Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ :...

ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ : ಜಯಪ್ರಕಾಶ್ ಹೆಗ್ಡೆ

ಗ್ರಾಪಂ ನೂತನ ಜನಪ್ರತಿನಿಧಿಗಳಿಗೆ ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ7 March 2021 5:22 PM IST
share
ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ : ಜಯಪ್ರಕಾಶ್ ಹೆಗ್ಡೆ

ಮಂಗಳೂರು, ಮಾ.7: ಗ್ರಾಮೀಣ ಭಾಗದ ಜನರ ಮಧ್ಯೆ ಬೆರೆತುಕೊಂಡು ಕೆಲಸ ಮಾಡುವ ಜನಪ್ರತಿನಿಧಿಗಳು ತನ್ನ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ದ.ಕ., ಉಡುಪಿ, ಕಾಸರಗೋಡು ಜಿಲ್ಲೆಯ ಗ್ರಾಪಂಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸದಸ್ಯರು, ಉಪಾಧ್ಯಕ್ಷರು, ಅಧ್ಯಕ್ಷರ ಸಹಿತ ಸುಮಾರು 800ಕ್ಕೂ ಅಧಿಕ ಜನಪ್ರತಿನಿಧಿಗಳಿಗೆ ಬಂಟ್ಸ್ ಹಾಸ್ಟೆಲ್ ಆವರಣದಲ್ಲಿ ರವಿವಾರ ನಡೆದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ದಿಕ್ಸೂಚಿ ಭಾಷಣಗೈದರು.

ಕೆಲವು ಗ್ರಾಮಗಳಲ್ಲಿ ‘ಭಯಂಕರ ಪ್ರಾಮಾಣಿಕ’ ಅಧಿಕಾರಿಗಳಿರುತ್ತಾರೆ. ಜನರ ಕೆಲಸ ಮಾಡಿಕೊಡಲು ಕಾನೂನಿನ ಅಡ್ಡಿ, ತೊಡಕುಗಳ ಬಗ್ಗೆ ಹೇಳಿ ಆತಂಕ ವ್ಯಕ್ತಪಡಿಸುತ್ತಾರೆ. ಅಂತಹವರನ್ನು ಪ್ರಶ್ನಿಸಿ ಕಾನೂನಿನ ಇತಿಮಿತಿಯೊಳಗೆ ಕೆಲಸ ಮಾಡಿಕೊಡಲು ಶ್ರಮಿಸಬೇಕು. ಜನಪ್ರತಿನಿಧಿಗಳಾದ ಬಳಿಕ ಸಮಾಜದ ಎಲ್ಲ ಜನರ ಪ್ರತಿನಿಧಿ ಎಂಬ ಪ್ರಜ್ಞೆ ಸದಾ ಇರಬೇಕು. ಹಾಗಾಗಿ ಸಮುದಾಯದ ಪ್ರತಿನಿಧಿಗಳಾಗದೆ ಸಮಾಜದ ಪ್ರತಿನಿಧಿಯಾಗಿ ಸೇವೆ ಸಲ್ಲಿಸಬೇಕು. ಜನಪ್ರತಿನಿಧಿಯಾಗಿರುವುದು ಸಾರ್ಥಕ ಎಂಬ ಭಾವನೆ ತಮ್ಮೆಳಗೆ ಮೂಡುವಂತಹ ಜನಪರ ಕೆಲಸ ಮಾಡಲು ಕಟಿಬದ್ಧರಾಗಬೇಕು ಎಂದು ಜಯಪ್ರಕಾಶ್ ಹೆಗ್ಡೆ ಸಲಹೆ ನೀಡಿದರು.

ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಬಂಟ ಸಮಾಜದ 800 ಪ್ರತಿನಿಧಿಗಳು ಕೇವಲ ಸ್ವಸಮಾಜದ ಮತದಾರರ ಮತದಿಂದ ಗೆಲುವು ಪಡೆದವರಲ್ಲ. ತಮ್ಮ ಗೆಲುವಿಗೆ ಎಲ್ಲಾ ಸಮಾಜದ ಮತದಾರರ ಶ್ರಮವಿದೆ. ಹಾಗಾಗಿ ಅಭಿವೃದ್ಧಿಯಲ್ಲಿ ಜಾತಿ, ಮತ ಬೇಡ. ನಮ್ಮ ಹಿರಿಯರು ಸೌಹಾರ್ದ ಸಮಾಜ ಕಟ್ಟಲು ಪ್ರಯತ್ನಿಸಿದವರು. ಸಮಾಜದಲ್ಲಿ ಶ್ರೀಮಂತರಿದ್ದರೂ ಕೂಡ ಸಾವಿರಾರು ಮಂದಿ ಬಡವರಿದ್ದಾರೆ. ಜನರ ಕೆಲಸ ಮಾಡಿಸಿಕೊಡುವುದರೊಂದಿಗೆ ಸಮಾಜದ ಬಡವರ ಅಭಿವೃದ್ಧಿಗಾಗಿ ಶ್ರಮಿಸಬೇಕಿದೆ. ಗೆದ್ದ ಬಳಿಕ ಸಮಾಜ, ಸಮುದಾಯವನ್ನು ಮರೆತು ಬಿಡುವುದು ಒಳ್ಳೆಯ ಲಕ್ಷಣವಲ್ಲ. ಮೀಸಲಾತಿಗೆ ಸಂಬಂಧಿಸಿದಂತೆ ಸಂಘವು ಬಂಟ ಸಮಾಜಕ್ಕೆ ಸೇರಿದ ಜನಪ್ರತಿನಿಧಿಗಳ ಬಳಿ ತೆರಳಿ ಅಹವಾಲು ಸಲ್ಲಿಸಿದಾಗ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ. ಜನಪ್ರತಿನಿಧಿಗಳ ನಿರ್ಲಕ್ಷದಿಂದ ಬಂಟ ಸಮಾಜದ ಅದೆಷ್ಟೋ ಮಂದಿಗೆ ಅರ್ಹತೆ ಇದ್ದರೂ ಕೂಡ ಸರಕಾರಿ ಉದ್ಯೋಗ ಪಡೆಯಲು ಸಾಧ್ಯವಾಗಲಿಲ್ಲ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ಶೆಟ್ಟಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ರೈ, ಜೊತೆ ಕಾರ್ಯದರ್ಶಿ ಸಂಜೀವ ಶೆಟ್ಟಿ ಸಂಪಿಗೆಡಿ, ಅಭಿನಂದನಾ ಸಮಿತಿಯ ಸಂಚಾಲಕರಾದ ಉಲ್ಲಾಸ್ ಆರ್. ಶೆಟ್ಟಿ, ದಿವಾಕರ ಸಾಮಾನಿ ಉಪಸ್ಥಿತರಿದ್ದರು.

ರಾಮಕೃಷ್ಣ ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪುರುಷೋತ್ತಮ ಭಂಡಾರಿ ಮತ್ತು ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಎ. ಹೇಮನಾಥ ಶೆಟ್ಟಿ ಕಾವು ವಂದಿಸಿದರು. ಅಭಿಷೇಕ್ ಶೆಟ್ಟಿ ಮತ್ತು ಸತೀಶ್ ಶೆಟ್ಟಿ ಕೋಡಿಯಾಲ್ ಬೈಲ್ ಅಭಿನಂದನಾ ಕಾರ್ಯಕ್ರಮ ನಿರ್ವಹಿಸಿದರು. ಮೈಮ್‌ದಾಸ್ ಬಳಗದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಮಾಹಿತಿ-ಸಂವಾದ: ಮೀಸಲಾತಿಯ ಬಗ್ಗೆ ಹೆಚ್ಚಿನ ಜನರಿಗೆ ಮಾಹಿತಿ ಇಲ್ಲ. ಕೆಲವರಿಗೆ ತಮ್ಮ ಸಮುದಾಯ ಹಿಂದುಳಿದ ವರ್ಗಗಳ ಆಯೋಗದ ಪಟ್ಟಿಯಲ್ಲಿದೆ ಎಂಬುದೂ ಗೊತ್ತಿಲ್ಲ. ಇನ್ನು ಕೆಲವರಿಗೆ ಆ ಪಟ್ಟಿಯಲ್ಲಿ ಸೇರುವ ಅರ್ಹತೆ ಇದ್ದರೂ ಕೂಡ ಪಟ್ಟಿಯಲ್ಲಿ ಸೇರಿಲ್ಲ ಎಂಬುದರ ಬಗ್ಗೆಯೂ ಮಾಹಿತಿ ಇಲ್ಲ. ಸರಕಾರಿ ಉದ್ಯೋಗ ಪಡೆಯಲು ಮೀಸಲಾತಿ ಬೇಕೇಬೇಕು. ಸಾಮಾಜಿಕ ಆರ್ಥಿಕ ಸ್ಥಿತಿಗತಿ ಮಾತ್ರವಲ್ಲ, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯೂ ಆಗಬೇಕಿದೆ. ಕೇಂದ್ರ ಸರಕಾರದ ‘ಇಡಬ್ಲುಎಸ್’ನಡಿ ಶೇ.10 ಮೀಸಲಾತಿ ಇದೆ. ಅದನ್ನು ಪಡೆಯುವ ಸಲುವಾಗಿಯಾದರೂ ಕೂಡ ಸಾಮಾಜಿಕ ಆರ್ಥಿಕ ಸ್ಥಿತಿಗತಿಯ ಬಗ್ಗೆ ಸಮೀಕ್ಷೆ, ಅಧ್ಯಯನ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಆಯೋಗವು ಮಾಹಿತಿ ಸಂವಾದ ಕಾರ್ಯಕ್ರಮ ನಡೆಸಲಿದೆ.

- ಕೆ.ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗ

ಬಂಟ ಸಮಾಜದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಆರೋಗ್ಯಕ್ಕೆ ಸಂಬಂಧಿಸಿ ‘ಬಾಂಧವ್ಯ’ ಎಂಬ ಹೆಸರಿನ ಮೂಲಕ ಸಮೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಪ್ರತೀ 5 ಗ್ರಾಮಗಳ ಬಂಟ ಸಮಾಜದ ಜನರನ್ನು ಸೇರಿಸಿ ಬಂಟರ ಗ್ರಾಮಸಭೆ ನಡೆಸುವ ಮೂಲಕ ಬಲಿಷ್ಠ ಸಮಾಜ ಕಟ್ಟಲು ಶ್ರಮಿಸಲಾಗುವುದು.

- ಮಾಲಾಡಿ ಅಜಿತ್ ಕುಮಾರ್ ರೈ ಅಧ್ಯಕ್ಷರು ಬಂಟರ ಯಾನೆ ನಾಡವರ ಮಾತೃ ಸಂಘ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X