Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಸ್ಟ್‌ಗಾರ್ಡ್ ಅಕಾಡಮಿಗೆ ಮೀಸಲಿರಿಸಿದ...

ಕೋಸ್ಟ್‌ಗಾರ್ಡ್ ಅಕಾಡಮಿಗೆ ಮೀಸಲಿರಿಸಿದ ಜಾಗ ಅತಿಕ್ರಮಣ: ಆರೋಪ

ಕೆಂಜಾರುವಿನಲ್ಲಿ ಗೋಶಾಲೆ ತೆರವುಗೊಳಿಸಿದ ಜಿಲ್ಲಾಡಳಿತ

ವಾರ್ತಾಭಾರತಿವಾರ್ತಾಭಾರತಿ4 March 2021 10:40 PM IST
share
ಕೋಸ್ಟ್‌ಗಾರ್ಡ್ ಅಕಾಡಮಿಗೆ ಮೀಸಲಿರಿಸಿದ ಜಾಗ ಅತಿಕ್ರಮಣ: ಆರೋಪ

ಮಂಗಳೂರು, ಮಾ.4: ಮರವೂರು ಗ್ರಾಪಂ ವ್ಯಾಪ್ತಿಯ ಬಜ್ಪೆ ಕೆಂಜಾರು ಎಂಬಲ್ಲಿ ಸರಕಾರಿ ಜಮೀನು ಅತಿಕ್ರಮಿಸಿ ನಿರ್ಮಿಸಿದ್ದೆನ್ನಲಾದ ಗೋಶಾಲೆಯನ್ನು ಗುರುವಾರ ದ.ಕ. ಜಿಲ್ಲಾಡಳಿತವು ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿದೆ.

ಕೋಸ್ಟ್‌ಗಾರ್ಡ್ ಅಕಾಡಮಿಗೆ ಮೀಸಲಿರಿಸಿದ ಜಾಗದಲ್ಲಿ ಪ್ರಕಾಶ್ ಶೆಟ್ಟಿ ಎಂಬವರು ಕಾನೂನು ಬಾಹಿರವಾಗಿ ಗೋಶಾಲೆ ನಿರ್ಮಿಸಿದ್ದರೆನ್ನ ಲಾಗಿದೆ. ಅಲ್ಲದೆ ಸ್ಥಳೀಯ ಇತರ ಕೆಲವು ಮಂದಿ ಇಲ್ಲಿ ಅಕ್ರಮ ನಿರ್ಮಾಣ ಕಾಮಗಾರಿ ನಡೆಸಿದ್ದರು. ಕೆಂಜಾರುವಿನಲ್ಲಿ ಕೆಐಎಡಿಬಿ ವಶದಲ್ಲಿರುವ 160 ಎಕ್ರೆ ಜಮೀನನ್ನು ಕೋಸ್ಟ್‌ಗಾರ್ಡ್ ಅಕಾಡಮಿ ಸ್ಥಾಪಿಸಲು ಕೇಂದ್ರ ಸರಕಾರ ನಿರ್ಧರಿಸಿತ್ತು. ಇದರ ಸಮೀಪ ಜಮೀನು ಹೊಂದಿರುವ ಪ್ರಕಾಶ್ ಶೆಟ್ಟಿ ಎಂಬವರು ಅಕಾಡಮಿಗೆ ಮೀಸಲಿಟ್ಟ ಈ ಜಮೀನಿನ ಪೈಕಿ ಸುಮಾರು 20 ಸೆಂಟ್ಸ್ ಸ್ಥಳದಲ್ಲಿ ಕಳೆದ 8 ವರ್ಷದಿಂದ ‘ಕಪಿಲಾ’ ಎಂಬ ಗೋಶಾಲೆ ನಿರ್ಮಿಸಿ 300ಕ್ಕೂ ಅಧಿಕ ಗೋವುಗಳನ್ನು ಸಾಕುತ್ತಿದ್ದರು.

ಕೇಂದ್ರ ಸರಕಾರ ಮಂಜೂರುಗೊಳಿಸಿದ ಕೋಸ್ಟ್ ಗಾರ್ಡ್ ತರಬೇತಿ ಅಕಾಡಮಿಗೆ ಮೀಸಲಿರಿಸಿದ ಈ ಜಮೀನಿನ ಅತಿಕ್ರಮಣವನ್ನು ತೆರವುಗೊಳಿಸುವಂತೆ ಕೆಐಎಡಿಬಿ ಅಧಿಕಾರಿಗಳು ಸೂಚಿಸಿದ್ದರು. ಆದರೆ ಪ್ರಕಾಶ್ ಶೆಟ್ಟಿ ಎಸಿ ಹಾಗೂ ಡಿಸಿ ಕೋರ್ಟ್‌ಗೆ ಇದರ ವಿರುದ್ಧ ಮನವಿ ಸಲ್ಲಿಸಿದ್ದರು. ಆದರೆ ಅಲ್ಲಿಯೂ ಅತಿಕ್ರಮಿತ ಜಾಗವನ್ನು ತೆರವುಗೊಳಿಸುವಂತೆ ಆದೇಶಿಸಲಾಗಿತ್ತು. ಈ ಮಧ್ಯೆ ಸಂಸದರಿಗೂ ಮನವಿ ಸಲ್ಲಿಸಿದ್ದ ಪ್ರಕಾಶ್ ಶೆಟ್ಟಿ ಗೋಶಾಲೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿದ್ದರು.

ಅಕ್ರಮವಾಗಿ ತೆರೆದುಕೊಂಡಿರುವ ಈ ಗೋಶಾಲೆ ಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ಸೋಮವಾರ ಬಜ್ಪೆ ನಾಗರಿಕ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಮರವೂರು ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಆವಾಗ ಸ್ಥಳಕ್ಕಾಗಮಿಸಿದ್ದ ಶಾಸಕ ಉಮಾನಾಥ ಕೋಟ್ಯಾನ್ ಗೋಶಾಲೆ ತೆರವಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ವೇದಿಕೆಯ ಮುಖಂಡರಿಗೆ ಭರವಸೆ ನೀಡಿದ್ದರು.

ಈ ಮಧ್ಯೆ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಗುರುವಾರ ಕೆಂಜಾರಿಗೆ ಆಗಮಿಸಿದ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್, ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ ಬಿನಾಯ್ ಮತ್ತಿತರ ಅಧಿಕಾರಿಗಳ ತಂಡ ಅಕ್ರಮ ಗೋಶಾಲೆ ತೆರವಿಗೆ ಮುಂದಾಯಿತು. ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದ ಪೊಲೀಸ್ ತಂಡವು ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿತ್ತು. ಬೆಳಗ್ಗೆ ಆರಂಭಗೊಂಡ ತೆರವು ಕಾರ್ಯಾಚರಣೆಯು ಸಂಜೆಯವರೆಗೂ ಮುಂದುವರಿದಿತ್ತು.
ಪೊಲೀಸ್ ಬಂದೋಬಸ್ತ್‌ನಲ್ಲಿ ಜೆಸಿಬಿ ಮೂಲಕ ನಡೆದ ಕಾರ್ಯಾಚರಣೆಯಲ್ಲಿ ಹಸುಗಳ ಶೆಡ್ ಮತ್ತಿತರ ಕಟ್ಟಡಗಳು, ತಡೆಗೋಡೆ ಸಹಿತ ಇಂಟರ್‌ಲಾಕ್ ಫ್ಯಾಕ್ಟರಿಯನ್ನು ನೆಲಸಮ ಮಾಡಲಾಗಿದೆ.

ಸರಕಾರದ ಪರವಾಗಿ ಹಲವು ಬಾರಿ ಗೋಶಾಲೆ ಮಾಲಕರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ಸ್ಪಂದಿಸದ ಕಾರಣ ಪೊಲೀಸ್ ಬಂದೋಬಸ್ತ್ ನಲ್ಲಿ ಅತಿಕ್ರಮಣ ತೆರವುಗೊಳಿಸಲಾಗಿದೆ.

- ಮದನ್ ಮೋಹನ್, ಸಹಾಯಕ ಆಯುಕ್ತ, ಮಂಗಳೂರು ಉಪವಿಭಾಗ

ಗೋಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳನ್ನು ನಡೆಸಲಾಗಿದೆ. ಆದರೆ ಮಾತುಕತೆ ಇತ್ಯರ್ಥಕ್ಕೆ ಮುನ್ನವೇ ಜಿಲ್ಲಾಡಳಿತ ಗೋಶಾಲೆ ಯನ್ನು ತೆರವುಗೊಳಿಸಿದೆ.

- ಪ್ರಕಾಶ್ ಶೆಟ್ಟಿ, ಕಪಿಲಾ ಗೋಶಾಲೆಯ ಮಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X