Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದ ಸಾಮಾಜಿಕ ಸಾಮರಸ್ಯ ಅಪಾಯದಲ್ಲಿದೆ,...

ಕೇರಳದ ಸಾಮಾಜಿಕ ಸಾಮರಸ್ಯ ಅಪಾಯದಲ್ಲಿದೆ, ನೂತನ ಅಭಿವೃದ್ಧಿ ಕಾರ್ಯತಂತ್ರದ ಅಗತ್ಯವಿದೆ: ಸೋನಿಯಾ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ2 March 2021 9:52 PM IST
share
ಕೇರಳದ ಸಾಮಾಜಿಕ ಸಾಮರಸ್ಯ ಅಪಾಯದಲ್ಲಿದೆ, ನೂತನ ಅಭಿವೃದ್ಧಿ ಕಾರ್ಯತಂತ್ರದ ಅಗತ್ಯವಿದೆ: ಸೋನಿಯಾ ಗಾಂಧಿ

ತಿರುವನಂತಪುರ,ಮಾ.2: ಕೇರಳದ ಸಾಮಾಜಿಕ ಸಾಮರಸ್ಯ ಮತ್ತು ಸೌಹಾರ್ದತೆ ಅಪಾಯದಲ್ಲಿವೆ ಎಂದು ಮಂಗಳವಾರ ಹೇಳಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು,ಜನರಲ್ಲಿ ಭ್ರಾತ್ವತದ ಬಂಧಗಳನ್ನು ಬಲಗೊಳಿಸಲು ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ನೂತನ ಅಭಿವೃದ್ಧಿ ಕಾರ್ಯತಂತ್ರವೊಂದರ ಅಗತ್ಯವನ್ನು ಪ್ರತಿಪಾದಿಸಿದ್ದಾರೆ.

ಸಾಮಾಜಿಕ ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಹೇಗೆ ಕಾಯ್ದುಕೊಳ್ಳಬೇಕು ಮತ್ತು ಉತ್ತೇಜಿಸಬೇಕು ಎನ್ನುವುದರಲ್ಲಿ ಕೇರಳವು ದೇಶದ ಇತರ ಭಾಗಗಳಿಗೆ ಮತ್ತು ವಿಶ್ವಕ್ಕೆ ಒಂದು ಪಾಠವಾಗಿದೆ. ಇವೀಗ ಅಪಾಯದಲ್ಲಿವೆ ಮತ್ತು ಭವಿಷ್ಯದ ಅಭಿವೃದ್ಧಿ ಕಾರ್ಯತಂತ್ರವು ಕೇರಳದ ವೈವಿಧ್ಯಪೂರ್ಣ ಸಮಾಜದ ಹೆಗ್ಗುರುತಾಗಿರುವ ಭ್ರಾತೃತ್ವದ ಬಂಧಗಳನ್ನು ಬಲಗೊಳಿಸುವುದನ್ನು ತನ್ನ ಮೂಲಗುರಿಗಳಲ್ಲಿ ಒಳಗೊಂಡಿರಬೇಕು ಎಂದು ಇಲ್ಲಿಯ ರಾಜೀವ ಗಾಂಧಿ ಅಭಿವೃದ್ಧಿ ಅಧ್ಯಯನ ಸಂಸ್ಥೆ (ಆರ್ಜಿಐಡಿಎಸ್)ಯು ಆಯೋಜಿಸಿದ್ದ ವರ್ಚುವಲ್ ಶೃಂಗಸಭೆಗೆ ತನ್ನ ಸಂದೇಶದಲ್ಲಿ ಸೋನಿಯಾ ಹೇಳಿದ್ದಾರೆ.
ಕಾಂಗ್ರೆಸ್ ಸಿದ್ಧಾಂತಕ್ಕೆ ಬದ್ಧವಾಗಿರುವ ಆರ್ಥಿಕ ಚಿಂತನ ಚಿಲುಮೆಯಾಗಿರುವ ಆರ್ಜಿಐಡಿಎಸ್ ನ  ಶೃಂಗಸಭೆ ‘ಪ್ರತೀಕ್ಷಾ 2030 ’ಅನ್ನು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಉದ್ಘಾಟಿಸಿದರು.


ಬಹುಚರ್ಚಿತ ಕೇರಳ ಅಭಿವೃದ್ಧಿ ಮಾದರಿಯನ್ನು ತನ್ನ ಸಂದೇಶದಲ್ಲಿ ಪ್ರಸ್ತಾಪಿಸಿರುವ ಸೋನಿಯಾ,ಇಂದು ರಾಜ್ಯವು ಹೊಸ,ಈ ಹಿಂದೆಂದೂ ಕಂಡಿರದಿದ್ದ ಸವಾಲುಗಳನ್ನು ಎದುರಿಸುತ್ತಿದೆ ಮತ್ತು ಕೋವಿಡ್-19 ಸಾಂಕ್ರಾಮಿಕವು ಸ್ಥಿತಿಯನ್ನು ಇನ್ನಷ್ಟು ಗಂಭೀರವಾಗಿಸಿದೆ ಎಂದಿದ್ದಾರೆ. ಕೇರಳದಲ್ಲಿ ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ಭದ್ರತೆಯ ಕುರಿತು ಹೊಸದಾಗಿ ಚಿಂತನೆಗೆ ಅವರು ಕರೆ ನೀಡಿದ್ದಾರೆ.
ಕಳೆದ ಆರು ದಶಕಗಳಿಗೂ ಹೆಚ್ಚಿನ ಅವಧಿಯಲ್ಲಿ ಕೇರಳ ಅಭಿವೃದ್ಧಿ ಮಾದರಿಯು ಸಾರ್ವಜನಿಕ ಆರೋಗ್ಯ,ಶಿಕ್ಷಣ ಮತ್ತು ಸಾಕ್ಷರತೆ ಮತ್ತು ಸಾಮಾಜಿಕ ನ್ಯಾಯಗಳಂತಹ ಕ್ಷೇತ್ರಗಳಲ್ಲಿ ಹಲವಾರು ಗಣನೀಯ ಸಾಧನೆಗಳನ್ನು ಮಾಡಿದೆ ಎಂದೂ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X