Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ದೇವಸ್ಥಾನದ ಕಾಣಿಕೆ ಡಬ್ಬಿ,...

ಮಂಗಳೂರು : ದೇವಸ್ಥಾನದ ಕಾಣಿಕೆ ಡಬ್ಬಿ, ದ್ವಿಚಕ್ರ ವಾಹನ ಕಳವು ಪ್ರಕರಣ; ಬಜರಂಗದಳ ಸಂಚಾಲಕ ಸೆರೆ

ವಾರ್ತಾಭಾರತಿವಾರ್ತಾಭಾರತಿ8 March 2021 2:40 PM IST
share
ಮಂಗಳೂರು : ದೇವಸ್ಥಾನದ ಕಾಣಿಕೆ ಡಬ್ಬಿ, ದ್ವಿಚಕ್ರ ವಾಹನ ಕಳವು ಪ್ರಕರಣ; ಬಜರಂಗದಳ ಸಂಚಾಲಕ ಸೆರೆ

ಮಂಗಳೂರು : ದೇವಸ್ಥಾನದ ಕಾಣಿಕೆ ಡಬ್ಬಿ ಕಳವು, ದ್ವಿಚಕ್ರ ವಾಹನ ಕಳವು ಸೇರಿದಂತೆ‌ ಹಲವಾರು ಕಳ್ಳತನ ಪ್ರಕರಣದ ಆರೋಪಿ, ಸಂಘಪರಿವಾರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಕೊಣಾಜೆಯ ಮೊಂಟೆಪದವು ಬಳಿ ಸ್ಥಳೀಯರು ಹಿಡಿದು ಕೊಣಾಜೆ ಪೊಲೀಸ್ ಠಾಣೆಗೆ ಒಪ್ಪಿಸಿರುವ ಘಟನೆ ರವಿವಾರ ರಾತ್ರಿ ನಡೆದಿದೆ.

ಮೊಂಟೆಪದವಿನ ತಾರಾನಾಥ ಯಾನೆ ಮೋಹನ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮೊಂಟೆಪದವಿನ ಮನೆಯೊಂದರ ಅಂಗಳದಲ್ಲಿದ್ದ ಸ್ಕೂಟರ್ ಕಳವು ಮಾಡಿ ಪರಾರಿಯಾಗಿದ್ದು, ಮನೆಮಂದಿ ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಹಲವು ಮಂದಿಯ ಜೊತೆ ಚರ್ಚಿಸಿದಾಗ ಆರೋಪಿ ತಾರಾನಾಥ ಎಂಬುದನ್ನು ಖಚಿತಪಡಿಸಿಕೊಂಡು‌ ರವಿವಾರ ರಾತ್ರಿ ಆತನ ಮನೆಗೆ ಹೋದಾಗ ಪರಾರಿಯಾಗಲು ಯತ್ನಿಸಿದ್ದು, ಬೆನ್ನಟ್ಟಿದ್ದ ಸಾರ್ವಜನಿಕರು ತಾರಾನಾಥನನ್ನು ಹಿಡಿದು ಕೊಣಾಜೆ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ದೇವಸ್ಥಾನದ ಕಾಣಿಕೆ ಡಬ್ಬಿ, ಮನೆಗಳಿಗೂ ನುಗ್ಗಿ ಕಳ್ಳತನ

ತಾರಾನಾಥ ಹಲವು ಮನೆಗಳಿಂದ ಚಿನ್ನಾಭರಣ, ಅಡಕೆ ಮೂಟೆ, ತನ್ನ ಮಿತ್ರರ ವಾಹನಗಳಿಂದಲೇ ಪೆಟ್ರೋಲ್ ಕಳವು ಮಾತ್ರವಲ್ಲದೆ ಸ್ಥಳೀಯ ದೇವಸ್ಥಾನವೊಂದರ ಕಾಣಿಕೆ ಡಬ್ಬಿಯ ಹಣವನ್ನೂ ಕಳವು ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಗಂಗರಮಜಲು ಪರಿಸರದ ಬಡ ಕುಟುಂಬದ ಮನೆಯಲ್ಲಿ  ತಾರಾನಾಥ ಕಳ್ಳತನಕ್ಕೆ ಯತ್ನಿಸಿದ್ದು, ಮನೆ ಮಂದಿ ಎಚ್ಚರಗೊಂಡಿದ್ದರಿಂದ ತಾನು ಬಂದಿದ್ದ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದ. ಪೊಲೀಸರಿಗೆ ಹೆದರಿ ಠಾಣೆಗೆ ಹಾಜರಾದ ಆತನನ್ನು ಕೊಣಾಜೆ ಪೊಲೀಸರು ಮುಚ್ಚಳಿಕೆ ಬರೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದರು.

ಆರೋಪಿ ತಾರನಾಥ ಮೊಂಟೆಪದವು ಶಾರದಾನಗರದ ವಿಶ್ವ ಹಿಂದೂ ಪರಿಷತ್, ಬಜರಂಗದಳ ವೀರಾಂಜನೇಯ ಶಾಖೆಯ ಸಂಚಾಲಕನೂ ಆಗಿದ್ದ. ಅಲ್ಲದೆ ಪರಿಸರದಲ್ಲಿ ಸಂಘಪರಿವಾರ ಸಂಘಟನೆಯ ನೇತೃತ್ವದಲ್ಲಿ ‌ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದ ಎಂದು ತಿಳಿದುಬಂದಿದೆ.

ಕಳ್ಳತನ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದ ಬಳಿಕ ಈತನನ್ನು ಸಂಘಟನೆಯಿಂದ ದೂರವಿಡಲಾಗಿದೆ ಎಂದು ತಿಳಿದುಬಂದಿದ್ದು, ಆ ಬಳಿಕ ಸುಮಾರು ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ತಾರಾನಾಥ ತನ್ನ‌ ಕೃತ್ಯ ಮತ್ತೆ ಮುಂದುವರಿಸಿದ್ದು, ಶನಿವಾರ ನಡೆದ ಸ್ಕೂಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕರು ಆತನನ್ನು ಹಿಡಿದು ಕೊಣಾಜೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X