Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೀಘ್ರದಲ್ಲಿ ಮೈಸೂರು ಸೇರಿದಂತೆ ರಾಜ್ಯದ...

ಶೀಘ್ರದಲ್ಲಿ ಮೈಸೂರು ಸೇರಿದಂತೆ ರಾಜ್ಯದ ನಾಲ್ಕು ಕಡೆ ಹೆಲಿ ಟೂರಿಸಂ ಆರಂಭ: ಸಚಿವ ಸಿ.ಪಿ.ಯೋಗೇಶ್ವರ್

ವಾರ್ತಾಭಾರತಿವಾರ್ತಾಭಾರತಿ2 March 2021 11:29 PM IST
share
ಶೀಘ್ರದಲ್ಲಿ ಮೈಸೂರು ಸೇರಿದಂತೆ ರಾಜ್ಯದ ನಾಲ್ಕು ಕಡೆ ಹೆಲಿ ಟೂರಿಸಂ ಆರಂಭ: ಸಚಿವ ಸಿ.ಪಿ.ಯೋಗೇಶ್ವರ್

ಮೈಸೂರು,ಮಾ.2: ಅತೀ ಶೀಘ್ರದಲ್ಲಿ ಮೈಸೂರು ಸೇರಿದಂತೆ ರಾಜ್ಯದ ನಾಲ್ಕು ಕಡೆಗಳಲ್ಲಿ  ಹೆಲಿ ಟೂರಿಸಂ ಆರಂಭ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಮೈಸೂರು ಪ್ರವಾಸಿಗರ ಅನುಕೂಲಕ್ಕಾಗಿ ನೂತನ ಲಂಡನ್ ಮಾದರಿಯ ಡಬ್ಬಲ್ ಡೆಕ್ಕರ್ ಬಸ್‍ಗೆ ಚಾಲನೆ ನೀಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಸೂರಿನ ಘತ ವೈಭವವನ್ನು ಮತ್ತಷ್ಟು ಹೆಚ್ಚಿಸಿ ದೇಶ ವಿದೇಶದಿಂದ ಬರುವ ಪ್ರವಾಸಿಗರ ಅನುಕೂಲಕ್ಕೆ ಇನ್ನೂ ಮೂರು ತಿಂಗಳಲ್ಲಿ ಹೆಲಿಟೂರಿಸಂ ಅನ್ನು ಲಲಿತ್ ಮಹಲ್ ಹೋಟೆಲ್ ಮುಂಭಾಗದಲ್ಲಿರುವ ಪ್ರವಾಸೋಧ್ಯಮ ಇಲಾಖೆಗೆ ಸೇರಿದ ಜಾಗದಲ್ಲಿ ಹೆಲಿಕ್ಯಾಪ್ಟರ್ ಟರ್ಮಿನಲ್ ಪ್ರಾರಂಭ ಮಾಡಲಾಗುವುದು. ಇಲ್ಲಿಂದ ಅನೇಕ ಸ್ಥಳಗಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಆನಂದಿಸಿ ಮತ್ತೆ ವಾಪಸ್ ಮೈಸೂರಿಗೆ ಕರೆತರಲಾಗುವುದು ಎಂದು ಹೇಳಿದರು.

ಹೆಲಿಕ್ಯಾಪ್ಟರ್ ಟರ್ಮಿನಲ್ ನಲ್ಲಿ ನಾಲ್ಕು ಹೆಲಿಕ್ಯಾಪ್ಟರ್‍ಗಳು ಪ್ರವಾಸಿಗರಿಗೆ ದೊರಕಲಿದ್ದು, ರಾಜ್ಯದ ಮೈಸೂರು, ಮಂಗಳೂರು, ಹಂಪಿ ಮತ್ತು ಜೋಗ್ ಜಲಪಾತ ಸೇರಿದಂತೆ ಮೊದಲಿಗೆ ನಾಲ್ಕು ಕಡೆಗಳಲ್ಲಿ ಹೆಲಿಟೂರಿಸಂ ಆರಂಭ ಮಾಡಲಾಗುವುದು.

ಪ್ರವಾಸಿಗರನ್ನು ಹೆಚ್ಚು ಸೆಳೆಯುವ ಹಿನ್ನಲೆಯಲ್ಲಿ ಮೈಸೂರಿನ ವಸ್ತುಪ್ರದರ್ಶನದ ಆವರಣದಲ್ಲಿ 165 ಕೋಟಿ ವೆಚ್ಚದಲ್ಲಿ  365 ದಿನವೂ ವಸ್ತುಪ್ರದರ್ಶನ ಏರ್ಪಡಿಸಲಾಗುವುದು. ಮೈಸೂರನ್ನು ಕೇಂದ್ರವಾಗಿಟ್ಟುಕೊಂಡು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.

ಮೈಸೂರು ಸೇರಿದಂತೆ ಜಿಲ್ಲೆಯ ಅನೇಕ ಸ್ಥಳಗಳನ್ನು ಪ್ರವಾಸಿ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಚಿಂತಿಸಲಾಗಿದ್ದು, ಈ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ರೂಪ್‍ವೇ ನಿರ್ಮಾಣ ಮಾಡಲಾಗುವುದು. ಇದಕ್ಕೆ ವಿರೋಧ ಮಾಡುತ್ತಿರುವ ಪರಿಸರವಾದಿಗಳನ್ನು ಮನವೊಲಿಸಿ ಹೊಸ ತಂತ್ರಜ್ಞಾನದೊಂದಿಗೆ ಈ ಯೋಜನೆ ಜಾರಿ ಮಾಡಲಾಗುವುದು. ಚಾಮುಂಡಿ ಬೆಟ್ಟದಲ್ಲಿ ರೂಪ್ ವೇ ಆಗಬೇಕು ಎಂದು ಹಲವು ವರ್ಷಗಳಿಂದ ಬೇಡಿಕೆ ಇತ್ತು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X