಕ್ಕೆ ಬಂದರೆ ಟಿಕೆಟ್ ನೀಡುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮೊದಲು ಅವರು ಪಕ್ಷಕ್ಕೆ ಬರಲಿ. ಆಮೇಲೆ ನೋಡೋಣ ಎಂದು ತಿಳಿಸಿದರು.

ಮೂರು ಮೇಯರ್ ಸ್ಥಾನ ಜೆಡಿಎಸ್‍ಗೆ, 2 ಮೇಯರ್ ಸ್ಥಾನ ಕಾಂಗ್ರೆಸ್‍ಗೆ ಎಂದು ಮಾತುಕತೆಯಾಗಿತ್ತು. ರಾಜ್ಯದಲ್ಲಿ ಮೈತ್ರಿ ಮುರಿದು ಬಿದ್ದಿದ್ದರಿಂದ ಕೆಲವು ಸನ್ನಿವೇಶಗಳು ಪ್ರಾರಂಭವಾಯಿತು. ಈ ಹಿಂದೆ ಸಿದ್ದರಾಮಯ್ಯ ಜೆಡಿಎಸ್ ಬಗ್ಗೆ ಹೋಟೆಲ್‍ನಲ್ಲಿದ್ದು ರಾಜಕಾರಣ ಮಾಡುತ್ತಾರೆ ಎನ್ನುತ್ತಿದ್ದರು. ನಾವು ಹೋಟೆಲ್‍ನಲ್ಲಿ ಕುಳಿತು ರಾಜಕಾರಣ ಮಾಡಲು ಕಾರಣ ಯಾರು ಎಂದು ಪ್ರಶ್ನಿಸಿದರು.

ನಾವು ವಾಸ್ತವವಾಗಿ ಯಾರೊಂದಿಗೂ ದೊಡ್ಡ ಮಟ್ಟದಲ್ಲಿ ಮಾತುಕತೆ ನಡೆಸಿರಲಿಲ್ಲ. ಕಾಂಗ್ರೆಸ್‍ನ ಅಧ್ಯಕ್ಷರು ಹಾಗೂ ಶಾಸಕ ತನ್ವಿರ್ ಸೇಠ್ ನನ್ನ ಕಚೇರಿಗೆ ಬರುತ್ತೇನೆ ಅಂದಿದ್ದರು. ಅದಕ್ಕೆ ನಾನು ಬನ್ನಿ ಅಂದೆ. 3 ಮೇಯರ್ ಸ್ಥಾನ ನಿಮಗೆ, ನಮಗೆ 2 ಸ್ಥಾನ ಎಂದು ಅವರೇ ಹೇಳಿದ್ದರು. ಸಿದ್ದರಾಮಯ್ಯ ಹೇಳಿಕೆ ಬಿಟ್ಟರೆ ಕಾಂಗ್ರೆಸ್ ಬಗ್ಗೆ ನಮಗೆ ಯಾವುದೇ ಬೇಸರವಿಲ್ಲ. ಬಳಿಕ ಬಿಜೆಪಿಯವರು ನನ್ನ ಕಚೇರಿಗೆ ಬಂದರು. ರಾಜ್ಯ ನಾಯಕರ ಗಮನಕ್ಕೆ ತರುತ್ತೇವೆ ಎಂದು ಹೇಳಿದ್ದೆ. ಡಿ.ಕೆ.ಶಿವಕುಮಾರ್ ಎರಡು ಬಾರಿ ದೂರವಾಣಿ ಮೂಲಕ ಮಾತನಾಡಿದ್ದರು. ಇದನ್ನು ಕುಮಾರಸ್ವಾಮಿ ಅವರಿಗೂ ತಿಳಿಸಿದ್ದೆವು. ನಾನು ರಾಜ್ಯಾಧ್ಯಕ್ಷರಾಗಿರುವಾಗ ಮೈಸೂರು ಮೇಯರ್ ಸ್ಥಾನ ಪಡೆಯಲಿಲ್ಲ ಎಂಬಂತಾಗುತ್ತದೆ. ಆದ್ದರಿಂದ ಕಾಂಗ್ರೆಸ್ ಜೊತೆ ಬನ್ನಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರು. ಬಳಿಕ ತನ್ವೀರ್ ಸೇಠ್ ಭೇಟಿ ಮಾಡಿದೆವು. ನಂತರ ಧ್ರುವನಾರಾಯಣ್ ಸಹ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದರು ಎಂದು ಬೆಳವಣಿಗೆ ಬಗ್ಗೆ ವಿವರಿಸಿದರು.

ಕಾಂಗ್ರೆಸ್‍ನಲ್ಲಿ ಟಿಕೆಟ್ ನೀಡದ ಹಿನ್ನೆಲೆ ಶ್ರೀಧರ್ ಪಕ್ಷೇತರರಾಗಿ ಸ್ಪರ್ಧೆ ಮಾಡಿ ಗೆದ್ದಿದ್ದರು. ಸಮೀವುಲ್ಲಾ, ಕೆ.ವಿ.ಶ್ರೀಧರ್ ಹಾಗೂ ಮ.ವಿ.ರಾಮಪ್ರಸಾದ್‍ಗೆ ವರ್ಕ್ ಕಮಿಟಿ ಕೊಡುವುದಾಗಿ ತೀರ್ಮಾನವಾಗಿ ಬೆಂಬಲ ಪಡೆದಿದ್ದೆವು. ಪಕ್ಷೇತರರ ಬೆಂಬಲ ಪಡೆದು ಸ್ವತಂತ್ರವಾಗಿ ಸ್ಪರ್ಧಿಸುವ ಇಂಗಿತವಿತ್ತು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X