Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಜೂರು ಉರೂಸ್ ಸಮಾರೋಪ

ಕಾಜೂರು ಉರೂಸ್ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ2 March 2021 4:34 PM IST
share
ಕಾಜೂರು ಉರೂಸ್ ಸಮಾರೋಪ

ಬೆಳ್ತಂಗಡಿ : ತಾಲೂಕಿನ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸೌಹಾರ್ದ ಕ್ಷೇತ್ರ, ಕಾಜೂರು ಉರೂಸ್ ಮಹಾಸಂಭ್ರಮಕ್ಕೆ ರವಿವಾರ ರಾತ್ರಿ ತೆರೆಬಿದ್ದಿದೆ.

ಉರೂಸ್ ಸಮಾರೋಪ ಸಮಾರಂಭಕ್ಕೆ ಮತ್ತು ಕಳೆದ 10 ದಿನಗಳಿಂದ ಕ್ಷೇತ್ರಕ್ಕೆ ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ರಾಜ್ಯಗಳಿಂದಲೂ ಸೇರಿ‌ ನಾಡಿನ ಅನೇಕ ಕಡೆಗಳಿಂದ ಲಕ್ಷಾಂತರ ಮಂದಿ ಆಗಮಿಸಿ‌ ಭಾಗಿಯಾಗಿದ್ದಾರೆ. ಉರೂಸ್ ಸಮಾರೋಪದಂಗವಾಗಿ ರವಿವಾರ ರಾತ್ರಿ ಪ್ರಾರಂಭವಾದ ಅನ್ನದಾನ ಸೋಮವಾರ ಸಂಜೆಯವರೆಗೂ ನಡೆದಿದ್ದು‌ ಇದರಲ್ಲಿ ಲಕ್ಷದಷ್ಟು ಮಂದಿ ಅನ್ನಪ್ರಸಾದ ಸ್ವೀಕರಿಸಿದ್ದಾರೆ.

ಉರೂಸ್ ಸಮಾರೋಪದ ಅಧ್ಯಕ್ಷತೆಯನ್ನು ಕಾಜೂರು ಶಿಕ್ಷಣ ಸಂಸ್ಥೆಗಳ ಪ್ರಾಚಾರ್ಯ ಸಯ್ಯಿದ್ ಕಾಜೂರು ತಂಙಳ್ ವಹಿಸಿದ್ದರು.
ಮೌಲೀದ್ ಮತ್ತು ದುಆ ಪ್ರಾರ್ಥನೆಗೆ ಸಯ್ಯಿದ್ ಉಪ್ಪಳ್ಳಿ‌ ತಂಙಳ್ ಚಿಕ್ಕಮಗಳೂರು ಮತ್ತು ಅಲ್ ಖಾದಿಸ ಎಜುಕೇಶನ್ ಅಕಾಡಮಿ ಚೇರ್ಮನ್ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ನೇತೃತ್ವ ನೀಡಿದರು.

ವೇದಿಕೆಯಲ್ಲಿ ಸಯ್ಯಿದ್ ಸಿಟಿಎಂ ಸಲಿಂ ತಂಙಳ್ ಸಹಿತ ಪ್ರಮುಖ ಗಣ್ಯರು ಭಾಗಿಯಾಗಿದ್ದರು. ಕೇರಳದ ಪ್ರಖ್ಯಾತ ವಾಗ್ಮಿ ಲುಕ್ಮಾನುಲ್ ಹಕೀಂ ಸಖಾಫಿ ಪುಲ್ಲರ ಮಲಪ್ಪುರಂ ಧಾರ್ಮಿಕ ಉಪನ್ಯಾಸ ನಡೆಸಿಕೊಟ್ಟರು. ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಸ್ವಾಗತಿಸಿ, ಹತ್ತು ದಿನಗಳ ಸಂಭ್ರಮದ ಯಶಸ್ಸಿಗೆ ಕಾರಣರಾದ ಸರ್ವರನ್ನು ನೆನೆದರು. 

ಉರೂಸ್ ಸಮಿತಿ ಉಪಾಧ್ಯಕ್ಷ ಕೆ.ಮುಹಮ್ಮದ್ ಕಿಲ್ಲೂರು, ಜೊತೆ ಕಾರ್ಯದರ್ಶಿ ಎಂ.ಎ ಕಾಸಿಂ ಮಲ್ಲಿಗೆಮನೆ, ಕೋಶಾಧಿಕಾರಿ ಕೆ.ಎಮ್‌ ಕಮಾಲ್ ಕಾಜೂರು ಉಪಸ್ಥಿತರಿದ್ದರು. ಕಾಜೂರು‌-ಕಿಲ್ಲೂರು ಜಂಟಿ‌ ಜಮಾಅತ್ ನ‌ ಉರೂಸ್ ಸಮಿತಿ ಸದಸ್ಯರುಗಳು, ಕಾಜೂರು ಸರ್ವ ಮೊಹಲ್ಲಾಗಳವರು ಉರೂಸ್  ಕಾರ್ಯಕ್ರಮವನ್ನು ಮಾದರಿಯಾಗಿ ರೂಪಿಸಿಕೊಟ್ಟರು.

ರಶೀದ್ ಮದನಿ ನಿರೂಪಿಸಿ, ಉರೂಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಜೆ.ಹೆಚ್ ಅಬೂಬಕರ್ ಸಿದ್ದೀಕ್ ಕಾಜೂರು ವಂದಿಸಿದರು. ಸುಮಾರು 800 ರಷ್ಟು ಸ್ವಯಂ ಸೇವಕರು ಶಿಸ್ತುಬದ್ಧವಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿದರು. ಆಗಮಿಸಿದ ಸರ್ವರಿಗೂ ಅನ್ನದಾನ, ತಂಪು ಪಾನೀಯ ವಿತರಣೆ ನಡೆಯಿತು. 10 ದಿನಗಳಲ್ಲಿ ಪ್ರಖ್ಯಾತ ವಾಗ್ಮಿಗಳಿಂದ ಧಾರ್ಮಿಕ ಉಪನ್ಯಾಸ ನಡೆಯಿತು.

ರಹ್ಮಾನಿಯಾ ದಫ್ ಸಮಿತಿ ಕಾಜೂರು ಇವರಿಂದ ಇಸ್ಮಾಯಿಲ್ ಮುಸ್ಲಿಯಾರ್ ನೇತೃತ್ವದಲ್ಲಿ ಇಸ್ಲಾಂ ಸಾಂಪ್ರದಾಯಿಕ ದಪ್ಫ್ ಪ್ರದರ್ಶನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X