Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಗರಮಾಲಾ ಯೋಜನೆಯಡಿ 2035ರ ವೇಳೆಗೆ...

ಸಾಗರಮಾಲಾ ಯೋಜನೆಯಡಿ 2035ರ ವೇಳೆಗೆ ಬಂದರುಗಳಲ್ಲಿ 6 ಲ.ಕೋ.ರೂ.ಹೂಡಿಕೆ:ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ2 March 2021 10:38 PM IST
share
ಸಾಗರಮಾಲಾ ಯೋಜನೆಯಡಿ 2035ರ ವೇಳೆಗೆ ಬಂದರುಗಳಲ್ಲಿ 6 ಲ.ಕೋ.ರೂ.ಹೂಡಿಕೆ:ಪ್ರಧಾನಿ

ಹೊಸದಿಲ್ಲಿ,ಮಾ.3: ಸಾಗರಮಾಲಾ ಯೋಜನೆಯಡಿ ಭಾರತವು 2035ರ ವೇಳೆಗೆ ಬಂದರುಗಳಲ್ಲಿ 82 ಶತಕೋಟಿ ಡಾ.(6 ಲ.ಕೋ.ರೂ.)ಗಳ ಹೂಡಿಕೆಯನ್ನು ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು. ಸಾಗರ ಶೃಂಗಸಭೆ 2021ನ್ನು ಉದ್ದೇಶಿಸಿ ಮಾತನಾಡಿದ ಅವರು,ಬಂದರುಗಳ ಅಭಿವೃದ್ಧಿಗಾಗಿ ಸಾಗರಮಾಲಾ ಯೋಜನೆಯನ್ನು ಸರಕಾರವು 2016ರಲ್ಲಿ ಪ್ರಕಟಿಸಿತ್ತು. ಈ ಕಾರ್ಯಕ್ರಮದಡಿ 2015-2035ರ ಅವಧಿಯಲ್ಲಿ ಆರು ಲ.ಕೋ.ರೂ.ಗಳ ವೆಚ್ಚದಲ್ಲಿ 574 ಯೋಜನೆಗಳನ್ನು ಅನುಷ್ಠಾನಕ್ಕಾಗಿ ಗುರುತಿಸಲಾಗಿದೆ ಎಂದರು.

ಹಾಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಮುಂದಿನ ಪೀಳಿಗೆಯ ಮೂಲಸೌಕರ್ಯಗಳನ್ನು ಸೃಷ್ಟಿಸಲು ತನ್ನ ಸರಕಾರವು ಆದ್ಯತೆ ನೀಡಿದೆ ಎಂದ ಅವರು,ಸರಕಾರದ ಗುರಿಯ ಫಲಿತಾಂಶಗಳು ಗೋಚರವಾಗುತ್ತಿವೆ ಎಂದು ಬೆಟ್ಟು ಮಾಡಿದರು.

‘2014ರಲ್ಲಿ ಸುಮಾರು ವಾರ್ಷಿಕ 870 ಮಿಲಿಯನ್ ಟನ್‌ಗಳಿದ್ದ ಪ್ರಮುಖ ಬಂದರುಗಳ ಸಾಮರ್ಥ್ಯವನ್ನು ಈಗ ವಾರ್ಷಿಕ ಸುಮಾರು 1,550 ಟನ್‌ಗಳಿಗೆ ಹೆಚ್ಚಿಸಲಾಗಿದೆ. ಉತ್ಪಾದಕತೆಯಲ್ಲಿನ ಈ ಏರಿಕೆಯು ನಮ್ಮ ಬಂದರುಗಳಿಗೆ ನೆರವಾಗುವುದು ಮಾತ್ರವಲ್ಲ,ನಮ್ಮ ಉತ್ಪನ್ನಗಳನ್ನು ಹೆಚ್ಚು ಸ್ಪರ್ಧಾತ್ಮಕವನ್ನಾಗಿಸುವ ಮೂಲಕ ಒಟ್ಟಾರೆ ಆರ್ಥಿಕತೆಯನ್ನೂ ಹೆಚ್ಚಿಸುತ್ತದೆ ’ಎಂದರು.

‘ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸುವ ಜೊತೆಗೆ ಸಂಪರ್ಕ ವ್ಯವಸ್ಥೆಯನ್ನು ಹೆಚ್ಚಿಸಲೂ ಸರಕಾರವು ಶ್ರಮಿಸುತ್ತಿದೆ. ನಾವು ನಮ್ಮ ಬಂದರುಗಳನ್ನು ಕರಾವಳಿ ಆರ್ಥಿಕ ವಲಯಗಳು,ಬಂದರು ಆಧಾರಿತ ಸ್ಮಾರ್ಟ್ ಸಿಟಿಗಳು ಮತ್ತು ಕೈಗಾರಿಕಾ ಪ್ರದೇಶಗಳೊಂದಿಗೆ ಸಂಯೋಜಿಸುತ್ತಿದ್ದೇವೆ. ಇದು ಬಂದರುಗಳ ಸಮೀಪ ಕೈಗಾರಿಕಾ ಹೂಡಿಕೆಗಳನ್ನು ಬೆಂಬಲಿಸಲಿದೆ ಮತ್ತು ಜಾಗತಿಕ ತಯಾರಿಕೆ ಚಟುವಟಿಕೆಗಳನ್ನು ಉತ್ತೇಜಿಸಲಿದೆ ’ಎಂದು ಮೋದಿ ನುಡಿದರು.

ಮಹಾರಾಷ್ಟ್ರದ ವಾಧ್ವಾನ್,ಒಡಿಶಾದ ಪಾರಾದೀಪ್ ಮತ್ತು ಗುಜರಾತಿನ ದೀನದಯಾಳ್‌ನಲ್ಲಿ ಬೃಹತ್ ಬಂದರುಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಸರಕಾರವು 2030ರ ವೇಳೆಗೆ 23 ಜಲಮಾರ್ಗಗಳ ಕಾರ್ಯಾಚರಣೆಯ ಗುರಿಯನ್ನು ಹೊಂದಿದೆ ಎಂದ ಅವರು,ಮೂಲಸೌಕರ್ಯ ಹೆಚ್ಚಳ,ನೌಕಾಮಾರ್ಗ ಅಭಿವೃದ್ಧಿ,ಮಾರ್ಗದರ್ಶನ ನೆರವುಗಳು ಮತ್ತು ನದಿಗಳ ಮಾಹಿತಿ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಇದನ್ನು ಸಾಧಿಸಲಾಗುವುದು. ಪರಿಣಾಮಕಾರಿ ಪ್ರಾದೇಶಿಕ ವ್ಯಾಪಾರ ಮತ್ತು ಸಹಕಾರಗಳನ್ನು ಹೆಚ್ಚಿಸಲು ಬಾಂಗ್ಲಾದೇಶ,ನೇಪಾಳ,ಭೂತಾನ ಮತ್ತು ಮ್ಯಾನ್ಮಾರ್‌ನೊಂದಿಗೆ ಪ್ರಾದೇಶಿಕ ಸಂಪರ್ಕಕ್ಕಾಗಿ ಪೂರ್ವ ಜಲಮಾರ್ಗ ಸಂಪರ್ಕ ಜಾಲವನ್ನು ಬಲಪಡಿಸಲಾಗುವುದು ಎಂದರು.

ಭಾರತದಲ್ಲಿ 189 ದೀಪಸ್ತಂಭಗಳಿದ್ದು,ಇವುಗಳ ಪೈಕಿ 78 ದೀಪಸ್ತಂಭಗಳ ಸಮೀಪದ ಜಮೀನಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಲು ಸರಕಾರವು ಯೋಜಿಸುತ್ತದೆ. ಕೊಚ್ಚಿ,ಮುಂಬೈ,ಗುಜರಾತ ಮತ್ತು ಗೋವಾಗಳಂತಹ ಪ್ರಮುಖ ರಾಜ್ಯಗಳು ಮತ್ತು ನಗರಗಳಲ್ಲಿ ನಗರ ಜಲ ಸಾರಿಗೆ ವ್ಯವಸ್ಥೆಯನ್ನು ಆರಂಭಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮೋದಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X