Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೌದ್ಧ ಎಂದು ಬರೆಸಿ ಸಮಾಜಕ್ಕೆ ಸಂದೇಶ...

ಬೌದ್ಧ ಎಂದು ಬರೆಸಿ ಸಮಾಜಕ್ಕೆ ಸಂದೇಶ ಕಳುಹಿಸುವ ಎದೆಗಾರಿಕೆ ನಿಮ್ಮಲ್ಲಿದೆಯೇ: ಶ್ರೀನಿವಾಸ್‌ ಪ್ರಸಾದ್‌ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ7 March 2021 11:25 PM IST
share
ಬೌದ್ಧ ಎಂದು ಬರೆಸಿ ಸಮಾಜಕ್ಕೆ ಸಂದೇಶ ಕಳುಹಿಸುವ ಎದೆಗಾರಿಕೆ ನಿಮ್ಮಲ್ಲಿದೆಯೇ: ಶ್ರೀನಿವಾಸ್‌ ಪ್ರಸಾದ್‌ ಪ್ರಶ್ನೆ

ಚಾಮರಾಜನಗರ: ಜಾತಿ ಜನಗಣತಿ ಸಂದರ್ಭದಲ್ಲಿ ನಾನು ‘ಬೌದ್ಧ’ ಎಂದು ಅಂತ ಬರೆಸಿದೆ. ಆದರೆ ಸಮುದಾಯದ ಇತರೆ ಎಷ್ಟು ಮಂದಿ ಧರ್ಮದ ಕಾಲಂನಲ್ಲಿ ‘ಬುದ್ಧಿಷ್ಟ್‌’ ಅಂತ ಬರೆಸಿದ್ದೀರಿ? ಎಷ್ಟು ಜನ ಕಾರ್ಯರೂಪಕ್ಕೆ ತಂದಿದ್ದೀರಿ. ಬೌದ್ಧ ಎಂದು ಬರೆಸಿ ಸಮಾಜಕ್ಕೆ ಸಂದೇಶ ಕಳುಹಿಸುವ ಎದೆಗಾರಿಕೆ ನಿಮ್ಮಲ್ಲಿದೆಯೇ ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಪ್ರಶ್ನಿಸಿದರು.

ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಭೀಮಮಂದಿರ ಕಟ್ಟಡ ಹಾಗೂ ಅಂಬೇಡ್ಕರ್‌ ಪುತ್ಥಳಿ ನಿರ್ಮಾಣದ ಶಂಕುಸ್ಥಾಪನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೊರೋನ ಕಾರಣದಿಂದ ಅನುದಾನ ಬಿಡುಗಡೆಯಾಗಿಲ್ಲ. ಆರ್ಥಿಕ ಪರಿಸ್ಥಿತಿ ಸುಧಾರಿಸಿ ಅನುದಾನ ಬಿಡುಗಡೆಯಾದಾಗ ಗ್ರಾಮದಲ್ಲಿ ಭೀಮ ಮಂದಿರ ನಿರ್ಮಾಣಕ್ಕೆ 10 ಲಕ್ಷ ರೂ. ಅನುದಾನ ನೀಡಲಾಗುವುದು. ಅಲ್ಲದೇ ಭೀಮಮಂದಿರಕ್ಕಾಗಿ ಇತರೆ ಇಲಾಖೆಯಿಂದ ಅನುದಾನ ಕೊಡಿಸಲು ಶಕ್ತಿ ಮೀರಿ ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.

ಭೀಮ ಮಂದಿರ ಯಾವ ರೀತಿ ಇರಬೇಕು. ಯಾವ ರೀತಿ ಕಟ್ಟಬೇಕು ಎಂಬ ಯೋಜನೆ ರೂಪಿಸಬೇಕು. ನಮ್ಮಲ್ಲಿ ನಾಯಕರ ಕೊರತೆ ಇಲ್ಲ. ಆದರೆ ಮನಸ್ಸು ಮಾಡಬೇಕು. ಮನಸ್ಸು ಮಾಡಿದರೆ ನಿಮ್ಮ ಕನಸಿನ ಭೀಮ ಮಂದಿರ ನಿರ್ಮಾಣ ಕಷ್ಟವೇನಲ್ಲ. ನಾವೆಲ್ಲರೂ ಒಟ್ಟಾಗಿ ಪ್ರಯತ್ನಿಸೋಣ ಎಂದು ಸಲಹೆ ನೀಡಿದರು.

ಅಂಬೇಡ್ಕರ್‌ ಅವರು ವಿಶ್ವವಿಜ್ಞಾನಿಯಾಗಿ ಜಗತ್ತಿನಲ್ಲಿ ಉತ್ತಮ ಹೆಸರು ಪಡೆದಿದ್ದಾರೆ. ಜಗತ್ತಿನಲ್ಲಿ ಮೊದಲು ಸಮಾನತೆ ಪ್ರಸ್ತಾಪಿಸಿದ್ದು ಅಬ್ರಹಂ ಲಿಂಕನ್. ನಂತರದ ಸ್ಥಾನ ಅಂಬೇಡ್ಕರ್‌ ಅವರಿಗೆ ಸಲ್ಲಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ ಮೊದಲು ಸಮಾನತೆ ಪ್ರಸ್ತಾಪಿಸಿ, ಪ್ರತಿಪಾದಿಸಿ, ಅದಕ್ಕೆ ಸಂವಿಧಾನದದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದು ಅಂಬೇಡ್ಕರ್‌ ಎಂದು ಅವರು ಬಣ್ಣಿಸಿದರು.

ನಾವು ಯಾವುದೇ ಸಂದರ್ಭದಲ್ಲಿ ಎದೆಗುಂದಬಾರದು ಹಾಗೂ ಹೆದರಬಾರದು. ಎಲ್ಲವನ್ನೂ ಎದುರಿಸುವ ಶಕ್ತಿಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟಿದ್ದಾರೆ. ಚಿತ್ರಹಿಂಸೆ, ಬೆಂಕಿಯ ಜ್ವಾಲೆಯಿಂದ ಎದ್ದು ಬಂದ ಅಂಬೇಡ್ಕರ್ ನಿಜವಾದ ಮಹಾನಾಯಕ. ಅವರು ನಮಗೆ ಆದರ್ಶವಾಗಬೇಕು‌. ಅವರ ಹೆಸರಿನಲ್ಲಿ ಮಂದಿರ ಕಟ್ಟಿ ಎಂದು ಹೇಳಿದರು.

ಡಾ.ನಂಜರಾಜು ಹೊಂಗನೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ನಳಂದ ವಿಶ್ವವಿದ್ಯಾಲಯದ ಪ್ರಧಾನ ಕಾರ್ಯದರ್ಶಿ ಬೋಧಿದತ್ತ ಮಹಾಥೇರಾ ಸಾನಿಧ್ಯ ವಹಿಸಿದ್ದರು.

ಶಾಸಕ ಎನ್.ಮಹೇಶ್, ಕಾಂಪೋಸ್ಟ್ ನಿಗಮದ ಅಧ್ಯಕ್ಷ ಎಸ್.ಮಹದೇವಯ್ಯ, ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ, ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಸ್.ಬಾಲರಾಜು, ಎಸ್.ಜಯಣ್ಣ, ಪೊಲೀಸ್ ಇನ್ ಸ್ಪೆಕ್ಟರ್ ಬಿ.ಪುಟ್ಟಸ್ವಾಮಿ, ತಾಪಂ ಸದಸ್ಯ ಮಹದೇವಯ್ಯ, ಮಾಜಿ ನಗರಸಭಾ ಅಧ್ಯಕ್ಷ ನಂಜುಂಡಸ್ವಾಮಿ,ದಲಿತ ಮುಖಂಡರಾದ ವೆಂಕಟರಮಣಸ್ವಾಮಿ (ಪಾಪು), ಪಿ.ನಂಜಯ್ಯ, ಕಿನಕನಹಳ್ಳಿ ರಾಚಯ್ಯ, ಡಿ.ಎನ್.ನಟರಾಜು, ಗ್ರಾಪಂ ಅಧ್ಯಕ್ಷ ರವಿಕುಮಾರ್, ಸದಸ್ಯರಾದ ಕವಿತಾ ನಟರಾಜು, ನಿರ್ಮಲರಾಮು, ಚಾಮದಾಸಯ್ಯ, ರೂಪ ಮೋಹನ್ ಕುಮಾರ್, ಪದ್ಮ, ರಾಜಮ್ಮ, ಮಣಿಕಂಠಸ್ವಾಮಿ, ಶೈಲಜಾ, ಶಂಕರ ಸಿ., ನಾಗರತ್ಮಮ್ಮ, ಶಿವಣ್ಣೇಗೌಡ, ದಸಂಸ ಜಿಲ್ಲಾ ಸಂಚಾಲಕ ಆಲೂರು ನಾಗೇಂದ್ರ, ಯಜಮಾನರಾದ ಶ್ರೀನಿವಾಸ, ಎಂ.ವೀರಣ್ಣ ಭೀಮಮಂದಿರ ನಿರ್ಮಾಣ ಸಮಿತಿಯ ಸುಗಂಧರಾಜು,ಎಚ್.ಆರ್.ಮಹದೇವಸ್ವಾಮಿ, ನಾಗಯ್ಯ, ಕೆಂಪರಾಜು ಕಾರ್ಯಕ್ರಮದಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X