Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಧಿಕ ಮಲಿನ ಸ್ಥಳವಿರುವ ರಾಜ್ಯಗಳ...

ಅತ್ಯಧಿಕ ಮಲಿನ ಸ್ಥಳವಿರುವ ರಾಜ್ಯಗಳ ಪಟ್ಟಿ: ಒಡಿಶಾ, ಉ.ಪ್ರದೇಶ, ದಿಲ್ಲಿಗೆ ಅಗ್ರ 3 ಸ್ಥಾನ

ವಾರ್ತಾಭಾರತಿವಾರ್ತಾಭಾರತಿ7 March 2021 10:58 PM IST
share
ಅತ್ಯಧಿಕ ಮಲಿನ ಸ್ಥಳವಿರುವ ರಾಜ್ಯಗಳ ಪಟ್ಟಿ: ಒಡಿಶಾ, ಉ.ಪ್ರದೇಶ, ದಿಲ್ಲಿಗೆ ಅಗ್ರ 3 ಸ್ಥಾನ

ಹೊಸದಿಲ್ಲಿ, ಮಾ.7: ಅತ್ಯಂತ ಹೆಚ್ಚು ಮಲಿನ ಸ್ಥಳಗಳಿರುವ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಯಲ್ಲಿ ಒಡಿಶಾ ಪ್ರಥಮ, ಉತ್ತರಪ್ರದೇಶ ದ್ವಿತೀಯ ಮತ್ತು ದಿಲ್ಲಿ ತೃತೀಯ ಸ್ಥಾನ ಪಡೆದಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿ ತಿಳಿಸಿದೆ.

ವಿಷಯುಕ್ತ ಮತ್ತು ಹಾನಿಕಾರಕ ಭೌತಿಕ ಅಂಶಗಳನ್ನು ಒಳಗೊಂಡಿರುವ 112 ಸ್ಥಳಗಳು ಭಾರತದಲ್ಲಿವೆ. ಇದಲ್ಲದೆ, ಮಲಿನಗೊಂಡಿರಬಹುದಾದ, ಆದರೆ ಪರಿಶೋಧನೆ ಮತ್ತು ದೃಢೀಕರಣದ ಅಗತ್ಯವಿರುವ 168 ಸ್ಥಳಗಳೂ ದೇಶದಲ್ಲಿವೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿಅಂಶದಲ್ಲಿ ಉಲ್ಲೇಖಿಸಲಾಗಿದೆ. ಒಡಿಶಾದಲ್ಲಿ 23 ಕಲುಷಿತ ಸ್ಥಳಗಳಿದ್ದರೆ ಉತ್ತರಪ್ರದೇಶದಲ್ಲಿ 21, ದಿಲ್ಲಿಯಲ್ಲಿ 11ಕಲುಷಿತ ಸ್ಥಳಗಳಿವೆ. ಅಲ್ಲದೆ 12 ಸ್ಥಳಗಳು ಸಂಭಾವ್ಯ ಕಲುಷಿತ ಸ್ಥಳಗಳ ಪಟ್ಟಿಯಲ್ಲಿವೆ.

ತ್ಯಾಜ್ಯ ಸುರಿಯುವ ಪ್ರದೇಶಗಳು, ತ್ಯಾಜ್ಯ ಸಂಸ್ಕರಣಾ ಪ್ರದೇಶಗಳು, ತಿಪ್ಪೆಗುಂಡಿಗಳು, ಗಣಿಗಾರಿಕೆ ನಡೆದಿರುವ ಪ್ರದೇಶಗಳು, ಸೋರಿಕೆ ಪ್ರದೇಶಗಳು, ರಾಸಾಯನಿಕ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ಪ್ರದೇಶ ಹೊಂದಿರುವ ಸ್ಥಳಗಳನ್ನು ಮಲಿನ ಪ್ರದೇಶ ಎಂದು ಕರೆಯಲಾಗುತ್ತದೆ. ಮನುಷ್ಯರ ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಬೆದರಿಕೆ ಒಡ್ಡುವಂತಹ ವಿಷಕಾರಿ ಮತ್ತು ಅಪಾಯಕಾರಿ ಘಟಕಗಳನ್ನು ಒಳಗೊಂಡಿರುವ ಪ್ರದೇಶಗಳನ್ನು ಕಲುಷಿತ ಅಥವಾ ಮಲಿನ ಸ್ಥಳಗಳೆಂದು ವಿಶ್ಲೇಷಿಸಲಾಗಿದೆ. ಸಂಭವನೀಯ ಕಲುಷಿತ ಪ್ರದೇಶಗಳೆಂದರೆ , ಇಂತಹ ವಿಷಕಾರಿ ಘಟಕಗಳು ಒಳಗೊಂಡಿವೆ ಎನ್ನಲಾದ, ಆದರೆ ವೈಜ್ಞಾನಿಕವಾಗಿ ಸಾಬೀತಾಗದ ಪ್ರದೇಶಗಳು ಎಂದು ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಹಸಿರು ಮಂಡಳಿಯ ಸೂಚನೆಯ ಮೇರೆಗೆ 7 ರಾಜ್ಯಗಳ 14 ಕಲುಷಿತ ಪ್ರದೇಶಗಳನ್ನು ಸ್ವಚ್ಛಗೊಳಿಸುವ ಕಾರ್ಯ ಆರಂಭವಾಗಿದೆ (ಗುಜರಾತ್, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಮತ್ತು ಉತ್ತರಪ್ರದೇಶ) ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X