Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೀಸಲಾತಿ ಕೇಳುವವರಿಗೆ ನಾಚಿಕೆಯಾಗಬೇಕು:...

ಮೀಸಲಾತಿ ಕೇಳುವವರಿಗೆ ನಾಚಿಕೆಯಾಗಬೇಕು: ಸಂಸದ ವಿ. ಶ್ರೀನಿವಾಸ್ ಪ್ರಸಾದ್

"ಹತ್ತು ಕೋಟಿ ಕೊಟ್ಟು ಹೆಲಿಕಾಪ್ಟರ್ ಕೊಂಡುಕೊಳ್ಳುವವರನ್ನು ಎಸ್ಟಿಗೆ ಸೇರಿಸಲು ಸಾಧ್ಯವೆ?"

ವಾರ್ತಾಭಾರತಿವಾರ್ತಾಭಾರತಿ2 March 2021 11:35 PM IST
share
ಮೀಸಲಾತಿ ಕೇಳುವವರಿಗೆ ನಾಚಿಕೆಯಾಗಬೇಕು: ಸಂಸದ ವಿ. ಶ್ರೀನಿವಾಸ್ ಪ್ರಸಾದ್

ಮೈಸೂರು,ಮಾ.1: ಹತ್ತು ಕೋಟಿ ಕೊಟ್ಟು ಹೆಲಿಕ್ಯಾಪ್ಟರ್ ಕೊಂಡುಕೊಳ್ಳುವವರನ್ನು ಎಸ್ಟಿಗೆ ಸೇರಿಸಲು ಸಾಧ್ಯವೆ? ಮೀಸಲಾತಿ ಕೇಳುವ ಇವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಕಿಡಿಕಾರಿದರು.

ನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀಸಲಾತಿ ನೀಡಬೇಕಿರುವುದು ಕೇಂದ್ರ ಸರ್ಕಾರ, ಎಲ್ಲೊ ಕುಳಿತು ಹೋರಾಟ ಮಾಡಿದರೆ ಮೀಸಲಾತಿ ನೀಡಲು ಸಾಧ್ಯವಿಲ್ಲ. ಎಸ್ಸಿ, ಎಸ್ಟಿಗೆ ಈ ಸಮುದಾಯವನ್ನು ಸೇರಿಸಬೇಕೆ ಇಲ್ಲವೆ ಎಂಬುದನ್ನು ಕೇಂದ್ರ ಸರ್ಕಾರ ತೀರ್ಮಾನ ಮಾಡುತ್ತದೆ. ರಾಜ್ಯ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು, ಅದು ಬಿಟ್ಟು  ಬೀದಿಯಲ್ಲಿ ನಿಂತು ಶಕ್ತಿ ಪ್ರದರ್ಶನ ಮಾಡಿದರೆ ಮೀಸಲಾತಿ ಸಾಧ್ಯವಿಲ್ಲ ಎಂದು  ಹರಿಹಾಯ್ದರು.

ಹತ್ತುಕೋಟಿ ಕೊಟ್ಟು ಹೆಲಿಕಾಪ್ಟರ್ ಖರೀದಿಮಾಡುವವರನ್ನು ಎಸ್ಟಿಗೆ ಸೇರಿಸಿ ಎನ್ನಲು ಆಗುತ್ತಾ? ಮೀಸಲಾತಿ ಬಗ್ಗೆ ಸ್ವಲ್ಪ ಚಿಂತನೆ ಮಾಡಬೇಕು. ಈಶ್ವರಪ್ಪ, ವಿಶ್ವನಾಥ್ ಯಾರು, ಇವರನ್ನು ಈ ಜನಾಂಗವನ್ನು  ಎಸ್ಟಿಗೆ ಸೇರಿಸಬೇಕಾ? ಎಂಟಿಬಿ ನಾಗರಾಜ್ ಹತ್ತು ಕೋಟಿ ಕೊಟ್ಟು ಹೆಲಿಕಾಪ್ಟರ್ ಖರೀದಿ ಮಾಡುತ್ತಾರೆ. ಹಲವಾರು ಮಂದಿ ಉದ್ಯಮಿಗಳು, ಬಿಲ್ಡರ್ಸ್‍ಗಳು ಇದ್ದಾರೆ. ಕುರುಬರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ. ಉಪಮುಖ್ಯಮಂತ್ರಿಗಳಾಗುತ್ತಾರೆ. ಇವರನ್ನು ಎಸ್ಟಿಗೆ ಸೇರಿಸಬೇಕಾ? ಮೀಸಲಾತಿ ಕೇಳುವ ಇವರಿಗೆ ನಾಚಿಕೆಯಾಗಬೇಕು ಎಂದು ಲೇವಡಿ ಮಾಡಿದರು.

ಇನ್ನೂ ಕಾಡು ಜನರು ಮೈ ಮೇಲೆ ಬಟ್ಟೆ ಇಲ್ಲದೆ ಕಷ್ಟ ಪಡುತ್ತಿದ್ದಾರೆ. ಇಂತವರು ಮೀಸಲಾತಿ ಕೇಳಲಿ, ರಾಜ್ಯ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿ ಕಾಡುಕುರುಬರನ್ನು ಏಕೆ ಎಸ್ಟಿಗೆ ಸೇರಿಸಬೇಕು ಎಂದು ವರದಿ ನೀಡಲಿ. ಕೇಂದ್ರ ಸರ್ಕಾರ ಪರಿಶಿಲೀಸಿ ಅವರನ್ನು ಎಸ್ಟಿಗೆ ಸೇರಿಸಿಕೊಳ್ಳಲಿ, ಇದು ನಿಮಗೆ ಸೇರುವ ವಿಷಯ ಅಲ್ಲ ಎಂದು ವಾಗ್ದಾಳಿ ನಡೆಸಿದರು.

ಕೆಲವರು 2ಎಗೆ ಸೇರಿಸಿ ಎಂದು ಕೇಳುತ್ತಿದ್ದಾರೆ.  ಅವರನ್ನು ಸೇರಿಸಲು ಸಾಧ್ಯವೆ, ಇನ್ನು ಕೆಲವರು ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೇಳುತ್ತಾರೆ ಅವರೆಲ್ಲರಿಗೂ ಮೀಸಲಾತಿ ನೀಡಲು ಆಗುತ್ತಾ? ಹಾಗಾಗಿ ರಾಜ್ಯ ಸರ್ಕಾರ ಸ್ಪಷ್ಟ ನಿಲವನ್ನು ವ್ಯಕ್ತಪಡಿಸಬೇಕು ಎಂದು ಒತ್ತಾಯಿಸಿದರು.

ಮೀಸಲಾತಿಗಾಗಿ ಹೋರಾಟ ಮಾಡುವವರಿಗೆ ರಾಜ್ಯದ ಮುಖ್ಯಮಂತ್ರಿಗಳು ಒಂದೇ ಹೇಳಿಕೆಯಲ್ಲಿ ಮುಗಿಸಬೇಕಿತ್ತು. ಇದನ್ನು ಇಷ್ಟು ದೊಡ್ಡಮಟಕ್ಕೆ ಹೋಗಲು ಬಿಡಬಾರದಿತ್ತು. ರಾಜ್ಯ ಸರ್ಕಾರ ತನ್ನ ಇತಿಮಿತಿಯೊಳಗೆ ಏನು ಮಾಡುತ್ತದೆ ಎಂಬುದನ್ನು ಹೇಳಿ ಈ ವಿಚಾರವನ್ನೇ ಮುಕ್ತಾಯಗೊಳಿಸಬೇಕಿತ್ತು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X