Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ತಮಿಳುನಾಡಿನ ‘ರಿಮೋಟ್...

ಪ್ರಧಾನಿ ತಮಿಳುನಾಡಿನ ‘ರಿಮೋಟ್ ಕಂಟ್ರೋಲ್’ ಆಗ ಬಯಸುತ್ತಿದ್ದಾರೆ: ರಾಹುಲ್ ಗಾಂಧಿ

“ಸಂಪತ್ತು ಹಂಚಿಕೆಯ ಅಸಮಾನತೆ ಬಿಜೆಪಿ ಆಡಳಿತದಲ್ಲಿ ಅಧಿಕ”

ವಾರ್ತಾಭಾರತಿವಾರ್ತಾಭಾರತಿ28 Feb 2021 11:40 PM IST
share
ಪ್ರಧಾನಿ ತಮಿಳುನಾಡಿನ ‘ರಿಮೋಟ್ ಕಂಟ್ರೋಲ್’ ಆಗ ಬಯಸುತ್ತಿದ್ದಾರೆ: ರಾಹುಲ್ ಗಾಂಧಿ

ಹೊಸದಿಲ್ಲಿ, ಫೆ. 28: ನರೇಂದ್ರ ಮೋದಿ ಹಾಗೂ ಎಐಎಡಿಎಂಕೆ ಸರಕಾರದ ವಿರುದ್ಧ ರವಿವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಅವರು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಮೂಲಕ ತಮಿಳುನಾಡಿನ ‘ರಿಮೋಟ್ ಕಂಟ್ರೋಲ್’ ಆಗ ಬಯಸುತ್ತಿದ್ದಾರೆ ಎಂದಿದ್ದಾರೆ.

  ‘‘ನಾನು ಮೋದಿ ಅವರಿಗೆ ಹೆದರದೇ ಇರುವ ಕಾರಣ ರಾತ್ರಿ ಮಲಗಿದ 30 ಸೆಕೆಂಡುಗಳಲ್ಲಿ ನಿದ್ರೆಗೆ ಜಾರುತ್ತೇನೆ. ತಮಿಳುನಾಡು ಮುಖ್ಯಮಂತ್ರಿ ಅವರು ನಿದ್ರಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತಾರೆ ? ಪ್ರಮಾಣಿಕರಲ್ಲದೇ ಇರುವುದರಿಂದ ಅವರು ರಾತ್ರಿ ನಿದ್ರಿಸಲು ಸಾಧ್ಯವಿಲ್ಲ. ಪ್ರಾಮಾಣಿಕರಲ್ಲದೇ ಇರುವುದರಿಂದ, ತಮಿಳುನಾಡು ಜನರನ್ನು ತಾನು ನಿಯಂತ್ರಿಸಬಹುದು ಎಂದು ಚಿಂತಿಸುತ್ತಿರುವ ಪ್ರಧಾನಿ ಮೋದಿ ವಿರುದ್ಧ ಅವರು ನಿಲ್ಲಲು ಸಾಧ್ಯವಿಲ್ಲ’’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

 ತಾನು ಪ್ರಾಮಾಣಿಕ ವ್ಯಕ್ತಿ ಎಂದು ಬಿಂಬಿಸಿಕೊಂಡ ರಾಹುಲ್ ಗಾಂಧಿ, ಇದರಿಂದಾಗಿ ಮೋದಿ ಅವರಿಗೆ ತನ್ನನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ, ಅವರು ತನ್ನನ್ನು ಗುರಿಯಾಗಿಸಿ ವಾಗ್ದಾಳಿ ನಡೆಸುತ್ತಿದ್ದಾರೆ ಎಂದರು.

 ತಮಿಳುನಾಡು ತನ್ನ ಟಿ.ವಿ.ಯಂತೆ ಎಂದು ಮೋದಿ ಅವರು ಭಾವಿಸಿದ್ದಾರೆ. ‘ರಿಮೋಟ್ ಕಂಟ್ರೋಲ್’ ತೆಗೆದುಕೊಂಡು ತನಗೆ ಬೇಕಾದದನ್ನು ಮಾಡಬಹುದು. ತಾನು ಹಾಗೂ ಮುಖ್ಯಮಂತ್ರಿ ಮಾತನಾಡುವ ಧ್ವನಿಯನ್ನು ಹೆಚ್ಚು ಕಡಿಮೆ ಮಾಡಬಹುದು. ತಾನು ತಮಿಳುನಾಡು ಜನರನ್ನು ನಿಯಂತ್ರಿಸಬಹುದು ಎಂದು ಅವರು ಭಾವಿಸಿದ್ದಾರೆ. ಆದರೆ, ಜನರು ‘ರಿಮೋಟ್ ಕಂಟ್ರೋಲ್’ನ ಬ್ಯಾಟರಿ ತೆಗೆದು ಹಾಕಿ ಎಸೆಯಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ನರೇಂದ್ರ ಮೋದಿ ಅವರು ತನ್ನನ್ನು ಹೆದರಿಸದೇ ಇರುವುದಕ್ಕೆ ಏಕೈಕ ಕಾರಣ, ತಾನು ಭ್ರಷ್ಟನಲ್ಲದೇ ಇರುವುದು. ತಾನು ಅವರ ಎದುರು ನಿಂತುಕೊಳ್ಳಬಲ್ಲೆ ಹಾಗೂ ಸತ್ಯ ನುಡಿಯಬಲ್ಲೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಸಂಪತ್ತು ಹಂಚಿಕೆಯ ಅಸಮಾನತೆ ಇನ್ನಷ್ಟು ಗಟ್ಟಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಟ್ಯುಟಿಕೋರಿನ್‌ನಲ್ಲಿ ಪ್ರಚಾರಸಭೆಯಲ್ಲಿ ಪಾಲ್ಗೊಂಡ ಅವರು ಉಪ್ಪಿನ ಮಡಿ(ತೊಟ್ಟಿ)ಯ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಉಪ್ಪಿನ ಮಡಿಯಲ್ಲಿ ವರ್ಷಕ್ಕೆ 4 ತಿಂಗಳು ತಮಗೆ ಕೆಲಸವಿರುವುದಿಲ್ಲ. ಆಗ ಸರಕಾರ ಆರ್ಥಿಕ ನೆರವು ಒದಗಿಸಬೇಕು ಎಂದು ಮಹಿಳೆಯೊಬ್ಬರು ಕೋರಿದರು. ಇದಕ್ಕೆ ಉತ್ತರಿಸಿದ ರಾಹುಲ್, ಈ ರೀತಿಯ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ನೇತೃತ್ವದ ಯುಪಿಎಯ ಬಳಿ ಯೋಜನೆಯೊಂದಿದೆ ಎಂದರು. ಕನಿಷ್ಟ ಆದಾಯ ಪರಿಕಲ್ಪನೆ ಅಥವಾ ‘ನ್ಯಾಯ’ ಯೋಜನೆಯು ದೇಶದ ಪ್ರತಿಯೊಂದು ಬಡ ಕುಟುಂಬದ ಹಿತಚಿಂತನೆಯ ಉದ್ದೇಶ ಹೊಂದಿದೆ. ಫಲಾನುಭವಿಗಳು ಯಾವ ರಾಜ್ಯ/ಧರ್ಮದವರು, ಯಾವ ಭಾಷೆ ಮಾತನಾಡುವವರು ಎಂಬುದನ್ನು ಪರಿಗಣಿಸದೆ ವಾರ್ಷಿಕ 72,000 ರೂ. ಹಣವನ್ನು ಅವರ ಬ್ಯಾಂಕ ಖಾತೆಗೆ ಜಮೆ ಮಾಡಲಾಗುವುದು. ಕೇಂದ್ರದಲ್ಲಿ ಯುಪಿಎ ಸರಕಾರ ಅಧಿಕಾರಕ್ಕೆ ಬಂದರೆ ನ್ಯಾಯ ಯೋಜನೆ ಜಾರಿಗೆ ಬರಲಿದೆ ಎಂದು ರಾಹುಲ್ ಹೇಳಿದರು. ಸಾರಾಯಿ ನಿಷೇಧ ಜಾರಿಗೊಳಿಸಬೇಕು, ಈ ಪ್ರದೇಶದಲ್ಲಿ ಖಾಲಿ ಬಿದ್ದಿರುವ ಸರಕಾರಿ ಜಮೀನಿನಲ್ಲಿ ತಮಗೆ ಮನೆ ಕಟ್ಟಿ ವಾಸಿಸಲು ಅವಕಾಶ ನೀಡಬೇಕು, ಉಪ್ಪಿನ ಮಡಿಯ ಕಾರ್ಮಿಕರಿಗೆ ಉತ್ತಮ ವೇತನ, ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ, ಪಿಂಚಣಿ ಸೌಲಭ್ಯ, ಜೀವನ ಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲಿರುವ ಕಾರ್ಮಿಕರು ಉಪ್ಪಿನಲ್ಲಿ ನಿಂತು ಕೆಲಸ ಮಾಡಬೇಕಿರುವುದರಿಂದ ಕಾಲಿನ ಪಾದ ಒಡೆಯುತ್ತದೆ ಎಂದು ಕಾರ್ಮಿಕರು ಸಮಸ್ಯೆ ತೋಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X