Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನಿಖಾ ಸಂಸ್ಥೆಗಳೆಲ್ಲಾ ಕೇಂದ್ರ ಸರಕಾರದ...

ತನಿಖಾ ಸಂಸ್ಥೆಗಳೆಲ್ಲಾ ಕೇಂದ್ರ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ: ಪಿಣರಾಯಿ ವಿಜಯನ್‌ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ7 March 2021 12:37 PM IST
share
ತನಿಖಾ ಸಂಸ್ಥೆಗಳೆಲ್ಲಾ ಕೇಂದ್ರ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ: ಪಿಣರಾಯಿ ವಿಜಯನ್‌ ಆಕ್ರೋಶ

ತಿರುವನಂತಪುರಂ: "ಏಪ್ರಿಲ್ 6 ರಂದು ಮತದಾನ ನಡೆಯಲಿರುವ ರಾಜ್ಯದ ಚುನಾವಣಾ ಪ್ರಚಾರವನ್ನು ಕೇಂದ್ರ ತನಿಖಾ ಸಂಸ್ಥೆಗಳು ವಹಿಸಿಕೊಂಡಿವೆ" ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.

"ನಾನು ಬಿಜೆಪಿ ಮತ್ತು ಕೇಂದ್ರ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುವ ಏಜೆನ್ಸಿಗಳಿಗೆ ಹೇಳಬೇಕಾಗಿರುವುದು ಏನೆಂದರೆ, ನಾವು ನೀವು ವ್ಯವಹರಿಸಲು ಒಗ್ಗಿಕೊಂಡಿರುವ ಜನರಲ್ಲ. ನಾವು ವಿಭಿನ್ನರು. ನೀವು ಏನು ಮಾಡಿದರೂ ಈ ಮಣ್ಣು ನಮ್ಮನ್ನು ದೂಷಿಸುವುದಿಲ್ಲ. ನಮ್ಮ ಜೀವನವು ತೆರೆದ ಪುಸ್ತಕಗಳು, ಮತ್ತು ನೀವು ಅದನ್ನು ಶೀಘ್ರದಲ್ಲೇ ಅರಿತುಕೊಳ್ಳುವಿರಿ" ಎಂದು ಪಿಣರಾಯಿ ವಿಜಯನ್ ಹೇಳಿಕೆ ನೀಡಿದ್ದಾರೆ.

ಚಿನ್ನದ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಮುಖ್ಯಮಂತ್ರಿ, ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಮತ್ತು ಕೆಲವು ಮಂತ್ರಿಗಳ ವಿರುದ್ಧ "ಆಘಾತಕಾರಿ ಹೇಳಿಕೆಗಳನ್ನು ನೀಡಿದ್ದಾರೆ" ಎಂದು ಕಸ್ಟಮ್ಸ್ ಅಧಿಕಾರಿಗಳು ಕೇರಳ ಹೈಕೋರ್ಟ್ ಗೆ ತಿಳಿಸಿದ ಒಂದು ದಿನದ ಬಳಿಕ ಅವರು ಹೇಳಿಕೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ಹತ್ತಿರವಿರುವ ಸಮಯದಲ್ಲಿ ರಾಜ್ಯ ಸರ್ಕಾರವನ್ನು ಮಾನಹಾನಿ ಮಾಡುವುದು ಮತ್ತು ಅವಮಾನಿಸುವುದು ಕಸ್ಟಮ್ಸ್ ಆಯುಕ್ತರ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.

"ಕೇಂದ್ರ ತನಿಖಾ ಸಂಸ್ಥೆಗಳು ಈ ಚುನಾವಣಾ ಪ್ರಚಾರಗಳನ್ನು ಕೈಗೆತ್ತಿಕೊಂಡಿವೆ. ಚುನಾವಣಾ ಘೋಷಣೆಯ ನಂತರ, ಕೇಂದ್ರ ತನಿಖಾ ಏಜೆನ್ಸಿಗಳ ದಾಳಿಯ ತೀವ್ರತೆಯು ಹೆಚ್ಚಾಗಿದೆ. ಕ್ಯಾಬಿನೆಟ್ ಮಂತ್ರಿಗಳು ಮತ್ತು ಸ್ಪೀಕರ್ ರನ್ನು ಅವಮಾನಿಸುವ ಉದ್ದೇಶದಿಂದ ಕಸ್ಟಮ್ಸ್ ಆಯುಕ್ತರು ಚುನಾವಣಾ ಕಣಕ್ಕೆ ಪ್ರವೇಶಿಸಿದ್ದಾರೆ" ಎಂದು ವಿಜಯನ್ ಹೇಳಿದರು.

"ಚುನಾವಣೆಯ ಸಮಯದಲ್ಲಿ, ಏಜೆನ್ಸಿಗಳು ರಾಜಕೀಯ ಹೇಳಿಕೆಗಳನ್ನು ನೀಡುತ್ತಿವೆ. ಅಂತಹ ಏಜೆನ್ಸಿಗಳ ಈ ಕ್ರಮವು ವಿರೋಧ ಪಕ್ಷ ಮತ್ತು ಬಿಜೆಪಿಯ ಅನುಕೂಲಕ್ಕಾಗಿ ಮಾತ್ರವಾಗಿದೆ" ಎಂದು ಮುಖ್ಯಮಂತ್ರಿ ಹೇಳಿದರು. "ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಚುನಾವಣೆಗಳನ್ನು ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ನಡೆಸಬಾರದು ಎಂದು ಬಯಸುತ್ತವೆ" ಎಂದು ಪಿಣರಾಯಿ ವಿಜಯನ್‌ ಹೇಳಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X