Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಅನಿವಾರ್ಯ...

ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಅನಿವಾರ್ಯ : ದಿನೇಶ್ ಅಮೀನ್ ಮಟ್ಟು

ವಾರ್ತಾಭಾರತಿವಾರ್ತಾಭಾರತಿ1 March 2021 9:03 PM IST
share
ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಅನಿವಾರ್ಯ : ದಿನೇಶ್ ಅಮೀನ್ ಮಟ್ಟು

ಮಂಗಳೂರು, ಮಾ.1: ಸರಕಾರವೇ ಖಾಸಗೀಕರಣಗೊಳ್ಳುತ್ತಿರುವ ಪ್ರಸಕ್ತ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ಕಲ್ಪಿಸುವ ಸಲುವಾಗಿ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ನೀಡುವುದು ಅನಿವಾರ್ಯವಾಗಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದರು.

ಮಂಗಳೂರಿನ ವಿಕಾಸ ಬಳಗವು ಸೋಮವಾರ ನಗರದ ವಿಕಾಸ ಕಚೇರಿಯಲ್ಲಿ ಏರ್ಪಡಿಸಿದ ‘ಮೀಸಲಾತಿ ಹೋರಾಟ : ಆತಂಕಗಳು, ಸಾಧ್ಯತೆಗಳು’ ಎಂಬ ವಿಷಯದಲ್ಲಿ ನಡೆದ ಸಂವಾದಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರಕಾರವೇ ಉದ್ಯೋಗ ನೀಡುವ ಬದಲು ಹೊರಗುತ್ತಿಗೆಯ ಆಧಾರದ ಮೇಲೆ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿವೆ. ಜೊತೆಗೆ ಪ್ರತಿಯೊಂದು ಕ್ಷೇತ್ರವನ್ನು ಖಾಸಗೀಕರಣಗೊಳಿಸುತ್ತಿವೆ. ಹಾಗಾಗಿ ಮೀಸಲಾತಿಯ ಪ್ರಯೋಜನ ಅರ್ಹ ಎಲ್ಲರಿಗೂ ಲಭಿಸಬೇಕಿದ್ದರೆ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಬೇಕಿದೆ ಎಂದು ದಿನೇಶ್ ಅಮೀನ್ ಮಟ್ಟು ನುಡಿದರು.

ಮೀಸಲಾತಿಗಾಗಿ ಪಂಚಮಸಾಲಿಗಳು ನಡೆಸುವ ಹೋರಾಟಕ್ಕೆ ಸೂಕ್ತ ನೆಲೆಗಟ್ಟಿಲ್ಲ. ಪ್ರಾಯೋಗಿಕವೂ ಅಲ್ಲ. ಅವರ ಹೋರಾಟವು ಮುಖ್ಯಮಂತ್ರಿ ಯಡಿಯೂರಪ್ಪರಿಗೆ ವಿರುದ್ಧ ಎಂಬಂತಹ ದಿಕ್ಕಿನಲ್ಲಿ ಸಾಗುತ್ತಿವೆ.ಹಿಂದುಳಿದ ವರ್ಗಗಳ ಸುಮಾರು 101 ಜಾತಿಗಳ ಜನರು ಇದೀಗ ಅನಾಥ ಮಗುವಿನಂತಾಗಿದ್ದಾರೆ. ಪ್ರಬಲ ಜಾತಿಯ ಮಧ್ಯೆ ಒಡಕು ಸೃಷ್ಟಿಸುವ ಪ್ರಯತ್ನ ಸಕ್ರಿಯವಾಗಿದೆ. ಒಳಮೀಸಲಾತಿಯ ಅನಿವಾರ್ಯತೆಯನ್ನು ಬಿಜೆಪಿ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿವೆ. ಮುಸ್ಲಿಮರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಿಲ್ಲ. ಹಾಗಾಗಿ ಮೀಸಲಾತಿಯಿಂದ ವಂಚಿತರಾದವರಿಗೆ ಸ್ಥಾನಮಾನ, ಉದ್ಯೋಗ ಭದ್ರತೆ, ಪ್ರಾತಿನಿಧ್ಯ ನೀಡುವ ಸಲುವಾಗಿ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಮಟ್ಟು ಅಭಿಪ್ರಾಯಪಟ್ಟರು.

ಸಾಮಾಜಿಕ ನ್ಯಾಯದ ಹೋರಾಟಕ್ಕೆ ಸಂಬಂಧಿಸಿದಂತೆ ಕರ್ನಾಟಕವು ದೇಶಕ್ಕೆ ಮಾದರಿಯಾಗಬೇಕಿತ್ತು. ಆದರೆ, ಸದ್ಯದ ಪರಿಸ್ಥಿತಿ ಅದಕ್ಕೆ ವ್ಯತಿರಿಕ್ತವಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ ನೀಡಲು ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ತಯಾರಿಸಲಾದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಶೈಕ್ಷಣಿಕ, ಸಾಮಾಜಿಕ ಸ್ಥಿತಿಗತಿ ಕುರಿತ ಸಮೀಕ್ಷಾ ವರದಿ ಬಿಡುಗಡೆಯಾಗದಿರುವುದು ವಿಪರ್ಯಾಸ ಎಂದ ಮಟ್ಟು ಮೀಸಲಾತಿಯು ಬಡತನ ನಿರ್ಮೂಲನೆ ಮಾಡಲು ಇರುವಂತದ್ದಲ್ಲ. ಅದು ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಕಲ್ಪಿಸುವ ವ್ಯವಸ್ಥೆಯಾಗಿದೆ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ಒಂದು ಕಾಲದಲ್ಲಿ ಮೀಸಲಾತಿಯ ಫಲಾನುಭವಿಗಳೇ ಇಂದು ಮೀಸಲಾತಿಯನ್ನು ವಿರೋಧಿಸುತ್ತಿರುವುದು ವಿಪರ್ಯಾಸ. ಭೂಸುಧಾರಣೆಯ ಕಾಯ್ದೆಯ ಕೆಲವು ಫಲಾನುಭವಿಗಳ ನಿಲುವು ಅದಕ್ಕೆ ಸ್ಪಷ್ಟ ನಿದರ್ಶನವಾಗಿದೆ ಎಂದ ಮಟ್ಟು ವಿಧಾನಸಭೆ, ವಿಧಾನಪರಿಷತ್, ಲೋಕಸಭೆ, ರಾಜ್ಯಸಭೆಯಲ್ಲೂ ಮೀಸಲಾತಿ ಬೇಕು. ನ್ಯಾಯಾಂಗ ಮತ್ತು ಮಾಧ್ಯಮ ರಂಗದಲ್ಲೂ ಕೂಡ ಮೀಸಲಾತಿ ಕಲ್ಪಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ರೈತ ಸಂಘದ ಯಾದವ ಶೆಟ್ಟಿ, ವಿಚಾರವಾದಿ ನರೇಂದ್ರ ನಾಯಕ್, ನ್ಯಾಯವಾದಿ ಯಶವಂತ ಮರೋಳಿ, ಸಮುದಾಯ ಸಂಘಟನೆಯ ಮುಖಂಡ ವಾಸುದೇವ ಉಚ್ಚಿಲ್, ನಿವೃತ್ತ ಪ್ರಾಂಶುಪಾಲ ಡಾ. ಇಸ್ಮಾಯೀಲ್ ಎನ್.ಮತ್ತಿತರರು ಸಂವಾದದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X