Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಬಿಎಸ್‍ವೈ ಸೇರಿ ಎಲ್ಲರೂ ನನ್ನ...

ಸಿಎಂ ಬಿಎಸ್‍ವೈ ಸೇರಿ ಎಲ್ಲರೂ ನನ್ನ ಜ್ಯೂನಿಯರ್ ಗಳೇ: ಬಸನಗೌಡ ಪಾಟೀಲ್ ಯತ್ನಾಳ್

ವಾರ್ತಾಭಾರತಿವಾರ್ತಾಭಾರತಿ1 March 2021 10:29 PM IST
share
ಸಿಎಂ ಬಿಎಸ್‍ವೈ ಸೇರಿ ಎಲ್ಲರೂ ನನ್ನ ಜ್ಯೂನಿಯರ್ ಗಳೇ: ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು, ಮಾ.1: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರಕಾರದಲ್ಲೇ ಮಂತ್ರಿ ಆಗಿ ನಾನು ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಬಿಎಸ್‍ವೈ ಸೇರಿ ಎಲ್ಲರೂ ನನ್ನ ಜ್ಯೂನಿಯರ್ ಗಳೇ ಆಗಿದ್ದಾರೆ. ನಾನು ಇವರ ಯಾರ ಕಾಲು ಹಿಡಿಯೋ ಮಗನಲ್ಲ ಎಂದು ಮಾಜಿ ಕೇಂದ್ರ ಸಚಿವ, ಹಾಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತೆ ಗುಡುಗಿದ್ದಾರೆ.

ಸೋಮವಾರ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆಲವರು ತಲೆ ಹಿಡಿದು ಮಂತ್ರಿ ಹೇಗೆ ಆಗಿದ್ದಾರೆ ಎನ್ನುವುದರ ಬಗ್ಗೆ ನಾನು ನಾಳೆ ಮಾತನಾಡುತ್ತೇನೆ. ಊರಿಗೆ ಬಂದವಳು ನೀರಿಗೆ ಬರಲೇ ಬೇಕಾಗುತ್ತದೆ. ಎರಡು ವರ್ಷದ ಬಳಿಕವಾದರೂ ಊರಿಗೆ ಬರಲೇ ಬೇಕಾಗುತ್ತದೆ. ಆವಾಗ ನಾವು ಯಾರು ಎಂದು ತಿಳಿಸಬೇಕಾಗುತ್ತದೆ ಎಂದು ಹೇಳಿದರು.

ನಮ್ಮ ಹೋರಾಟ ಕೆಡಿಸೋಕೆ ಕೆಲವು ಸ್ವಾಮೀಜಿಗಳನ್ನು ಮುಂದೆ ಬಿಟ್ಟಿದ್ದರು. ಅವರು ನಮ್ಮನ್ನ ದಾರಿ ತಪ್ಪಿಸುವುದಕ್ಕೆ ಹೊರಟಿದ್ದರು. ಆದರೆ, ನಾವು ಎಚ್ಚೆತ್ತುಕೊಂಡಿದ್ದೇವೆ. ಇದರ ನಡುವೆ ನಮ್ಮ ಅಧಿಕಾರಿಗಳನ್ನೂ ಎತ್ತಿಬಿಟ್ಟರು. ಐಪಿಎಸ್ ಸಂದೀಪ್ ಪಾಟೀಲ್ ಜೈಲಿಗೆ ಹಾಕುವುದಕ್ಕೆ ಹೊರಟಿದ್ದರು. ನಾನು ಅವರಿಗೆ ನಮ್ಮನ್ನ ಮುಟ್ಟಿದರೆ ಹುಷಾರ್ ಎಂದು ಹೇಳಿದ್ದೆ. ನಮ್ಮ ಸಿಎಂ, ಪಿಎಂ ಅವರನ್ನೂ ಹೊರದಬ್ಬುತ್ತೇವೆ ಎಂದು ಹೇಳಿದ್ದೆ. ನಮ್ಮ ಅಧಿಕಾರಿಗಳನ್ನೇ ಬಿಟ್ಟು ನಮ್ಮ ಹಣಿಯೋಕೆ ಹೊರಟರು ಎಂದು ತಿಳಿಸಿದರು.

ಜ.14ರಿಂದ ಕೂಡಲಸಂಗಮದಿಂದ ಪಾದಯಾತ್ರೆ ಪ್ರಾರಂಭವಾಗಿ ಅಲ್ಲಿಂದ ಇಲ್ಲಿಗೆ ಬಂದು ಧರಣಿ ನಡೆದಿದೆ. ಮಳೆ, ಬಿಸಿಲು, ಗಾಳಿಗೆ ಹೆದರದೇ ಹೋರಾಟ ನಡೆಸಿದ್ದೇವೆ. ಸಮುದಾಯದ ಮಕ್ಕಳ ಭವಿಷ್ಯಕ್ಕಾಗಿ ಈ ಹೋರಾಟ ನಡೆಸಲಾಗುತ್ತಿದೆ. ಹರಿಹರಕ್ಕೆ ಪಾದಯಾತ್ರೆ ಬಂದ ಮೇಲೆ ದೊಡ್ಡ ಚಾಲೆಂಜ್ ಎದುರಾಗಿತ್ತು. ಹೋರಾಟ ತಡೆಯಲು ನಮ್ಮವರೇ ಪ್ರಯತ್ನ ಮಾಡಿದ್ದರು. ಹರಪ್ಪನಹಳ್ಳಿಯಲ್ಲೂ ಅವಮಾನ ಮಾಡಿದರು. ಆದರೂ ಎದೆಗುಂದದೆ ಹೋರಾಟ ನಡೆಯಿತು. ಹರಿಹರದಲ್ಲಿ ಸಂಗಮ ಆಗಿದ್ದರಿಂದ ಯಾವ ತಡೆಯೂ ನಿಲ್ಲಲಿಲ್ಲ. ಇಲ್ಲಿಯವರೆಗೆ ನಿರಾತಂಕವಾಗಿ ನಡೆದಿದೆ ಎಂದರು.

ಚನ್ನಪ್ಪ ಚನ್ನಗೌಡ, ಕುಂಬಾರ ಮಾಡಿದ ಕೊಡನವ್ವಾ ಎಂಬ ಹಾಡನ್ನು ಹಾಡುವ ಮೂಲಕ ಧರಣಿಗೆ ಮತ್ತಷ್ಟು ಶಕ್ತಿ ತುಂಬಿದರು.

ನಾನು ಅಲ್ಲಿ, ನೀವು ಇಲ್ಲಿ ಧರಣಿ ಮಾಡಿ

ನಾವು ಅಲ್ಲಿ ಧರಣಿ ಮಾಡುತ್ತೇವೆ. ನೀವು ಇಲ್ಲಿ ಧರಣಿ ಮಾಡಿ ಎಂದು ಹೇಳಿದ ಬಸನಗೌಡ ಯತ್ನಾಳ್ ಅವರು, ನಾನು ಅಲ್ಲಿಯೇ ರಾತ್ರಿ ಕೂಡ ಊಟ ಮಾಡಿ ಮಲಗುತ್ತೇನೆ. ಅದು ಹೇಗೆ ಹೊರಗೇ ಹಾಕುತ್ತಾರೆ ಎನ್ನುವುದನ್ನು ನಾನೂ ನೋಡುತ್ತೇನೆ ಎಂದು ತಿಳಿಸಿದರು.

‘ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಒತ್ತಾಯಿಸಿ ಮಾ.2ರಿಂದ ಪತ್ರ ಚಳುವಳಿಯನ್ನೂ ಪ್ರಾರಂಭಿಸಲು ಮುಂದಾಗಿದ್ದೇವೆ.’

- ಬಸವ ಜಯಮೃತ್ಯುಂಜಯ ಸ್ವಾಮೀಜಿ, ಕೂಡಲ ಸಂಗಮ ಪೀಠ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X