Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳೆಯನ್ನು ದೇವರಿಗೆ ಹೋಲಿಸುವ ಬಿಜೆಪಿಗೆ...

ಮಹಿಳೆಯನ್ನು ದೇವರಿಗೆ ಹೋಲಿಸುವ ಬಿಜೆಪಿಗೆ ಸಂಸತ್‍ನಲ್ಲಿ ಮಹಿಳಾ ಮೀಸಲಾತಿ ಮಸೂದೆ ಜಾರಿ ಸಾಧ್ಯವೇ: ಕಲೈಸೆಲ್ವಿ

ವಾರ್ತಾಭಾರತಿವಾರ್ತಾಭಾರತಿ7 March 2021 10:46 PM IST
share

ಬೆಂಗಳೂರು, ಮಾ.7: ಮಹಿಳೆಯನ್ನು ದೇವರಿಗೆ ಹೋಲಿಸುವ, ದೇಶವನ್ನು ತಾಯಿಯೆಂದು ಕರೆಯುವ ಬಿಜೆಪಿ ಸಂಸತ್‍ನಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಸಿದ್ಧವಿದಿಯೇ ಎಂದು ವಿಚಾರವಾದಿ ಕಲೈಸೆಲ್ವಿ ಸವಾಲು ಹಾಕಿದ್ದಾರೆ.

ರವಿವಾರ ಅಖಿಲ ಭಾರತ ವಿಚಾರವಾದಿ ಟ್ರಸ್ಟ್ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಮಹಿಳಾ ಮೀಸಲಾತಿ ಮರಿಚಿಕೆಯೇ? ಎಂಬ ವಿಷಯದ ಕುರಿತು ಮಾತನಾಡಿದ ಅವರು, ಅನಿವಾಸಿ ಭಾರತೀಯ ಮಹಿಳೆಯರ ಸಾಧನೆಗಳನ್ನು ತಮ್ಮದೆಂದು ಕೊಚ್ಚಿಕೊಂಡು ಪ್ರಚಾರ ಮಾಡುವ ಬಿಜೆಪಿ, ದೇಶದೊಳಗಿರುವ ಮಹಿಳೆಯರ ರಾಜಕೀಯ ಸ್ಥಾನಮಾನಗಳಿಗೆ ಶೇ.33ರಷ್ಟು ಮೀಸಲಾತಿಯನ್ನು ಜಾರಿ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ದೇಶದ ನೆರೆಹೊರೆಯ ದೇಶಗಳಾದ ಬಾಂಗ್ಲಾದೇಶ, ಪಾಕಿಸ್ತಾನ, ಅಘ್ಘಾನಿಸ್ತಾನ ಸೇರಿದಂತೆ ಹಲವು ದೇಶಗಳ ಸಂಸತ್‍ಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಆದರೆ, ಭಾರತದಲ್ಲಿ ಮಾತ್ರ ಇದು ಸಾಧ್ಯವಾಗಿಲ್ಲ. ಬ್ರಾಹ್ಮಣಶಾಹಿ ಹಾಗೂ ಪುರುಷ ಪ್ರಧಾನ್ಯತೆ ಚಿಂತನೆಯನ್ನು ಒಳಗೊಂಡಿರುವ ಬಿಜೆಪಿ ಸರಕಾರವಧಿಯಲ್ಲಿ ಇದು ಸಾಧ್ಯವಾಗಲಾರದು ಎಂದು ಅವರು ಅಭಿಪ್ರಾಯಿಸಿದ್ದಾರೆ.

1996ರಲ್ಲಿ ಎಚ್.ಡಿ.ದೇವೇಗೌಡ ಪ್ರಧಾನಮಂತ್ರಿಯಾಗಿದ್ದಾಗ ಮಹಿಳಾ ಮೀಸಲಾತಿ ಮಸೂದೆ ಮಂಡಿಸಲಾಗಿತ್ತು. ನಂತರ ಅದನ್ನು ಜಂಟಿ ಸಂಸದೀಯ ಸಮಿತಿಯ ಪರಾಮರ್ಶೆಗೆ ಒಪ್ಪಿಸಲಾಗಿತ್ತು. ಅಷ್ಟರಲ್ಲಿ ಲೋಕಸಭೆ ವಿಸರ್ಜನೆಯಾಗುವುದರೊಂದಿಗೆ ಮಹಿಳಾ ಮಸೂದೆ ಮೂಲೆಗುಂಪಾಯಿತು. ನಂತರ ಆಟಲ್‍ಬಿಹಾರಿ ವಾಜಪೇಯಿ ಹಾಗೂ ಮನಮೋಹನ್‍ಸಿಂಗ್ ಅವಧಿಯಲ್ಲಿ ಮಸೂದೆಗೆ ಅನುಮೋದನೆ ಪಡೆಯಲು ನಡೆಸಿದ ಪ್ರಯತ್ನ ವಿಫಲವಾಯಿತು. ಈಗ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಬಹುಮತವನ್ನು ಪಡೆದಿದೆ. ಮಹಿಳಾ ಮಸೂದೆಯನ್ನು ಸುಲಭವಾಗಿ ಅಂಗೀಕರಿಸಬಹುದು. ಆದರೆ, ಬಿಜೆಪಿಗೆ ಆ ಬಗ್ಗೆ ಇಚ್ಚಾಶಕ್ತಿಯಿಲ್ಲವೆಂದು ಅವರು ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ ಸಮತಾರಾಣಿ ಪ್ರಸ್ತುತ ಸಂದರ್ಭದಲ್ಲಿ ಧಾರ್ಮಿಕತೆ ಮತ್ತು ಮಹಿಳಾ ಸ್ವಾತಂತ್ರ್ಯ ವಿಷಯದ ಕುರಿತು ಮಾತನಾಡಿ, ಭಾರತದಲ್ಲಿ ವೈದಿಕಶಾಹಿಗಳು ಮಹಿಳೆಯನ್ನು ಮುಕ್ಕೋಟಿ ದೇವರಿಗೆ ಹೋಲಿಸುತ್ತಾ ವಾಸ್ತವದಲ್ಲಿ ಶೋಷಣೆ ಮಾಡುತ್ತಾ ಬರುತ್ತಿದ್ದಾರೆ. ಮಹಿಳೆಗೆ ಯಾವುದೇ ಸ್ವಾತಂತ್ರ್ಯ ಇರುವುದಿಲ್ಲ. ಪುರುಷನ ಅಡಿಯಳಾಗಿ ಬದುಕುವುದೇ ಶ್ರೇಷ್ಠ ಕಾರ್ಯವೆಂದು ಮನುಸ್ಮೃತಿಯಲ್ಲಿ ನಿಯಮ ರೂಪಿಸಲಾಗಿದೆ. ಆಧುನಿಕ ಭಾರತದಲ್ಲಿ ಮನುಸ್ಮೃತಿ ಚಿಂತನಾಧಾರೆಗಳನ್ನು ಜಾರಿ ಮಾಡಲು ಹಿಂದುತ್ವ ಶಕ್ತಿಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಭಾರತಕ್ಕೆ ಬ್ರಿಟಿಷರ ಆಗಮಿಸಿದ ನಂತರ ಸ್ವಲ್ಪಮಟ್ಟಿಗೆ ಬದಲಾವಣೆಯ ಗಾಳಿ ಬೀಸಿತು. ಅದರ ಪರಿಣಾಮವಾಗಿ ಜ್ಯೋತಿ ಬಾಫುಲೆ ಶಿಕ್ಷಿತರಾದರು. ನಂತರ ಸಾವಿತ್ರಿಬಾಫುಲೆಗೆ ಶಿಕ್ಷಣ ಕಲಿಸಿ ಹೆಣ್ಣುಮಕ್ಕಳ ಶಾಲೆಗಳನ್ನು ಪ್ರಾರಂಭಿಸಿದರು. ನಂತರ ಅಂಬೇಡ್ಕರ್ ಮಹಿಳೆಯರ ಪರವಾಗಿ ಹಲವು ಕಾನೂನುಗಳನ್ನು ರೂಪಿಸಿದ್ದರು. ಆದರೆ, ಇವತ್ತಿನ ಮನುವಾದಿಗಳು ಮಹಿಳಾ ಪರವಾದ ಕಾನೂನುಗಳನ್ನು ಸರಿಯಾಗಿ ಜಾರಿ ಮಾಡದೆ, ಶೋಷಣೆಯನ್ನು ಮುಂದುವರಿಸಿದ್ದಾರೆ. ಈ ಮನುವಾದಿ ಹಿಂದುತ್ವ ಶಕ್ತಿಗಳ ವಿರುದ್ದ ನಿರಂತರವಾದ ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಿಚಾರವಾದಿ ಟ್ರಸ್ಟ್ ಅಧ್ಯಕ್ಷ ಪ್ರೊ.ಎ.ಎಸ್.ನಟರಾಜ್, ಖಜಾಂಚಿ ನಾಗೇಂದ್ರಕುಮಾರ, ಉಪಾಧ್ಯಕ್ಷ ಪ್ರಕಾಶ ಹೆಬ್ಬಳ್ಳಿ, ಕಾರ್ಯದರ್ಶಿ ಆರ್.ನಾಗೇಶ ಅರಳಕುಪ್ಪೆ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X