Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೆಹುಲ್ ಚೋಕ್ಸಿ ಪೌರತ್ವ ರದ್ದುಪಡಿಸಿದ...

ಮೆಹುಲ್ ಚೋಕ್ಸಿ ಪೌರತ್ವ ರದ್ದುಪಡಿಸಿದ ಆಂಟಿಗುವಾ

ಬಹುಕೋಟಿ ವಂಚನೆ ಹಗರಣ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ1 March 2021 9:24 AM IST
share
ಮೆಹುಲ್ ಚೋಕ್ಸಿ ಪೌರತ್ವ ರದ್ದುಪಡಿಸಿದ ಆಂಟಿಗುವಾ

ಆಂಟಿಗುವಾ, ಮಾ.1: ಬಹುಕೋಟಿ ವಂಚನೆ ಹಗರಣದ ಆರೋಪಿ ನೀರವ್ ಮೋದಿಯ ಗಡಿಪಾರಿಗೆ ಬ್ರಿಟನ್ ನ್ಯಾಯಾಲಯ ಆದೇಶಿಸಿದ ಬೆನ್ನಲ್ಲೇ, ಪ್ರಕರಣದ ಸಹ ಆರೋಪಿ ಮೆಹುಲ್ ಚೋಕ್ಸಿಗೆ ಹೂಡಿಕೆ ಯೋಜನೆ ಆಧಾರದಲ್ಲಿ ನೀಡಿದ್ದ ಪೌರತ್ವವನ್ನು ಕೆರೀಬಿಯನ್ ದೇಶವಾದ ಆಂಟಿಗುವಾ ಮತ್ತು ಬರ್ಬುಡಾ ರದ್ದುಪಡಿಸಿವೆ. 2017ರ ನವೆಂಬರ್‌ನಲ್ಲಿ ಚೋಕ್ಸಿಗೆ ಈ ಪೌರತ್ವ ಲಭಿಸಿತ್ತು.

ಪೌರತ್ವ ಮರುಸ್ಥಾಪನೆ ಸಂಬಂಧ ಆಂಟಿಗುವಾ ಸಿವಿಲ್ ನ್ಯಾಯಾಲಯದಲ್ಲಿ ಚೋಕ್ಸಿ ಕಾನೂನು ಹೋರಾಟ ನಡೆಸುತ್ತಿದ್ದಾರೆ ಎಂದು ಸಿಬಿಐ ಮತ್ತು ಕಾನೂನು ಜಾರಿ ನಿರ್ದೇಶನಾಲಯದ ಉನ್ನತ ಅಧಿಕಾರಿಗಳು ಹೇಳಿದ್ದಾರೆ.

"ಆಂಟಿಗುವಾ ಸರ್ಕಾರ ಚೋಕ್ಸಿಯ ಪೌರತ್ವವನ್ನು ರದ್ದುಪಡಿಸಿದ ಬಳಿಕ ಆರೋಪಿ ಸೆಂಟ್ ಜಾನ್ಸ್ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆಂಟಿಗುವಾ ಸರ್ಕಾರ ವಿರುದ್ಧದ ಕಾನೂನು ಹೋರಾಟದಲ್ಲಿ ಚೋಕ್ಸಿಗೆ ಸೋಲಾಗಲಿದೆ ಎನ್ನುವುದು ನಮ್ಮ ನಂಬಿಕೆ. ಭಾರತೀಯ ಬ್ಯಾಂಕ್‌ಗಳಿಗೆ ವಂಚಿಸಿದ ಬಳಿಕ ಸರ್ಕಾರದ ಹೂಡಿಕೆ ಯೋಜನೆಯ ದುರ್ಲಾಭ ಪಡೆದು ಈ ದ್ವೀಪ ದೇಶದಲ್ಲಿ ಆಶ್ರಯ ಪಡೆಯುವ ಹುನ್ನಾರ ನಡೆಸಿದ್ದ" ಎಂದು ವಿವರಿಸಿದ್ದಾರೆ.

ಪೌರತ್ವ ರದ್ದುಪಡಿಸಿದ್ದನ್ನು ಪ್ರಶ್ನಿಸಿದ ದಾವೆಯನ್ನು ಚೋಕ್ಸಿ ಸದ್ಯದಲ್ಲೇ ಸೋಲಲಿದ್ದಾರೆ. ಆರೋಪಿಯನ್ನು ಭಾರತಕ್ಕೆ ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳುವುದಾಗಿ ಆಂಟಿಗುವಾ ಪ್ರಧಾನಿ ಗ್ಯಾಸ್ಟೊನ್ ಬ್ರೌನ್ ಭರವಸೆ ನೀಡಿದ್ದು, ಗಡೀಪಾರು ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಆಂಟಿಗುವಾ ವೀಕ್ಷಕ ಬ್ರೌನ್ 2019ರ ಜೂನ್‌ನಲ್ಲಿ ನೀಡಿದ ವರದಿಯಲ್ಲಿ, "ಚೋಕ್ಸಿ ಒಬ್ಬ ವಂಚಕ. ಆತನಿಂದಾಗಿ ಸಿಐಪಿ ಯೋಜನೆಯ ಘನತೆಗೆ ಧಕ್ಕೆಯಾಗಿದೆ" ಎಂದು ಉಲ್ಲೇಖಿಸಿದ್ದರು.

2 ಲಕ್ಷ ಡಾಲರ್ ಹೂಡಿಕೆ ಮಾಡುವವರಿಗೆ 132 ದೇಶಗಳಲ್ಲಿ ವೀಸಾಮುಕ್ತ ಪ್ರವಾಸಕ್ಕೆ ಅವಕಾಶವಿರುವ ಆಂಟಿಗುವಾ ಪೌರತ್ವ ನೀಡಲಾಗುತ್ತದೆ. ಈ ದೇಶದ ಜತೆ ಗಡೀಪಾರು ಒಪ್ಪಂದ ಇಲ್ಲದ ಹಿನ್ನೆಲೆಯಲ್ಲಿ ಭಾರತ ಸರ್ಕಾರ 2018ರಲ್ಲಿ ಚೋಕ್ಸಿ ಗಡೀಪಾರಿಗೆ ಮನವಿ ಸಲ್ಲಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X