Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಟಿಟಿ ನಿಯಮಕ್ಕೆ ಹಲ್ಲುಗಳಿಲ್ಲ ಎಂದ...

ಒಟಿಟಿ ನಿಯಮಕ್ಕೆ ಹಲ್ಲುಗಳಿಲ್ಲ ಎಂದ ಸುಪ್ರೀಂ ಕೋರ್ಟ್

ಅಮೆಝಾನ್ ‌ನ ಭಾರತ ಮುಖ್ಯಸ್ಥೆಗೆ ಬಂಧನದಿಂದ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ5 March 2021 9:29 PM IST
share
ಒಟಿಟಿ ನಿಯಮಕ್ಕೆ ಹಲ್ಲುಗಳಿಲ್ಲ ಎಂದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಮಾ. 3: ಸಾಮಾಜಿಕ ಮಾಧ್ಯಮ ಹಾಗೂ ಒಟಿಟಿ ವೇದಿಕೆಯ ಕುರಿತ ಸರಕಾರದ ನಿಯಮಾವಳಿಗೆ ಹಲ್ಲುಗಳಿಲ್ಲ ಹಾಗೂ ಅದಕ್ಕೆ ವಿಚಾರಣೆ ನಡೆಸುವ ಅಧಿಕಾರ ಕೂಡ ಇಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ವೆಬ್ ಸರಣಿ ‘ತಾಂಡವ್’ ವಿರುದ್ಧ ನಡೆಯುತ್ತಿರುವ ತನಿಖೆಯಲ್ಲಿ ಅಮೆಝಾನ್ ಪ್ರೈಮ್ ವೀಡಿಯೊದ ಭಾರತದ ಮುಖ್ಯಸ್ಥೆ ಅಪರ್ಣಾ ಪುರೋಹಿತ್ ಅವರಿಗೆ ಬಂಧನದಿಂದ ರಕ್ಷಣೆ ನೀಡಿ ಆದೇಶಿಸಿದ ಸಂದರ್ಭ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

‘‘ಸಾಮಾಜಿಕ ಮಾಧ್ಯಮದ ವೇದಿಕೆಯನ್ನು ನಿಯಂತ್ರಿಸಲು ಯಾವುದೇ ಕಾರ್ಯವಿಧಾನ ಇಲ್ಲ. ಕಾನೂನು ಇಲ್ಲದೆ ನೀವು (ಸರಕಾರ) ಅವುಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ’’ ಎಂದು ನಿರೀಕ್ಷಣಾ ಜಾಮೀನು ನಿರಾಕರಿಸಿ ಅಲಹಾಬಾದ್ ಉಚ್ಚ ನ್ಯಾಯಾಲಯ ಫೆಬ್ರವರಿ 25ರಂದು ನೀಡಿದ್ದ ಆದೇಶದ ವಿರುದ್ಧ ಅಪರ್ಣಾ ಪುರೋಹಿತ್ ಅವರು ಸಲ್ಲಿಸಿದ ಮನವಿಯ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಹೇಳಿತು. ‘ತಾಂಡವ್’ ಸರಣಿಗಳ ಕುರಿತಂತೆ ಅಪರ್ಣಾ ಪುರೋಹಿತ್ ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ಕುರಿತು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಆರ್.ಎಸ್. ರೆಡ್ಡಿ ಅವರನ್ನೊಳಗೊಂಡ ನ್ಯಾಯ ಪೀಠ ಉತ್ತರಪ್ರದೇಶ ಸರಕಾರಕ್ಕೆ ನೋಟಿಸು ಜಾರಿ ಮಾಡಿತು. ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುವ ವೀಡಿಯೊ ವಿಷಯಗಳನ್ನು ಪರಿಶೀಲನೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶಿಸಿತ್ತು. ಅವುಗಳಲ್ಲಿ ಕೆಲವು ಬಾರಿ ಅಶ್ಲೀಲ ವಿಷಯಗಳನ್ನು ಕೂಡ ಪ್ರದರ್ಶಿಸಲಾಗುತ್ತದೆ. ಆದುದರಿಂದ ಇಂತಹ ಕಾರ್ಯಕ್ರಮಗಳನ್ನು ಪರಿಶೀಲಿಸಲು ಕಾರ್ಯವಿಧಾನದ ಅಗತ್ಯತೆ ಇದೆ ಅದು ಹೇಳಿತ್ತು. ಸಾಮಾಜಿಕ ಮಾಧ್ಯಮದ ವೇದಿಕೆಗಳನ್ನು ನಿಯಂತ್ರಿಸಲು ಸರಕಾರದ ಇತ್ತೀಚಿಗೆ ಮಾರ್ಗಸೂಚಿಗಳನ್ನು ತನ್ನ ಮುಂದೆ ಸಲ್ಲಿಸುವಂತೆ ನ್ಯಾಯಾಲಯ ಕೇಂದ್ರ ಸರಕಾರಕ್ಕೆ ಸೂಚಿಸಿತ್ತು.

ಇಂದು ಸುಪ್ರೀಂ ಕೋರ್ಟ್, ಸಾಮಾಜಿಕ ಮಾಧ್ಯಮ ಕುರಿತ ಕೇಂದ್ರ ಸರಕಾರದ ನಿಯಮಗಳು ಕೇವಲ ಮಾರ್ಗಸೂಚಿಗಳಾಗಿ ಮಾತ್ರ ಉಳಿದಿವೆ. ಡಿಜಿಟಲ್ ವೇದಿಕೆ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಇದರಲ್ಲಿ ಅವಕಾಶ ಇಲ್ಲ ಎಂದು ಪ್ರತಿಪಾದಿಸಿದೆ. ನಾವು ನಿಮ್ಮ ನಿಯಮಾವಳಿಗಳನ್ನು ಪರಿಶೀಲಿಸಿದೆವು. ಈ ನಿಯಮಾವಳಿಗೆ ಹಲ್ಲೇ ಇಲ್ಲ. ಇದನ್ನು ವಿಚಾರಣೆ ನಡೆಸುವ ಅಧಿಕಾರ ಇಲ್ಲ. ಹಿಂಸಾಚಾರವನ್ನು ನಿಯಂತ್ರಿಸುವ ಕಾರ್ಯ ವಿಧಾನ ಇಲ್ಲ ಎಂದು ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರು ಕೇಂದ್ರ ಸರಕಾರ ಸಲ್ಲಿಸಿದ ನಿಯಮವಾಳಿಗಳನ್ನು ಪರಿಶೀಲಿಸಿ ಹೇಳಿದರು. ಕಠಿಣ ನಿಯಮಾವಳಿಗಳೊಂದಿಗೆ ಹೊಸ ಪ್ರಸ್ತಾವವನ್ನು ಸಲ್ಲಿಸುವಂತೆ ನ್ಯಾಯಮೂರ್ತಿ ಭೂಷಣ್ ಅವರು ಕೇಂದ್ರ ಸರಕಾರಕ್ಕೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘‘ಸೂಕ್ತ ಕ್ರಮಗಳ ಬಗ್ಗೆ ಸರಕಾರ ಪರಿಶೀಲನೆ ನಡೆಸಲಿದೆ. ಡಿಜಿಟಲ್ ವೇದಿಕೆಯ ಮೇಲಿನ ಯಾವುದೇ ನಿಯಂತ್ರಣವನ್ನು ನ್ಯಾಯಾಲಯದ ಮುಂದಿರಿಸಲಾಗುವುದು’’ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X