Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ...

ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಡಿಸಿಎಂ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ6 March 2021 10:50 PM IST
share
ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು, ಮಾ.6: ಇಡೀ ದೇಶದಲ್ಲಿ ಬೆಂಗಳೂರು ಮಹಾನಗರ ಅತ್ಯುತ್ತಮ ವಾಸಯೋಗ್ಯ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆನ್ನಲ್ಲೇ, ನಗರವನ್ನು ಮತ್ತಷ್ಟು ಅಭಿವೃದ್ಧಿಯತ್ತ ಮುನ್ನಡೆಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಎರಡು ಮಹತ್ವದ ಪರಿಕಲ್ಪನೆಗಳನ್ನು ಪ್ರಸ್ತಾವ ಮಾಡಿದ್ದಾರೆ.

ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಅಗ್ರಸ್ಥಾನ ಪಡೆದಿರುವ ಬೆಂಗಳೂರು ನಗರದಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಆಮೂಲಾಗ್ರ ಸುಧಾರಣೆಗಳನ್ನು ತಂದು ಪ್ರತಿಯೊಬ್ಬರು ಸುಲಭ-ಸರಳವಾಗಿ ತೆರಿಗೆ ಪಾವತಿ ಮಾಡುವಂತೆ ಮಾಡುವುದು ಹಾಗೂ ನಗರದ ಪ್ರತಿ ರಸ್ತೆಯ ಇತಿಹಾಸವನ್ನು ಕರಾರುವಾಕ್ಕಾಗಿ ದಾಖಲೆ ಮಾಡುವ ಕೆಲಸ ತುರ್ತಾಗಿ ಆಗಬೇಕಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ಸುದ್ದಿಗಾರರ ಜತೆ ಹಂಚಿಕೊಂಡ ಉಪ ಮುಖ್ಯಮಂತ್ರಿ, ಬೆಂಗಳೂರು ಅತ್ಯಂತ ಯೋಜಿತವಾಗಿ ಮತ್ತೂ ಅಗಾಧವಾಗಿ ಬೆಳೆಯುತ್ತಿದೆ. ಇನ್ನೊಂದು ದಶಕದೊಳಗೆ ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಜಗತ್ತಿನಲ್ಲೇ ಅಗ್ರ ನಗರವಾಗಿ ಹೊರ ಹೊಮ್ಮುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದರು.

ತೆರಿಗೆ ಸುಧಾರಣೆ ಹಾಗೂ ಸರಳೀಕರಣ: ಸದ್ಯಕ್ಕೆ ಚಾಲ್ತಿಯಲ್ಲಿರುವ ನಗರದ ತೆರಿಗೆ ಪದ್ಧತಿ ಸರಳವಾಗಿಲ್ಲ. ಪ್ರತಿಯೊಬ್ಬ ಪ್ರಜೆಯೂ ಭರಿಸುವ ರೀತಿಯಲ್ಲಿ ಇಲ್ಲ. ಹೀಗಾಗಿ ಇಡೀ ತೆರಿಗೆ ವ್ಯವಸ್ಥೆಯನ್ನು ಜಾಗತಿಕ ಮಾನದಂಡಕ್ಕೆ ಅನುಗುಣವಾಗಿ ಸುಧಾರಣೆ ಮಾಡಬೇಕು. ತನ್ನ ಆಸ್ತಿಯ ಮೌಲ್ಯಕ್ಕೆ ತಕ್ಕಂತೆ ಪ್ರತಿ ಆಸ್ತಿ ಮಾಲಕನೂ ನಿರಾಯಾಸವಾಗಿ ಪಾವತಿ ಮಾಡುವಂತಿರಬೇಕು. ಹಾಗೆ ಮಾಡಿದರೆ, ಗಣನೀಯವಾಗಿ ತೆರಿಗೆ ಸಂಗ್ರಹ ಆಗುತ್ತದೆ. ಅಭಿವೃದ್ಧಿಗೆ ಸಂಪನ್ಮೂಲಗಳ ಕೊರತೆಯೂ ಆಗುವುದಿಲ್ಲ. ಮಿಗಿಲಾಗಿ ಆರ್ಥಿಕವಾಗಿ ಬೆಂಗಳೂರು ನಗರದ ಆಡಳಿತ ಸ್ವಾವಲಂಭನೆ ಸಾಧಿಸಲಿದೆ ಎಂದು ಅವರು ಪ್ರತಿಪಾದಿಸಿದರು.

ರಸ್ತೆಗಳ ಕರಾರುವಾಕ್ಕಾದ ಇತಿಹಾಸ: ಬೆಂಗಳೂರು ನಗರದಲ್ಲಿ ಲೆಕ್ಕವಿಲ್ಲದಷ್ಟು ರಸ್ತೆಗಳಿವೆ. ಆದರೆ, ದಾಖಲೆಗಳಲ್ಲಿ ಅವುಗಳ ವಿವರಗಳು ಲಭ್ಯವಿಲ್ಲ. ಈ ಕಾರಣಕ್ಕೆ ಬಿಬಿಎಂಪಿಗೆ ರಸ್ತೆಗಳನ್ನು ನಿರ್ವಹಿಸುವುದು ಕಷ್ಟವಾಗಿದೆ. ಹೀಗಾಗಿ ನಗರ ಎಲ್ಲ ಗಾತ್ರದ ರಸ್ತೆಗಳ ಇತಿಹಾಸವನ್ನು ಯೋಜಿತವಾಗಿ ಸಿದ್ಧಪಡಿಸಿ ‘ರೋಡ್ ಹಿಸ್ಟರಿ’ ಸಂಗ್ರಹ ಮಾಡುವುದು ಅತ್ಯಂತ ಜರೂರು ಎಂದು ಅಶ್ವತ್ಥ ನಾರಾಯಣ ಹೇಳಿದರು.

‘ರೋಡ್ ಹಿಸ್ಟರಿ’ ಸಿದ್ಧಪಡಿಸುವುದರಿಂದ ಆ ರಸ್ತೆ ನಿರ್ಮಾಣದ ಎಲ್ಲ ದಾಖಲೆಗಳು ವ್ಯವಸ್ಥಿತವಾಗಿ ಒಂದೆಡೆ ಸಂಗ್ರಹವಾಗುತ್ತವೆ. ರಸ್ತೆಯ ಅಗಲ-ಉದ್ದ, ಮ್ಯಾನ್‍ಹೋಲ್‍ಗಳ ವಿವರ, ಒಳಚರಂಡಿ, ಭೂಗರ್ಭದಲ್ಲಿನ ಯಾವುದೇ ರೀತಿಯ ಸಂಪರ್ಕ ಜಾಲ, ಮಳೆಗಾಲ ಬಂದಾಗ ಆ ರಸ್ತೆಯ ಸ್ಥಿತಿಗತಿ ಇತ್ಯಾದಿ ವಿವರಗಳನ್ನು ದಾಖಲು ಮಾಡಬೇಕು. ಹಾಗೆ ಮಾಡುವುದರಿಂದ ಇಂಜಿನಿಯರುಗಳಿಗೆ ರಸ್ತೆಗಳನ್ನು ನಿರ್ವಹಿಸುವುದು ಸುಲಭವಾಗುತ್ತದೆ ಹಾಗೂ ಒಮ್ಮೆಲೆ ಅಭಿವೃದ್ಧಿಪಡಿಸಿದರೆ ಅದು ಶಾಶ್ವತವಾಗಿರುವಂತೆ ಆಗಿಬಿಡುತ್ತದೆ ಎಂದು ಅವರು ತಿಳಿಸಿದರು.

ಬೆಂಗಳೂರಿಗೆ ಉತ್ತಮ ನಗರ ಎಂಬ ಮೆಚ್ಚುಗೆ ಸಿಕ್ಕಿದೆ. ಅದರಿಂದ ಹಿಗ್ಗುವ ಬದಲು ನಮ್ಮ ನಗರವನ್ನು ಉತ್ತಮಪಡಿಸಲು ಇನ್ನಷ್ಟು ಶ್ರಮ ವಹಿಸಬೇಕು. ಸರಕಾರ, ಪಾಲಿಕೆ, ಅಧಿಕಾರಿಗಳ ಜತೆಗೆ ನಗರಾಭಿವೃದ್ಧಿಯಲ್ಲಿ ಸಾರ್ವಜನಿಕರ ಮುಕ್ತ ಸಹಭಾಗಿತ್ವವೂ ಬಹಳ ಮುಖ್ಯವಾಗಿರುತ್ತದೆ. ಹೊಣೆಗಾರಿಕೆ ಮತ್ತು ಉತ್ತರದಾಯಿತ್ವವನ್ನು ಜನರು ರೂಢಿಸಿಕೊಂಡರೆ ‘ಬೆಂಗಳೂರು ಬೆಸ್ಟ್’ ಎನ್ನುವ ಹೆಗ್ಗಳಿಕೆಯನ್ನು ಯಾರಿಂದಲೂ ಅಳಿಸಲಾಗದು ಎಂದು ಅವರು ಹೇಳಿದರು.

ಅಷ್ಟೇ ಅಲ್ಲ, ನಗರಕ್ಕೆ ಸಂಬಂಧಿಸಿ ಸ್ಥಳೀಯ ಆಡಳಿತ, ಸರಕಾರ, ಕೈಗಾರಿಕೋದ್ಯಮಿಗಳು, ತಜ್ಞರು, ಜನರು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನಗರದ ಅಭಿವೃದ್ಧಿಯ ಬಗ್ಗೆ ತುಡಿತವಿರುವುದು ಮಾತ್ರವಲ್ಲದೆ, ರಚನಾತ್ಮಕವಾಗಿ ಭಾಗಿಯಾಗಬೇಕು. ಈ ನಿಟ್ಟಿನಲ್ಲಿ ಸರಕಾರವೂ ಕೆಲಸ ಮಾಡುತ್ತಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಬೆಂಗಳೂರು ಅಸಾಧಾರಣ ನಗರ. ಇಲ್ಲಿ ಎಲ್ಲವೂ ವ್ಯವಸ್ಥಿತವಾಗಿರಬೇಕು. ಜಗತ್ತಿನ ಹಾಟ್ ಫೇವರೀಟ್ ಹೂಡಿಕೆಯ ತಾಣವಿದು. ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಅಮೆರಿಕದ ಸಿಲಿಕಾನ್ ವ್ಯಾಲಿಯನ್ನು ಮೀರಿಸುವಂತೆ ನಗರ ಬೆಳೆಯುತ್ತಿದೆ. ಸಂಶೋಧನೆ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ವೈದ್ಯಕೀಯ, ವೈಮಾನಿಕ, ರಕ್ಷಣೆ, ಎಲೆಕ್ಟ್ರಾನಿಕ್ಸ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ದೇಶದ ಮುಂಚೂಣಿ ನಗರವಾಗಿ ಬೆಂಗಳೂರು ಹೊರಹೊಮ್ಮಿದೆ. ಹೀಗಾಗಿ ನಮ್ಮ ಬೆಂಗಳೂರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಕೆಲಸ ಆಗಬೇಕು ಎಂದು ಅವರು ಹೇಳಿದರು.

ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಕಟಿಸಿರುವ ‘ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕ’ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದಿದೆ. ಈ ಸ್ಥಾನಕ್ಕೆ ಬರಲು ಬೆಂಗಳೂರು, ಹೊಸದಿಲ್ಲಿ, ಮುಂಬಯಿ, ಚೆನ್ನೈ, ಕೊಲ್ಕತಾ, ಹೈದರಾಬಾದ್ ಸೇರಿದಂತೆ ದೇಶದ 111 ನಗರಗಳಲ್ಲಿ ಬೆಂಗಳೂರು ಬೆಸ್ಟ್ ಎಂದು ಹೇಳಿದ್ದರು ಎಂದು ಅಶ್ವತ್ಥ ನಾರಾಯಣ ಉಲ್ಲೇಖಿಸಿದರು.

ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದಿರುವುದು ನಮ್ಮೆಲ್ಲರ ಜವಾಬ್ದಾರಿ ಹೆಚ್ಚುವಂತೆ ಮಾಡಿದೆ. ಇನ್ನಷ್ಟು ವೈಜ್ಞಾನಿಕವಾಗಿ ಬೆಂಗಳೂರು ನಗರವನ್ನು ರೂಪಿಸಬೇಕು. ಮೂಲಸೌಕರ್ಯ, ನಿರ್ವಹಣೆ, ಪರಿಸರ ರಕ್ಷಣೆ, ಮಳೆ ನೀರು ಕೊಯ್ಲು, ಸಾರಿಗೆ ಮುಂತಾದ ಅಂಶಗಳ ಬಗ್ಗೆ ಹೆಚ್ಚು ಒತ್ತುಕೊಟ್ಟು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ.

- ಡಾ.ಸಿ.ಎನ್.ಅಶ್ವತ್ಥನಾರಾಯಣ, ಡಿಸಿಎಂ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X