Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಅರ್ಧ ಬೇಯಿಸಿದ ಅನುಪಯುಕ್ತ ಮಾಹಿತಿಯ...

"ಅರ್ಧ ಬೇಯಿಸಿದ ಅನುಪಯುಕ್ತ ಮಾಹಿತಿಯ ತುಣುಕು": ದಿಲ್ಲಿ ಗಲಭೆಗೆ ಸಂಬಂಧಿಸಿದ ವರದಿ ಕುರಿತು ಪೊಲೀಸರಿಗೆ ಕೋರ್ಟ್‌ ತರಾಟೆ

ವಾರ್ತಾಭಾರತಿವಾರ್ತಾಭಾರತಿ2 March 2021 5:16 PM IST
share
ಅರ್ಧ ಬೇಯಿಸಿದ ಅನುಪಯುಕ್ತ ಮಾಹಿತಿಯ ತುಣುಕು: ದಿಲ್ಲಿ ಗಲಭೆಗೆ ಸಂಬಂಧಿಸಿದ ವರದಿ ಕುರಿತು ಪೊಲೀಸರಿಗೆ ಕೋರ್ಟ್‌ ತರಾಟೆ

ಹೊಸದಿಲ್ಲಿ: ಕಳೆದ ವರ್ಷ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮೇ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಯೊಬ್ಬರ ಮೇಲೆ ದಾಖಲಾದ ವಿಜಿಲೆನ್ಸ್ ವಿಚಾರಣಾ ವರದಿಯ ಕುರಿತು ದಿಲ್ಲಿ ಹೈಕೋರ್ಟ್ ಸೋಮವಾರ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ತಾನು ನೀಡಿರುವ ತಪ್ಪೊಪ್ಪಿಗೆ ಹೇಳಿಕೆ ಮಾಧ್ಯಮಗಳಲ್ಲಿ ಸೋರಿಕೆಯಾಗಿದೆ ಎಂದಿರುವ ಆಸಿಫ್ ಇಕ್ಬಾಲ್ ತನ್ಹಾ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಾಧ್ಯಮಗಳ ವಿಚಾರಣೆಯ ಕುರಿತು ಆರೋಪಿಸಿದ್ದರು.
ದಿಲ್ಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಲಯ ವಿಜಿಲೆನ್ಸ್ ವರದಿಯು ‘ಅರ್ಧ ಬೇಯಿಸಿದ ಹಾಗೂ ಅನುಪಯುಕ್ತ ಮಾಹಿತಿಯ ತುಣುಕು’ ಎಂದು ಹೇಳಿತು. 

ಈ ವಿಜಿಲೆನ್ಸ್ ವರದಿಯು ಸಣ್ಣ ಕಳ್ಳತನ ಪ್ರಕರಣದಲ್ಲಿ ಮಾಡುವ ಸಾಮಾನ್ಯ ವಿಚಾರಣೆಗಿಂತಲೂ ಕೆಟ್ಟದ್ದಾಗಿದೆ. ಇವು ಕೊರಿಯರ್ ಮೂಲಕ ಕಳುಹಿಸಲಾದ ಫೈಲ್ ಗಳಲ್ಲ. ಇವು ಕೈಯಲ್ಲಿ ಹಿಡಿದಿರುವ ಫೈಲ್ ಗಳಾಗಿವೆ ಎಂದು ನ್ಯಾಯಮೂರ್ತಿ ಮುಕ್ತಾ ಗುಪ್ತಾ ಹೇಳಿದ್ದಾರೆ.

ನ್ಯಾಯಾಲಯದಲ್ಲಿ ಒಪ್ಪಿಕೊಳ್ಳಲಾಗದ ಹಾಗೂ ಸಾಕ್ಷಿಯಾಗಿ ಪರಿಗಣಿಸಲಾಗದ ಪೊಲೀಸರಿಗೆ ನೀಡಿದ ತಪ್ಪೊಪ್ಪಿಗೆ ಹೇಳಿಕೆ ಮಾಧ್ಯಮದಲ್ಲಿ ಸೋರಿಕೆಯಾಗಿದೆ ಹಾಗೂ ತನ್ನನ್ನು ತಪ್ಪಾಗಿ ನಿರೂಪಿಸಲಾಗಿದೆ ಎಂದು ಕಳೆದ ವರ್ಷ 24ರ ವಯಸ್ಸಿನ ಆಸಿಫ್ ಇಕ್ಬಾಲ್ ತನ್ಹಾ ಹೇಳಿದ್ದರು.

ಅರ್ಜಿಗೆ ಉತ್ತರಿಸಿದ ನ್ಯಾಯಾಲಯವು ದಿಲ್ಲಿ ಪೊಲೀಸರು ಹಾಗೂ ಸುದ್ದಿ ವಾಹಿನಿಗಳಿಂದ ಉತ್ತರವನ್ನು ಕೋರಿತ್ತು. ಈ ಕುರಿತಾಗಿ ಪ್ರತಿಕ್ರಿಯಿಸಿದ್ದ ದಿಲ್ಲಿ ಪೊಲೀಸರು, ನಾವು ರಾಜ್ಯ ಸರಕಾರ ಹಾಗೂ ಗೃಹ ಸಚಿವಾಲಯಕ್ಕೆ ಮಾತ್ರ ವರದಿ ಹಂಚಿಕೊಂಡಿದ್ದಾಗಿ ತಿಳಿಸಿತ್ತು.

ಇವರು ಹಿರಿಯ ಐಎಎಸ್ ಅಧಿಕಾರಿಗಳು. ನೀವು ಎಲ್ಲಿ ವಿಚಾರಣೆ ನಡೆಸಿದ್ದೀರಿ, ಯಾರನ್ನು ವಿಚಾರಿಸಿದ್ದೀರಿ? ಫೈಲ್‍ಗಳನ್ನು ಎಲ್ಲಿಗೆ ಕಳುಹಿಸಲಾಗಿದೆ?ದಿಲ್ಲಿ ಹಾಗೂ ಗೃಹ ಸಚಿವಾಲಯಕ್ಕೆ ಯಾರು ಕೊಟ್ಟಿದ್ದು?, ಅದನ್ನು ವಾಪಸ್ ತಂದಿದ್ದು ಯಾರು?..ಇದು ಯಾವುದು ವರದಿಯಲ್ಲಿಲ್ಲ. ಇದು ಸಂಪೂರ್ಣ ಮೌನವಾಗಿದೆ. ಇದು ಬೀದಿಯಲ್ಲಿ ಮಲಗಿರುವ ದಾಖಲೆಗಳಲ್ಲ ಎಂದು ನ್ಯಾಯಾಲಯವು ಕಟುವಾಗಿ ಹೇಳಿದೆ. 
ಸ್ಟೂಡೆಂಟ್ಸ್ ಇಸ್ಲಾಮಿಕ್ ಸಂಘಟನೆಯ ಸದಸ್ಯರಾದ ತನ್ಹಾ ಪೌರತ್ವ ಕಾನೂನಿನ ವಿರುದ್ದ ಪ್ರತಿಭಟನೆಗಳನ್ನು ಮುನ್ನಡೆಸಿದ್ದ ಜಾಮಿಯಾ ಸಮನ್ವಯ ಸಮಿತಿಯ ಭಾಗವಾಗಿದ್ದರು ಎಂದು ಪೊಲೀಸರು ಈ ಹಿಂದೆ ಹೇಳಿದ್ದರು. ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ (ಯುಎಪಿಎ) ಅವರನ್ನು ಮೇ ತಿಂಗಳಲ್ಲಿ ಬಂಧಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X