Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ...

ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ‘ಎಂಜಿಎಂ ಪುಸ್ತಕೋತ್ಸವ’

ವಾರ್ತಾಭಾರತಿವಾರ್ತಾಭಾರತಿ5 March 2021 8:45 PM IST
share
ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ‘ಎಂಜಿಎಂ ಪುಸ್ತಕೋತ್ಸವ’

ಉಡುಪಿ, ಮಾ.5: ಉಡುಪಿ ಎಂಜಿಎಂ ಕಾಲೇಜಿನ ಲೈಬರ್ರಿ ಮತ್ತು ಇನ್‌ಫರ್ಮೇಶನ್ ಸೆಂಟರ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸ ಲಾದ ಎರಡು ದಿನಗಳ ಪುಸ್ತಕ ಪ್ರದರ್ಶನ ಮತ್ತು ಮಾರಾಟ ‘ಎಂಜಿಎಂ ಪುಸ್ತಕೋತ್ಸವ’ಕ್ಕೆ ಇಂದು ಚಾಲನೆ ನೀಡಲಾಯಿತು.

ನವಕರ್ನಾಟಕ, ಮಣಿಪಾಲ್ ಯೂನಿವರ್ಸಲ್ ಪ್ರೆಸ್, ಭಾರತ್ ಬುಕ್ ಮಾರ್ಕ್, ಬಿಬ್ಲಿಯೋಸ್, ಸ್ಕೂಲ್ ಬುಕ್ ಕಂಪೆನಿ ಸೇರಿದಂತೆ ಒಟ್ಟು 15 ಪುಸ್ತಕ ಮಳಿಗೆಗಳು ಪುಸ್ತಕೋತ್ಸವದಲ್ಲಿ ಇದ್ದವು. ಇದರೊಂದಿಗೆ ಕಾಲೇಜಿನ ಪ್ರಾಂಶು ಪಾಲರು, ಉಪನ್ಯಾಸಕರು ಬರೆದ ಪುಸ್ತಕಗಳ ಮಳಿಗೆ ಹಾಗೂ ಸ್ಥಳೀಯ ಲೇಖಕರ ಪುಸ್ತಕಗಳ ಮಳಿಗೆಯೂ ಇಲ್ಲಿ ಕಂಡುಬಂದವು. ಇಲ್ಲಿ ಶೇ.10ರಿಂದ 70ರವರೆಗೂ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮಾಡಲಾಗುತ್ತಿದೆ.

ಪುಸ್ತಕೋತ್ಸವದಲ್ಲಿ ವಿದ್ಯಾರ್ಥಿಗಳು ಮುಗಿ ಬಿದ್ದು ಪುಸ್ತಕ ಖರೀದಿಸಿದರು. ಮನಸ್ಸಿಗೆ ಸಂಬಂಧಿಸಿದ, ಮಾನಸಿಕ ಖಾಯಿಲೆ ಕುರಿತು ಹಾಗೂ ಪ್ರೇರಣಾ ಕಥೆಗಳು, ಜೀವನ ಚರಿತ್ರೆಯ ಪುಸ್ತಕಗಳಿಗೆ ವಿದ್ಯಾರ್ಥಿಗಳು ಹೆಚ್ಚಿನ ಒಲವು ತೋರಿಸಿದರು. ಇಂತಹ ಪುಸ್ತಕಗಳೇ ಹೆಚ್ಚಿನ ಸಂಖ್ಯೆ ಯಲ್ಲಿ ಮಾರಾಟವಾದವು ಎಂದು ಪುಸ್ತಕ ಮಳಿಗೆಯವರು ತಿಳಿಸಿದರು.

ಪುಸ್ತಕೋತ್ಸವ ಉದ್ಘಾಟನೆ: ಪುಸ್ತಕೋತ್ಸವವನ್ನು ಉದ್ಘಾಟಿಸಿದ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಪುಸ್ತಕದ ಓದುವ ಹವ್ಯಾಸವು ನಮ್ಮ ವ್ಯಕ್ತಿತ್ವವನ್ನು ಇನ್ನಷ್ಟು ಅಭಿವೃದ್ಧಿಗೊಳಿಸುತ್ತದೆ. ಮಕ್ಕಳಿಗೆ ಬಾಲ್ಯ ದಲ್ಲಿಯೇ ಪುಸ್ತಕ ಕೊಂಡುಕೊಳ್ಳುವ ಆಸಕ್ತಿಯನ್ನು ಬೆಳೆಸಬೇಕಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ದೇವದಾಸ್ ನಾಯಕ್ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ, ವಿರ್ದಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ್ ಕಾರ್ಲ, ಅರುಣ್ ಕುಮಾರ್ ಉಪಸ್ಥಿತರಿದ್ದರು. ಮುಖ್ಯ ಗ್ರಂಥಪಾಲಕ ಕಿಶೋರ್ ಎಚ್.ವಿ. ಸ್ವಾಗತಿ ಸಿದರು. ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಪುಸ್ತಕ ಮಾರಾಟಕ್ಕಾಗಿ ಆಕರ್ಷಕ ತಂತ್ರ

ಪುಸ್ತಕ ಮಾರಾಟಕ್ಕಾಗಿ ವಿವಿಧ ಆಕರ್ಷಕ ತಂತ್ರಗಳನ್ನು ವಿದ್ಯಾರ್ಥಿಗಳೇ ರೂಪಿಸಿರುವುದು ಈ ಪುಸ್ತಕೋತ್ಸವದಲ್ಲಿ ಕಂಡುಬಂತು. ನಿಮಗೆ ನೀವೇ ಪುಸ್ತಕ ಕೊಡುಗೆ ನೀಡುವ ‘ಎ ಗಿಫ್ಟ್ ಟು ಯುವರ್ ‌ಸೆಲ್ಫ್’ ಕೌಂಟರ್ ಗಮನ ಸೆಳೆಯಿತು. ಇಲ್ಲಿ ಗಿಫ್ಟ್ ಪ್ಯಾಕ್ ಮಾಡಿರುವ ಪುಸ್ತಕದ ಮೇಲೆ ಪುಸ್ತಕದೊಳಗಿನ ವಿಚಾರ ಮತ್ತು ಲೇಖಕರ ಹೆಸರನ್ನು ಬರೆಯಲಾಗಿತ್ತು. ಇದರಲ್ಲಿ ಯಾವುದಾದರೊಂದನ್ನು ಪಡೆದುಕೊಳ್ಳುವ ಮೂಲಕ ಆ ಪುಸ್ತಕ ವನ್ನು ತಮಗೆ ತಾವೇ ಗಿಫ್ಟ್ ಆಗಿ ನೀಡುವ ಪರಿಕಲ್ಪನೆ ಇದಾಗಿದೆ.

ಅದೇ ರೀತಿ ಕಾಲೇಜಿನ ಉಪನ್ಯಾಸಕ ಮಂಜುನಾಥ್ ಕಾಮತ್ ಬರೆದ ಮೂರು ಪುಸ್ತಕಗಳ ಕೊಂಬೋ ಖರೀದಿಸಿದರೆ, ಅದರೊಂದಿಗೆ ಮಾಸ್ಕ್ ಮತ್ತು ಬಟ್ಟೆ ಚೀಲವನ್ನು ಉಚಿತವಾಗಿ ನೀಡಲಾಗುತ್ತದೆ

ಕನ್ನಡ ಶಾಲೆಯ ಗ್ರಂಥಾಲಯಕ್ಕಾಗಿ ಪುಸ್ತಕ ದಾನ

ಇಲ್ಲೊಂದು ವಿಶೇಷ ಕೌಂಟರ್ ರಚಿಸಲಾಗಿದೆ. ಅದರಲ್ಲಿ ಎರಡು ಬಾಕ್ಸ್ ಗಳನ್ನು ಇಡಲಾಗಿದೆ. ಅದಕ್ಕೆ ಯಾರು ಬೇಕಾದರು ಹೊಸ ಅಥವಾ ಹಳೆಯ ಪುಸ್ತಕಗಳನ್ನು ಹಾಕಬಹುದು. ಆ ಪುಸ್ತಕ ಮುಂದೆ ಸ್ಥಳೀಯ ಕನ್ನಡ ಶಾಲೆಯ ಗ್ರಂಥಾಲಯವನ್ನು ಸೇರಲಿದೆ. ಇದು ಈ ಪುಸ್ತಕೋತ್ಸವದ ವಿಶೇಷತೆಯಲ್ಲಿ ಒಂದು.

ಪುಸ್ತಕೋತ್ಸವದಲ್ಲಿ ಖರೀದಿಸಿರುವ ಅಥವಾ ತಮ್ಮಲ್ಲಿರುವ ಹಳೆ ಪುಸ್ತಕವನ್ನು ದಾನವಾಗಿ ನೀಡಿದರೆ ಅದನ್ನು ಸ್ಥಳೀಯ ಕನ್ನಡ ಮಾಧ್ಯಮ ಶಾಲೆಯ ಗ್ರಂಥಾಲ ಯಕ್ಕೆ ನೀಡುವ ಯೋಜನೆ ಆಯೋಜಕರದ್ದಾಗಿದೆ. ಈಗಾಗಲೇ ನೂರಾರು ಪುಸ್ತಕಗಳು ಈ ಬಾಕ್ಸ್‌ಗಳನ್ನು ತುಂಬಿ ಕೊಂಡಿರುವುದು ಕಂಡುಬಂತು. ಅದೇ ರೀತಿ ಪುಸ್ತಕ ಖರೀದಿಸಿದವರು ತಮ್ಮ ಪುಸ್ತಕದೊಂದಿಗೆ ಸೆಲ್ಫಿ ತೆಗೆಯುವಂತಹ ಕೌಂಟರ್ ಕೂಡ ಇಲ್ಲಿ ಸ್ಥಾಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X