Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷಿ ಕಾನೂನುಗಳ ವಿರುದ್ಧ ನಿರ್ಣಯಕ್ಕೆ...

ಕೃಷಿ ಕಾನೂನುಗಳ ವಿರುದ್ಧ ನಿರ್ಣಯಕ್ಕೆ ಪಂಜಾಬ್ ವಿಧಾನಸಭೆಯ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ6 March 2021 8:28 PM IST
share
ಕೃಷಿ ಕಾನೂನುಗಳ ವಿರುದ್ಧ ನಿರ್ಣಯಕ್ಕೆ ಪಂಜಾಬ್ ವಿಧಾನಸಭೆಯ ಅಂಗೀಕಾರ

ಚಂಡಿಗಡ,ಮಾ.6: ರೈತರು ಮತ್ತು ಪಂಜಾಬಿನ ಹಿತಾಸಕ್ತಿಯಲ್ಲಿ ಕೃಷಿ ಕಾನೂನುಗಳನ್ನು ಬೇಷರತ್ ಹಿಂದೆಗೆದುಕೊಳ್ಳಬೇಕು ಮತ್ತು ಸರಕಾರದಿಂದ ಎಂಎಸ್‌ಪಿ ಆಧಾರಿತ ಆಹಾರಧಾನ್ಯಗಳ ಖರೀದಿಯ ಹಾಲಿ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿ ನಿರ್ಣಯವೊಂದನ್ನು ಪಂಜಾಬ್ ವಿಧಾನಸಭೆಯು ಅಂಗೀಕರಿಸಿದೆ.

ಸದನದಲ್ಲಿ ನಿರ್ಣಯದ ಮೇಲೆ ಮಾತನಾಡಿದ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕೃಷಿ ಕಾನೂನುಗಳ ಹಿಂದಿನ ಸರಕಾರದ ನಿಜವಾದ ಉದ್ದೇಶವನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ದೇಶದ ಮುಂದೆ 10 ಪ್ರಶ್ನೆಗಳನ್ನಿರಿಸಿದರು. ಯಾವುದೇ ಸಂದರ್ಭದಲ್ಲಿಯೂ ರೈತರಿಗೆ ಮತ್ತು ರಾಜ್ಯಕ್ಕೆ ಈ ಕಾನೂನುಗಳು ಸ್ವೀಕಾರಾರ್ಹವಲ್ಲ ಎಂದರು.

ಸಂಪೂರ್ಣವಾಗಿ ನಿಯಂತ್ರಣಮುಕ್ತ ಖಾಸಗಿ ಮಂಡಿಗಳಿಂದ ಯಾರಿಗೆ ಲಾಭವಾಗಲಿದೆ? ಕಾರ್ಪೊರೇಟ್ ಸಂಸ್ಥೆಗಳೊಂದಿಗೆ ಮಾಡಿಕೊಂಡ ಒಪ್ಪಂದಕ್ಕ ಸಂಬಂಧಿಸಿದ ಯಾವುದೇ ವಿವಾದದಲ್ಲಿ ರೈತರು ಸಿವಿಲ್ ನ್ಯಾಯಾಲಯಗಳ ಮೆಟ್ಟಿಲೇರುವುದನ್ನು ನಿಷೇಧಿಸುವುದರಿಂದ ಯಾರು ಲಾಭ ಪಡೆಯಲಿದ್ದಾರೆ ಎಂದು ಸಿಂಗ್ ಪ್ರಶ್ನಿಸಿದರು.

ರಾಜಿ ಪರಿಹಾರಕ್ಕಾಗಿ ಅನುಕೂಲಕರ ವಾತಾವರಣವನ್ನು ನಿರ್ಮಿಸಲು ಪ್ರತಿಭಟನಾನಿರತ ರೈತರ ವಿರುದ್ಧ ಎಲ್ಲ ಪ್ರಕರಣಗಳು ಮತ್ತು ನೋಟಿಸುಗಳನ್ನು ಹಿಂದೆಗೆದುಕೊಳ್ಳುವಂತೆ ಅವರು ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಂಡರು.

ಆಪ್ ಮತ್ತು ಶಿರೋಮಣಿ ಅಕಾಲಿ ದಳ ಸದಸ್ಯರ ಗೈರುಹಾಜರಿಯಲ್ಲಿ ಅಂಗೀಕಾರಗೊಂಡ ನಿರ್ಣಯವು,ಪರಿಸ್ಥಿತಿಯನ್ನು ಹದಗೆಡಿಸಿರುವ ಮತ್ತು ರೈತರಲ್ಲಿ ಅಶಾಂತಿ ಹಾಗೂ ಆಕ್ರೋಶವನ್ನು ಹೆಚ್ಚಿಸಿರುವ ಕೇಂದ್ರ ಸರಕಾರದ ವಿಚಾರಶೂನ್ಯ ಮತ್ತು ನಿರ್ಲಿಪ್ತ ನಿಲುವಿನ ವಿರುದ್ಧ ಸದಸ್ಯರ ಕಳವಳವನ್ನು ವ್ಯಕ್ತಪಡಿಸಿದೆ.

ರಾಜ್ಯಪಾಲರ ಭಾಷಣಕ್ಕೆ ಉತ್ತರಿಸುತ್ತಿದ್ದ ಸಿಂಗ್,ಪ್ರತಿಭಟನಾನಿರತ ರೈತರನ್ನು ದೇಶವಿರೋಧಿಗಳೆಂದು ಬಣ್ಣಿಸುತ್ತಿರುವುದಕ್ಕಾಗಿ ಬಿಜೆಪಿ ನಾಯಕತ್ವವನ್ನು ತರಾಟೆಗೆತ್ತಿಕೊಂಡರು.

ಪಂಜಾಬಿನ ರೈತರು ಮತ್ತು ಕೃಷಿಕಾರ್ಮಿಕರು ಕಳೆದ ವರ್ಷ ಭಾರತದ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ರಕ್ಷಿಸಲು ಗಲ್ವಾನ್ ಕಣಿವೆಯಲ್ಲಿ ಹುತಾತ್ಮರಾದ ಯೋಧರಷ್ಟೇ ದೇಶಭಕ್ತರು ಮತ್ತು ರಾಷ್ಟ್ರವಾದಿಗಳಾಗಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X