Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇವರನ್ನು ಬೀದಿಪಾಲು ಮಾಡಿದ ಬಿಜೆಪಿ:...

ದೇವರನ್ನು ಬೀದಿಪಾಲು ಮಾಡಿದ ಬಿಜೆಪಿ: ಕವಿತಾ ಸನಿಲ್ ಆರೋಪ

ಕೆಂಜಾರು ಗೋಶಾಲೆ ತೆರವು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ6 March 2021 12:32 PM IST
share
ದೇವರನ್ನು ಬೀದಿಪಾಲು ಮಾಡಿದ ಬಿಜೆಪಿ: ಕವಿತಾ ಸನಿಲ್ ಆರೋಪ

ಮಂಗಳೂರು, ಮಾ.6: ಮುಕ್ಕೋಟಿ ದೇವರುಗಳು ವಾಸ ಮಾಡುವ ದನಕರುಗಳನ್ನು ಕೆಂಜಾರಿನಲ್ಲಿನ ಗೋಶಾಲೆಯ ಅತಿಕ್ರಮಣ ತೆರವು ಮಾಡುವ ನೆಪದಲ್ಲಿ ಬಿಜೆಪಿಯವರು ಬೀದಿಪಾಲು ಮಾಡಿದ್ದಾರೆ ಎಂದು ಮಾಜಿ ಮೇಯರ್ ಕವಿತಾ ಸನಿಲ್ ಆರೋಪಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಜಾರಿನಲ್ಲಿ ಗೋಶಾಲೆಯಲ್ಲಿದ್ದ ದನಕರುಗಳು ಇಂದು ಬೀದಿಪಾಲಾಗಿದ್ದರೂ ಚುನಾವಣೆ ಸಂದರ್ಭದಲ್ಲಿ ಗೋವುಗಳ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿಯ ಸಂಸದ, ಶಾಸಕರು ಮೌನವಾಗಿದ್ದು, ಆ ಮೂಕ ಪ್ರಾಣಿಗಳ ರೋದನ ಕೇಳುವವರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇವಸ್ಥಾನದ ಜೀರ್ಣೋದ್ಧಾರ ಮಾಡುವಾಗ ಅಥವಾ, ಹೆದ್ದಾರಿ ಸಮೀಪದ ದೇವಸ್ಥಾನ, ಗುಡಿಗಳನ್ನು ತೆರವುಗೊಳಿಸುವ ಸಂದರ್ಭದಲ್ಲೂ ದೇವರನ್ನು ಬಾಲಾಲಯದಲ್ಲಿ ವ್ಯವಸ್ಥಿತವಾಗಿ ಇರಿಸಿ ಕ್ರಮ ವಹಿಸಲಾಗುತ್ತದೆ. ಆದರೆ ದೇವರೇ ನೆಲೆಸಿರುವ ದನಕರುಗಳನ್ನು ಮಾತ್ರ ಗೋವುಗಳ ಬಗ್ಗೆ ಮಾತನಾಡುವವರ ಆಡಳಿತವಿದ್ದರೂ ಬೀದಿಪಾಲು ಮಾಡಿ ಅವುಗಳಿಗೆ ಆಶ್ರಯವಿಲ್ಲದಂತೆ ಮಾಡಲಾಗಿದೆ. ಯಾರದ್ದೋ ಮೇಲಿನ ಕ್ರೋಧವನ್ನು ಮೂಕ ಪ್ರಾಣಿಗಳ ಮೇಲೆ ತೀರಿಸಲಾಗಿದೆ. ಇದರ ಶಾಪ ಬಿಜೆಪಿಗರಿಗೆ ತಟ್ಟದಿರದು ಎಂದು ಕವಿತಾ ಸನಿಲ್ ಹೇಳಿದರು.

ಕೋಸ್ಟ್‌ಗಾರ್ಡ್ ತರಬೇತಿ ಕೇಂದ್ರ ಸ್ಥಾಪನೆಗೆ ಯಾವುದೇ ಆಕ್ಷೇಪವಿಲ್ಲ. ಸರಕಾರಿ ಜಾಗ ಅತಿಕ್ರಮಣವಾಗಿದ್ದರೆ ತಪ್ಪಿತಸ್ಥರ ಮೇಲೆ ಕ್ರಮ ವಹಿಸಬೇಕಿತ್ತು. ದನಕರುಗಳನ್ನು ಯಾವುದಾದರೂ ಗೋಶಾಲೆಗಳಿಗೆ ಸ್ಥಳಾಂತರಿಸಿ, ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕಟ್ಟಡ ತೆರವುಗೊಳಿಸಬಹುದಿತ್ತು. ಅದು ಬಿಟ್ಟು ಮೂಕ ಪ್ರಾಣಿಗಳನ್ನು ಬೀದಿಗೆ ಹಾಕುವವರು ನಕಲಿ ಗೋಪ್ರೇಮಿಗಳಲ್ಲದೆ ಮತ್ತಿನ್ನೇನು ಎಂದು ಪ್ರಶ್ನಿಸಿದ ಕವಿತಾ ಸನಿಲ್, ಕಾಂಗ್ರೆಸ್ ಆಡಳಿತದಲ್ಲಿದ್ದು, ಈ ರೀತಿ ಮಾಡಿದ್ದರೆ ಈಗಾಗಲೇ ಜಿಲ್ಲೆ ಹೊತ್ತಿ ಉರಿಯುವಂತೆ ಈ ನಕಲಿ ಗೋಪ್ರೇಮಿಗಳು ಮಾಡುತ್ತಿದ್ದರು ಎಂದು ತೀಕ್ಷ್ಣವಾಗಿ ನುಡಿದರು.

ಹಿರಿಯರಾದ ಪ್ರಭಾಕರ ಭಟ್‌ರವರ ಮೇಲೆ ನನಗೆ ಗೌರವವಿದೆ. ಆದರೆ ಕೆಂಜಾರಿನ ಈ ಗೋವುಗಳ ವಿಚಾರದಲ್ಲಿ ಅವರು, ಅಲ್ಲಿ ಗೋಶಾಲೆಯೇ ಇರಲಿಲ್ಲ. ಅದು ನಾಲ್ಕು ದನಗಳ ಹಟ್ಟಿ ಎಂದು ಹೇಳಿರುವ ಆಡಿಯೋ ಕೇಳಿ ನೋವಾಯಿತು. ಹಿಂದುತ್ವ, ಗೋವುಗಳ ಬಗ್ಗೆ ಮಾತನಾಡುವವರೇ ಇಂತಹ ಮಾತುಗಳನ್ನು ಹೇಳುತ್ತಾರೆಂದರೆ ಏನರ್ಥ ಎಂದವರು ಪ್ರಶ್ನಿಸಿದರು.

ಆ ಗೋಶಾಲೆಗೆ ಸಚಿವರು, ಶಾಸಕರು ಭೇಟಿ ನೀಡಿ ಗೋಪೂಜೆಯನ್ನೂ ನೆರವೇರಿಸಿದ್ದಾರೆ ಎಂದು ಹಳೆ ಫೋಟೋ ಪ್ರತಿಯನ್ನು ತೋರಿಸಿ ಮಾತನಾಡಿದ ಕವಿತಾ ಸನಿಲ್, ಈಗ ಕಳೆದೆರಡು ದಿನಗಳಿಂದ ಬೀದಿಯಲ್ಲಿ ಅಡ್ಡಾಡುತ್ತಿರುವ ಗೋವುಗಳನ್ನು ನೋಡಲು ಯಾರೊಬ್ಬರೂ ಯಾಕೆ ಭೇಟಿಯಾಗಿಲ್ಲ. ಅವುಗಳಿಗೆ ಪರ್ಯಾಯ ವ್ಯವಸ್ಥೆ ಯಾಕೆ ಕಲ್ಪಿಸಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ಸಿಗರು ಯಾವತ್ತಿಗೂ ಗೋ ಭಕ್ತರು. ನಾವು ನಮ್ಮ ಮನೆಯಲ್ಲಿಯೂ ಗೋವುಗಳನ್ನು ಪ್ರೀತಿಯಿಂದ ಸಾಕಿ ಸಲಹುವ ಜತೆಗೆ ಪೂಜೆಯನ್ನೂ ಮಾಡುತ್ತೇವೆ. ಪ್ರಕರಣದಲ್ಲೂ ಕಾಂಗ್ರೆಸ್ ಆಡಳಿತವಿದ್ದಿದ್ದರೆ ಗೋವುಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಅತಿಕ್ರಮಣ ತೆರವು ಮಾಡುತ್ತಿತ್ತು ಎಂದು ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸದಾಶಿವ ಉಳ್ಳಾಲ್, ಸಂತೋಷ್ ಶೆಟ್ಟಿ, ಪ್ರಕಾಶ್ ಸಾಲ್ಯಾನ್, ದೀಪಕ್ ಪೂಜಾರಿ, ನೀರಜ್ ಪಾಲ್, ಪುರುಷೋತ್ತಮ ಚಿತ್ರಾಪುರ, ರಜನೀಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X