Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭಾ ಮತ್ತು ರಾಜ್ಯಸಭಾ ಟಿವಿ 'ಸಂಸದ್...

ಲೋಕಸಭಾ ಮತ್ತು ರಾಜ್ಯಸಭಾ ಟಿವಿ 'ಸಂಸದ್ ಟಿವಿ'ಯಾಗಿ ವಿಲೀನ

ವಾರ್ತಾಭಾರತಿವಾರ್ತಾಭಾರತಿ2 March 2021 12:53 PM IST
share
ಲೋಕಸಭಾ ಮತ್ತು ರಾಜ್ಯಸಭಾ ಟಿವಿ ಸಂಸದ್ ಟಿವಿಯಾಗಿ ವಿಲೀನ

ಹೊಸದಿಲ್ಲಿ,ಮಾ.2: ಭಾರತೀಯ ಸಂಸತ್ತು ತನ್ನ ಲೋಕಸಭಾ ಮತ್ತು ರಾಜ್ಯಸಭಾ ಟಿವಿ ವಾಹಿನಿಗಳನ್ನು ಒಗ್ಗೂಡಿಸಿ ನೂತನ ಸಂಸದ್ ಟವಿಯನ್ನು ಸೃಷ್ಟಿಸಿದೆ. ನೂತನ ವಾಹಿನಿಯು ಸಂಸತ್ ಕಲಾಪಗಳ ನೇರಪ್ರಸಾರವನ್ನು ಮುಂದುವರಿಸಲಿದೆ ಮತ್ತು ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಸುದ್ದಿ ಮತ್ತು ಪ್ರಚಲಿತ ವಿದ್ಯಮಾನಗಳನ್ನೂ ಪ್ರಸಾರಿಸಲಿದೆ.

 ಮಾಜಿ ಜವಳಿ ಕಾರ್ಯದರ್ಶಿ ರವಿ ಕಪೂರ್ ಅವರನ್ನು ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ನೂತನ ಸಂಸದ್ ಟಿವಿಯ ಸಿಇಒ ಆಗಿ ನೇಮಕಗೊಳಿಸಲಾಗಿದೆ.

2019ರಲ್ಲಿ ಪ್ರಸಾರ ಭಾರತಿ ನೇತೃತ್ವದ ತಜ್ಞರ ಸಮಿತಿಯು ವಿಲೀನ ಯೋಜನೆಯನ್ನು ಪ್ರಸ್ತಾವಿಸಿತ್ತು ಮತ್ತು ಇದು ವೆಚ್ಚಗಳ ಕಡಿತ,ವಾಹಿನಿಯ ಸುವ್ಯವಸ್ಥಿತ ವ್ಯವಸ್ಥಾಪನೆ ಮತ್ತು ವೀಕ್ಷಕರಿಗೆ ಹಾಗೂ ಜಾಹೀರಾತುದಾರಿಗಾಗಿ ಹೆಚ್ಚು ಆಕರ್ಷಕವಾಗಿಸಲು ಕಾರ್ಯಕ್ರಮದ ವಿಷಯಗಳ ಪರಿಷ್ಕರಣೆಯ ಉದ್ದೇಶವನ್ನು ಹೊಂದಿದೆ. ಲೋಕಸಭಾ ಮತ್ತು ರಾಜ್ಯಸಭಾ ವಾಹಿನಿಗಳೆರಡೂ ಲಾಭದಾಯಕವಾಗಿದ್ದು,ಸಾರ್ವಜನಿಕ ಕ್ಷೇತ್ರದ ಉದ್ಯಮಗಳು ಮತ್ತು ಸಚಿವಾಲಯಗಳಿಂದ ಹೆಚ್ಚಿನ ಜಾಹೀರಾತುಗಳನ್ನು ಪಡೆಯುತ್ತಿವೆ.

ನೂತನ ಯೋಜನೆಯಂತೆ ಸಂಸದ್ ಟಿವಿಯು ಸಂಸತ್ತಿನ ಉಭಯ ಸದನಗಳ ಕಲಾಪಗಳ ನೇರ ಪ್ರಸಾರಕ್ಕಾಗಿ ಎರಡು ವೇದಿಕೆಗಳು ಅಥವಾ ವಾಹಿನಿಗಳನ್ನು ಹೊಂದಿರಲಿದೆ. ಕಲಾಪಗಳಿಲ್ಲದಿದ್ದಾಗ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಪ್ರಚಲಿತ ವಿದ್ಯಮಾನಗಳನ್ನು ಪ್ರಸಾರ ಮಾಡಲಿದೆ,ಒಂದು ವಾಹಿನಿಯನ್ನು ಸ್ಥಗಿತಗೊಳಿಸಿ ಇನ್ನೊಂದನ್ನು ನಡೆಸುವ ಪರ್ಯಾಯ ಆಯ್ಕೆಯೂ ಇರಲಿದೆ.

ರಾಜ್ಯಸಭಾ ಟಿವಿ ವಾಹಿನಿಯು ತಾಲಕಟೋರಾ ಸ್ಟೇಡಿಯಮ್ ಬಳಿಯ ಕಟ್ಟಡವೊಂರಲ್ಲಿ ತನ್ನ ಕಚೇರಿ ಮತ್ತು ಸ್ಟುಡಿಯೊ ಹೊಂದಿದ್ದು,ಇದಕ್ಕಾಗಿ ವಾರ್ಷಿಕ 10ರಿಂದ 12 ಕೋ.ರೂ.ಬಾಡಿಗೆಯನ್ನು ಪಾವತಿಸುತ್ತಿದೆ. ವಿಲೀನ ಯೋಜನೆಯು ಖರ್ಚುಗಳಲ್ಲಿ ಭಾರೀ ಮಿತವ್ಯಯವನ್ನು ಸಾಧಿಸಲು ನೆರವಾಗಲಿದೆ ಎಂದು ರಾಜ್ಯಸಭೆಯ ಹಿರಿಯ ಅಧಿಕಾರಿಯೋರ್ವರು ತಿಳಿಸಿದರು. ಸಂಸದ್ ಟಿವಿಯು ಮಹಾದೇವ ರೋಡ್‌ನ ಪುಟ್ಟ ಬಂಗಲೆಯೊಂದರಿಂದ ಕಾರ್ಯಾಚರಿಸಲಿದೆ. ಲೋಕಸಭಾ ಟಿವಿಯು ಸಂಸತ್ತಿನ ಲೈಬ್ರರಿ ಕಟ್ಟಡದಲ್ಲಿ ಸ್ಟುಡಿಯೊ ಮತ್ತು ಸಂಸತ್ ಭವನದ ಮೊದಲ ಅಂತಸ್ತಿನಲ್ಲಿ ಮಾಹಿತಿ ಕೇಂದ್ರವನ್ನು ಹೊಂದಿದೆ. ಈ ಹಾಲಿ ಮೂಲಸೌಕರ್ಯಗಳು ಸಂಸದ್ ಟಿವಿಯನ್ನು ನಡೆಸಲು ಸಾಕಾಗುತ್ತವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X