Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1975ರ ತುರ್ತು ಪರಿಸ್ಥಿತಿ ಅಪ್ರಸ್ತುತ...

1975ರ ತುರ್ತು ಪರಿಸ್ಥಿತಿ ಅಪ್ರಸ್ತುತ ವಿಷಯ, ಅದನ್ನು ಸಮಾಧಿ ಮಾಡಬೇಕು: ಸಂಜಯ್ ರಾವತ್

"ಈಗಿನ ದೇಶದ ಪರಿಸ್ಥಿತಿಗಿಂತ ತುರ್ತು ಪರಿಸ್ಥಿತಿಯೇ ಚೆನ್ನಾಗಿತ್ತು"

ವಾರ್ತಾಭಾರತಿವಾರ್ತಾಭಾರತಿ7 March 2021 10:35 PM IST
share
1975ರ ತುರ್ತು ಪರಿಸ್ಥಿತಿ ಅಪ್ರಸ್ತುತ ವಿಷಯ, ಅದನ್ನು ಸಮಾಧಿ ಮಾಡಬೇಕು: ಸಂಜಯ್ ರಾವತ್

ಮುಂಬೈ,ಮಾ.7: ಶಿವಸೇನೆ ನಾಯಕ ಸಂಜಯ್ ರಾವತ್ ಅವರು 1975ರ ತುರ್ತು ಸ್ಥಿತಿಯು ಹಳೆಯ,ಈಗ ಅಪ್ರಸ್ತುತವಾಗಿರುವ ವಿಷಯವಾಗಿದ್ದು,ಅದನ್ನು ಸಮಾಧಿ ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಕೇಂದ್ರವನ್ನು ಗುರಿಯಾಗಿಸಿಕೊಂಡು ಅವರು, ದೇಶದಲ್ಲಿಯ ಹಾಲಿ ಸ್ಥಿತಿಯು ಹೇಗಿದೆಯೆಂದರೆ ತುರ್ತು ಸ್ಥಿತಿಯ ದಿನಗಳೇ ಚೆನ್ನಾಗಿದ್ದವು ಎಂದು ಯಾರೂ ಹೇಳಬಹುದು ಎಂದು ಕುಟುಕಿದ್ದಾರೆ.

ತನ್ನ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತುಸ್ಥಿತಿಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಷಾದವನ್ನು ವ್ಯಕ್ತಪಡಿಸಿದ ನಡೆಯನ್ನು ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿನ ತನ್ನ ಸಾಪ್ತಾಹಿಕ ಅಂಕಣ ‘ರೋಖಠೋಕ್’ನಲ್ಲಿ ಪ್ರಶ್ನಿಸಿರುವ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರೂ ಆಗಿರುವ ರಾವುತ್,ತುರ್ತು ಸ್ಥಿತಿಯನ್ನು ಹೇರುವ ನಿರ್ಧಾರಕ್ಕಾಗಿ ಭಾರತೀಯರು ಇಂದಿರಾ ಗಾಂಧಿಯವರನ್ನು ದಂಡಿಸಿದ್ದಾರೆ,ಅವರಿಗೆ ಪಾಠವನ್ನೂ ಕಲಿಸಿದ್ದಾರೆ. ಆದರೆ ನಂತರ ಇಂದಿರಾರನ್ನು ಕ್ಷಮಿಸಿ ಮರಳಿ ಅಧಿಕಾರಕ್ಕೆ ತಂದಿದ್ದರು. ತುರ್ತು ಸ್ಥಿತಿ ಚರ್ವಿತಚರ್ವಣವಾಗಿರುವ ಹಳೆಯ ವಿಷಯ. ಅದನ್ನೇಕೆ ಮತ್ತೆ ಮತ್ತೆ ಕೆದಕುವುದು? ಆ ವಿಷಯವನ್ನು ಶಾಶ್ವತವಾಗಿ ಸಮಾಧಿ ಮಾಡಬೇಕು ಎಂದಿದ್ದಾರೆ.

ರಾಹುಲ್ ನೇರ ನಡೆಯ ಸರಳ ವ್ಯಕ್ತಿಯಾಗಿದ್ದು ಗತ ಘಟನೆಯ ಬಗ್ಗೆ ಅವರು ಸಾಂದರ್ಭಿಕವಾಗಿ ಮಾತನಾಡಿದ್ದರು. ಅವರ ಹೇಳಿಕೆಯು ಈ ವಿಷಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ. 1975ರ ತುರ್ತುಸ್ಥಿತಿಯನ್ನು ಅಭೂತಪೂರ್ವ ಸನ್ನಿವೇಶಗಳಲ್ಲಿ ಹೇರಲಾಗಿತ್ತು. ರಾಜಕೀಯ ಮತ್ತು ಮಾಧ್ಯಮಗಳಲ್ಲಿಯ ಈಗಿನ ಪೀಳಿಗೆಗೆ ಭೂತಕಾಲದ ಬಗ್ಗೆ ಅರಿವಿಲ್ಲ ಮತ್ತು ಅವರ ಮೇಲೆಂದೂ ಯಾವುದೇ ಪರಿಣಾಮವಾಗಿಲ್ಲ ಎಂದ ರಾವತ್, ದೇಶದಲ್ಲಿಯ ಪ್ರಚಲಿತ ಸ್ಥಿತಿ ಹೇಗಿದೆ ಎಂದರೆ 1975ರ ತುರ್ತುಸ್ಥಿತಿಯ ದಿನಗಳೇ ಚೆನ್ನಾಗಿದ್ದವು ಎಂದು ಯಾರೂ ಹೇಳಬಹುದು ಎಂದು ಹೇಳಿದ್ದಾರೆ.

ಚಿತ್ರ ನಿರ್ಮಾಪಕ-ನಿರ್ದೇಶಕ ಅನುರಾಗ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಅವರು ಸರಕಾರದ ನೀತಿಗಳ ವಿರುದ್ಧ ಮಾತನಾಡಿದಾಗ ಅವರ ಮೇಲೆ ಆದಾಯ ತೆರಿಗೆ ಇಲಾಖೆಯ ದಾಳಿಗಳು ನಡೆದಿವೆ ಎಂದು ಬೆಟ್ಟು ಮಾಡಿರುವ ರಾವತ್, ವಾಷಿಂಗ್ಟನ್ ಪೋಸ್ಟ್ ದೇಶದ್ರೋಹ ಆರೋಪದಲ್ಲಿ ಹವಾಮಾನ ಕಾರ್ಯಕರ್ತೆ ದಿಶಾ ರವಿಯವರ ಬಂಧನವನ್ನು ಪ್ರಸ್ತಾಪಿಸಿ ಮೋದಿ ಸರಕಾರದಡಿ ‘ಅಘೋಷಿತ ತುರ್ತು ಸ್ಥಿತಿ’ಯನ್ನು ಪ್ರಶ್ನಿಸಿದೆ ಎಂದು ಹೇಳಿದ್ದಾರೆ.

ಮಾಧ್ಯಮ ಸಂಸ್ಥೆಗಳ ಮೇಲೆ ನಿಯಂತ್ರಣ,ಚುನಾವಣೆಗಳನ್ನು ಗೆಲ್ಲು ಮತ್ತು ಪ್ರತಿಪಕ್ಷಗಳನ್ನು ಒಡೆಯಲು ರಾಜಕೀಯ ತಂತ್ರಗಳು, ಸಂವಿಧಾನದ ನಿಯಮಗಳ ಉಲ್ಲಂಘನೆಗಳು ಇವೆಲ್ಲವೂ ಈಗ 1975ರಲ್ಲಿ ಸಂಭವಿಸಿದ್ದ ರೀತಿಯಲ್ಲಿಯೇ ನಡೆಯುತ್ತಿವೆ. ವ್ಯತ್ಯಾಸವೆಂದರೆ ಇಂದಿರಾ ಗಾಂಧಿಯವರ ಜಾಗದಲ್ಲಿ ನರೇಂದ್ರ ಮೋದಿಯವರಿದ್ದಾರೆ ಎಂದು ರಾವುತ್ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X