Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಬೆಲ್ಸ್ ಪಾಲ್ಸಿ:ಕಾರಣಗಳು ಮತ್ತು...

ಬೆಲ್ಸ್ ಪಾಲ್ಸಿ:ಕಾರಣಗಳು ಮತ್ತು ಲಕ್ಷಣಗಳು, ಏನಿದು ಬೆಲ್ಸ್ ಪಾಲ್ಸಿ?

ವಾರ್ತಾಭಾರತಿವಾರ್ತಾಭಾರತಿ6 March 2021 10:01 AM IST
share
ಬೆಲ್ಸ್ ಪಾಲ್ಸಿ:ಕಾರಣಗಳು ಮತ್ತು ಲಕ್ಷಣಗಳು, ಏನಿದು ಬೆಲ್ಸ್ ಪಾಲ್ಸಿ?

ಇದು ಮುಖದ ಒಂದು ಪಾರ್ಶ್ವದ ಸ್ನಾಯುಗಳ ಬಲಹೀನತೆ ಅಥವಾ ಪಾರ್ಶ್ವವಾಯು ಆಗಿದೆ. ಇದನ್ನು ಮುಖದ ಲಕ್ವಾ ಎಂದೂ ಕರೆಯಲಾಗುತ್ತದೆ. ಈ ರೋಗವುಂಟಾದಾಗ ಮುಖವು ಒಂದು ಪಾರ್ಶ್ವದಲ್ಲಿ ಜೋಲು ಬೀಳುತ್ತದೆ ಮತ್ತು ಪೀಡಿತ ಭಾಗದಲ್ಲಿಯ ಕಣ್ಣನ್ನು ಮುಚ್ಚಲು ಸಾಧ್ಯವಾಗುವುದಿಲ್ಲ. ಮುಖದ ಆ ಪಾರ್ಶ್ವದ ಸ್ನಾಯುಗಳನ್ನು ನಿಯಂತ್ರಿಸುವ ನರದಲ್ಲಿಯ ಸಮಸ್ಯೆ ಈ ಸ್ಥಿತಿಯನ್ನುಂಟು ಮಾಡುತ್ತದೆ.

ಕಾರಣಗಳು

ಬೆಲ್ಸ್ ಪಾಲ್ಸಿಗೆ ನಿಖರವಾದ ಕಾರಣಗಳು ಇನ್ನೂ ಗೊತ್ತಾಗಿಲ್ಲ,ಆದರೆ ಮುಖದ ನರದ ವೈರಾಣು ಸೋಂಕಿನಿಂದ ಈ ರೋಗವುಂಟಾಗುತ್ತದೆ ಎಂದು ನಂಬಲಾಗಿದೆ. ಈ ನರವು ಮುಖದಲ್ಲಿ ಮೂಳೆಯ ಕಾಲುವೆಯ ಮೂಲಕ ಹಾದು ಹೋಗುತ್ತದೆ. ಸೋಂಕು ನರವು ಬಾತುಕೊಳ್ಳುವಂತೆ ಮತ್ತು ಅದು ಪಕ್ಕದ ಮೂಳೆಗೆ ಒತ್ತಿಕೊಳ್ಳುವಂತೆ ಮಾಡುತ್ತದೆ. ಇದು ಮುಖ ನರಗಳಿಗೆ ಸಂಕೇತಗಳ ಪ್ರಸರಣದಲ್ಲಿ ವೈಫಲ್ಯಕ್ಕೆ ಕಾರಣವಾಗುತ್ತದೆ ಮತ್ತು ಇದು ಬೆಲ್ಸ್ ಪಾಲ್ಸಿ ಅಥವಾ ಮುಖದ ಪಾರ್ಶ್ವವಾಯುವನ್ನುಂಟು ಮಾಡುತ್ತದೆ ಎಂದು ಭಾವಿಸಲಾಗಿದೆ.

ಲಕ್ಷಣಗಳು

 ಸಾಮಾನ್ಯವಾಗಿ ಯಾವುದಾದರೂ ಒಂದು ಕಿವಿಯ ಹಿಂಭಾಗದಲ್ಲಿ ನೋವಿನಿಂದ ಇದು ಆರಂಭಗೊಳ್ಳುತ್ತದೆ ಮತ್ತು ನಂತರದಲ್ಲಿ ಅದೇ ಭಾಗದಲ್ಲಿಯ ಮುಖದ ನರಗಳು ಬಲಹೀನತೆಗೆ ಅಥವಾ ಲಕ್ವಾಕ್ಕೆ ಗುರಿಯಾಗುತ್ತವೆ. ಪಾರ್ಶ್ವವಾಯು ಸಾಮಾನ್ಯವಾಗಿ ಮುಖದ ಕೆಳಭಾಗದಲ್ಲಿ ಆರಂಭಗೊಳ್ಳುತ್ತದೆ. ರುಚಿಯು ಕುಂಠಿತಗೊಳ್ಳುವುದು,ಶ್ರವಣದಲ್ಲಿ ಬದಲಾವಣೆ,ಕಣ್ಣುಗಳಲ್ಲಿ ನೀರು ಮತ್ತು ಶಿಳ್ಳೆ ಹೊಡೆಯಲು ಅಥವಾ ಬಾಯಿಯಲ್ಲಿ ಆಹಾರವನ್ನು ಹಿಡಿದಿಡಲು ಸಾಧ್ಯವಾಗದಿರುವುದು ಇತ್ಯಾದಿಗಳು ಇದರ ಲಕ್ಷಣಗಳಾಗಿವೆ. ಇದರ ಸ್ವರೂಪ ಸೌಮ್ಯದಿಂದ ಪೂರ್ಣ ಪಾರ್ಶ್ವವಾಯುವಿನವರೆಗೆ ಇರುತ್ತದೆ. ರೋಗದ ತೀವ್ರತೆಯು ಲಕ್ಷಣಗಳು ವೃದ್ಧಿಗೊಳ್ಳುವ ವೇಗಕ್ಕೆ ಅನುಗುಣವಾಗಿರುತ್ತದೆ. ಲಕ್ಷಣಗಳು ಕೆಲವೇ ಗಂಟೆಗಳಲ್ಲಿ ತೀವ್ರಗೊಳ್ಳಬಹುದು ಅಥವಾ ಒಂದೆರಡು ದಿನಗಳನ್ನು ತೆಗೆದುಕೊಳ್ಳಬಹುದು.

ರೋಗನಿರ್ಧಾರ

ವೈದ್ಯರು ರೋಗಿಯ ಲಕ್ಷಣಗಳನ್ನು ಪರೀಕ್ಷಿಸಿ ತಪಾಸಣೆಗಳನ್ನು ನಡೆಸುತ್ತಾರೆ. ಬೆಲ್ಸ್ ಪಾಲ್ಸಿಯಲ್ಲದೆ ಇತರ ಯಾವುದೇ ಕಾರಣಗಳಿಂದ ಮುಖದಲ್ಲಿಯ ನರಗಳು ಬಲಹೀನಗೊಂಡಿವೆಯೇ ಎನ್ನುವುದನ್ನು ಪರೀಕ್ಷೆಗಳ ಮೂಲಕ ತಿಳಿದುಕೊಳ್ಳುತ್ತಾರೆ. ಒಳಗಿವಿಯಲ್ಲಿ ಟ್ಯೂಮರ್ ಬೆಳೆದಿದೆಯೇ ಎನ್ನುವುದನ್ನು ತಿಳಿದುಕೊಳ್ಳಲೂ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕಿವಿ ಅಥವಾ ಮಿದುಳಿನಲ್ಲಿ ಗಡ್ಡೆ ಬೆಳೆದಿದೆಯೇ ಎನ್ನುವುದನ್ನು ತಿಳಿದುಕೊಳ್ಳಲು ತಲೆಯ ಸಿಟಿ ಸ್ಕಾನ್ ಅನ್ನೂ ಕೈಗೊಳ್ಳಲಾಗುತ್ತದೆ. ಹಾನಿಯ ವ್ಯಾಪ್ತಿಯನ್ನು ತಿಳಿದುಕೊಳ್ಳಲು ನರದ ಎಲೆಕ್ಟ್ರಿಕಲ್ ಟೆಸ್ಟಿಂಗ್ ಅಗತ್ಯವಾಗಬಹುದು.

ಚಿಕಿತ್ಸೆ

 ಆರಂಭದ ಹಂತದಲ್ಲಿಯೇ ಬಾಯಿಯ ಮೂಲಕ ಸ್ಟಿರಾಯ್ಡಿಗಳನ್ನು ನೀಡುವುದರಿಂದ ತ್ವರಿತ ಚೇತರಿಕೆಯುಂಟಾಗುತ್ತದೆ. ಹೆಚ್ಚಿನ ಜನರು ಯಾವುದೇ ಚಿಕಿತ್ಸೆಯಿಲ್ಲದೆ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಾರೆ. ಪೀಡಿತ ಭಾಗದಲ್ಲಿಯ ಕಣ್ಣಿನಲ್ಲಿ ಧೂಳು ಸೇರದಂತೆ ಮತ್ತು ಅದು ಒಣಗದಂತೆ ನೋಡಿಕೊಳ್ಳುವುದು ಮುಖ್ಯವಾಗುತ್ತದೆ. ಚೇತರಿಕೆ ತುಂಬ ನಿಧಾನವಾಗಿರುವ ಕೆಲವು ಪ್ರಕರಣಗಳಲ್ಲಿ ಮುಖವು ಹೆಚ್ಚು ಅಂದಗೆಡದಂತೆ ವಿವಿಧ ಪ್ಲಾಸ್ಟಿಕ್ ಸರ್ಜರಿಗಳನ್ನು ನಡೆಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X